ವಿಜಯಪಥ ವರದಿ ಪರಿಣಾಮ: ವರದಿ ಬಂದ ಅರ್ಥಗಂಟೆಯಲ್ಲಿ ಹಣ ಪಾವತಿ ಸಂಬಂಧ ಲೆಕ್ಕಾಧಿಕಾರಿಗೆ ಟಿಪ್ಪಣಿ ಬರೆದ ಡಿಸಿ

ವಿಜಯಪುರ: KKRTC ವಿಜಯಪುರ: ನಿವೃತ್ತ ನೌಕರನಿಗೆ 29ಲಕ್ಷ ಕೊಡುವಂತೆ ಹೈ ಕೋರ್ಟ್ ತೀರ್ಪು- ಈ ಆದೇಶವನ್ನೇ ಉಲ್ಲಂಘಿಸುತ್ತಿರುವ ಡಿಸಿ! ಎಂಬ ಶೀರ್ಷಿಕೆಯಡಿ ವಿಜಯಪಥ ದಲ್ಲಿ ವರದಿ ಬಂದ ಕೇವಲ ಅರ್ಧಗಂಟೆಯಲ್ಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನಿವೃತ್ತ ಚಾಲಕ ಹುಂಡೆಕಾರ ಅವರಿಗೆ ಬರಬೇಕಿರುವ ಹಣವನ್ನು ಜಮಾ ಮಾಡುವಂತೆ ವಿಭಾಗದ ಲೆಕ್ಕಾಧಿಕಾರಿಗೆ ತಿಳಿಸಿದ್ದಾರೆ.
ಈ ಬಗ್ಗೆ ಲೆಕ್ಕಾಧಿಕಾರಿಗೆ ಟಿಪ್ಪಣಿ ಬರೆದಿರುವ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಅವರು ನ್ಯಾಯಾಲಯದ ಆದೇಶಗಳಂತೆ ನ್ಯಾಯಾಲಯಕ್ಕೆ ಹಣ ಜಮಾ ಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ.
ಸಂಸ್ಥೆಯ ವಿಜಯಪುರ ವಿಭಾಗದಲ್ಲಿ ಅವಶ್ಯಕ ಬೇಡಿಕೆಗಳಿಗೆ ಸಂಬಂಧಿಸಿದಂತೆ, ಹಣವನ್ನು ಕೇಂದ್ರ ಕಚೇರಿಯ ಸೂಚನೆಗಳಂತೆ ಪಾವತಿ ಮಾಡಲಾಗುತ್ತಿದೆ. ನ್ಯಾಯಾಲಯದ ಪ್ರಕರಣಗಳಲ್ಲಿ ಕಾನೂನು ಅಧಿಕಾರಿಗಳ ಸಹಯೋಗದಲ್ಲಿ ಜಪ್ತಿ ಆದೇಶ ಆದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಣ ಜಮಾ ಮಾಡುತ್ತಿದ್ದು, ಉಳಿದಂತೆ, ಜೇಷ್ಠತೆ ಪ್ರಕಾರ ಯಾವುದೇ ತಾರತಮ್ಯವಿಲ್ಲದೆ ನ್ಯಾಯಾಲಯಗಳಿಗೆ ಹಣ ಜಮೆ ಮಾಡತಕ್ಕದ್ದು, ವಿಭಾಗದಲ್ಲಿ ಹಣ ಕೊರತೆ ಇದ್ದಾಗ ಕೇಂದ್ರ ಕಚೇರಿಗೆ ಪಾವತಿ ಕುರಿತು ಪತ್ರ ಬರೆಯಬೇಕು ಹಾಗೂ ತುರ್ತು ಖರ್ಚಿನ ಸಂಬಂಧ ಕೇಂದ್ರ ಕಚೇರಿಗೆ ವಿವರಿಸಿ ಹಣವನ್ನು ಒದಗಿಸಲು ಕ್ರಮ ತೆಗೆದುಕೊಳ್ಳುವುದು ಎಂದು ವಿವರಿಸಿದ್ದಾರೆ.
ಇದರ ಜತೆಗೆ ಈ ದಿನ ನನಗೆ ಬಿ.ಎನ್.ಹುಂಡೆಕಾರ ಅವರಿಗೆ ಸಂಬಂಧಿಸಿದಂತೆ, WP203353/2019 ಪ್ರಕರಣದಲ್ಲಿ ಹಣ ಜಮಾ ಮಾಡಿಲ್ಲವೆಂದು ಮತ್ತು ಕೂಡಲೇ ಹಣ ಪಾವತಿಯ ಕುರಿತು ಕ್ರಮ ತೆಗೆದುಕೊಳ್ಳಲು ಮಾಧ್ಯಮದವರು ದೂರವಾಣಿ ಮೂಲಕ ತಿಳಿಸಿದ್ದಾರೆ.
ವಿಭಾಗದ ಖರ್ಚಿನ ಬಾಬುಗಳ ಬೇಡಿಕೆಗಳ ಕುರಿತು ತಾವು, ವಿಭಾಗೀಯ ತಾಂತ್ರಿಕ ಶಿಲ್ಪಿ ಮತ್ತು ಸಹಾಯಕ ಉಗ್ರಾಣ ಅಧಿಕಾರಿಗಳ ಸಹಯೋಗದೊಂದಿಗೆ ಪಾರದರ್ಶಕವಾಗಿ ಹಣ ಪಾವತಿ ಮಾಡಲಾಗುತ್ತಿದೆ. ಅದೇ ರೀತಿ ನ್ಯಾಯಾಲಯದ ಪ್ರಕರಣಗಳಲ್ಲಿಯೂ ಸಹ ಜೇಷ್ಠತೆ ಆಧಾರದಲ್ಲಿ ಕಾನೂನು ಅಧಿಕಾರಿಗಳ ಸಹಯೋಗದೊಂದಿಗೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ನ್ಯಾಯಾಲಯಗಳಿಗೆ ಹಣ ಜಮಾ ಮಾಡಲು ಕ್ರಮ ತೆಗೆದುಕೊಳ್ಳಬೇಕು.
ಒಂದು ವೇಳೆ ಹಣದ ಕೊರತೆ ಇದಲ್ಲಿ ಕೇಂದ್ರ ಕಚೇರಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಬೇಕು ಎಂದು ವಿಜಯಪುರ ವಿಭಾಗ ವಿಭಾಗೀಯ ಕಚೇರಿ ಲೆಕ್ಕಾಧಿಕಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
Related

You Might Also Like
KSRTC: ಸರ್ಕಾರ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಡಲೇ ಬೇಕು- ಏಕೆಂದರೆ ELಗೆ ಶೇ.15ರಷ್ಟು ಹೆಚ್ಚುವರಿ…!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಮಾರ್ಚ್ 2023ರಲ್ಲಿ ಅಂದಿನ ಬಿಜೆಪಿ ಸರ್ಕಾರ 2020 ಜನವರಿ 1ರಿಂದ ಅನ್ವಯವಾಗುವಂತೆ ಘೋಷಣೆ ಮಾಡಿರುವ ಶೇ.15ರಷ್ಟು...
ಎಲ್ಲವೂ ಕೋರ್ಟ್ನಲ್ಲಿ ಇತ್ಯರ್ಥ ಆಗತ್ತೆ: 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಮ್ಯಾನೇಜರ್ ಸ್ಪಷ್ಟನೆ
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ವಿರುದ್ಧ ಈಗ 3.15 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿ ಬಂದಿದೆ. 2016ರ ಜಗ್ಗು ದಾದ ಸಿನಿಮಾ ನಿರ್ದೇಶಕ ಹಾಗೂ...
ಕುಡಿದು ಠಾಣೆಗೆ ನುಗ್ಗಿ ಪೊಲೀಸರಿಗೇ ಅವಾಜ್ ಹಾಕಿ ಅಧಿಕಾರಿ ಸಹೋದರನ ರಂಪಾಟ
ಗದಗ: ಪೊಲೀಸ್ ಅಧಿಕಾರಿ ಸಹೋದರನೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರಿಗೆ ಅವಾಜ್ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಕಿರಿಕ್ ಮಾಡಿಕೊಂಡ ಘಟನೆ ಬೆಟಗೇರಿ ಪೊಲೀಸ್...
ನಟ ಧ್ರುವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: FIR ದಾಖಲು
ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದಾಗಿ ನಂಬಿಸಿ 3.15 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪದಡಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ...
KSRTC ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಸಿಬ್ಬಂದಿ ಮಂಜುನಾಥ್ ಅಮಾನತು: ಎಸ್ಪಿ ಆದೇಶ
ಕೂಡ್ಲಿಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕರ್ತವ್ಯ ನಿರತ ಚಾಲಕನ ಮೇಲೆ ಮನಬಂದಂತೆ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಮಂಜುನಾಥ್ ಚಪ್ಪಲಿಯಿಂದ ಹಲ್ಲೆ ಮಾಡಿದ್ದ. ಈ ಸಂಬಂಧ ಇಂದು...
ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಸಮಾಧಿ ತೆರವು- ಅಭಿಮಾನಿಗಳ ಆಕ್ರೋಶ
ಬೆಂಗಳೂರು: ರಾತ್ರೋರಾತ್ರಿ ಅಭಿಮಾನಿಗಳ ವಿರೋಧದ ನಡುವೆಯೂ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ...
ವೈ.ರಾಮಕೃಷ್ಣರ ಸೇವೆ-ಹೋರಾಟ ಇಂದಿಗೂ ಸ್ಮರಣೀಯ: ಸಚಿವ ಮುನಿಯಪ್ಪ
ಮೈಸೂರು: ಅನೇಕ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ವೈ.ರಾಮಕೃಷ್ಣ ಮೂಡಿಸಿದ್ದು, ಅವರ ಸೇವೆ ಮತ್ತು ಹೋರಾಟ ಇಂದಿಗೂ ಸಹ ಸ್ಮರಣೀಯವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು...
ಲಾಲ್ಬಾಗ್: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್ಬಾಗ್ನಲ್ಲಿ ಆಯೋಜಿಸಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಅವರ...