NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ :  ಬೈರಣ್ಣ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೊಷಣೆ ಮಾಡಿರುವಂತೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ ಸರಿಸಮಾನ ವೇತನ ನೀಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಬೈರಣ್ಣ ಒತ್ತಾಯಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು, ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವದಲ್ಲಿ ಸುಮಾರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದರಂತೆ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ.

ಚುನಾವಣಾ ಪೂರ್ವದಲ್ಲಿ ಮಾಡಿದಂತಹ ಘೋಷಣೆಗಳ ಎಲ್ಲ ಗ್ಯಾರಂಟಿಗಳನ್ನು ತಾವು ಅನುಷ್ಠಾನಕ್ಕೆ ತಂದು ಆ ಘೋಷಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ಸರ್ಕಾರಿ ನೌಕರರರ ವೇತನಕ್ಕೆ ಸರಿಸಮಾನವಾಗಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ರು,  ಸಾರಿಗೆ ಸಂಸ್ಥೆ ನೌಕರರಿಗೆ ಯಾಕೆ ಇನ್ನೂ ಅನುಷ್ಠಾನಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ಶಕ್ತಿ ಯೋಜನೆ ಬಂದಮೇಲೆ ಸಾರಿಗೆ ಸಂಸ್ಥೆಗೆ ಅಧಿಕ ಲಾಭ ಬಂದಿದೆ ಅಂತ ನಮ್ಮ ಸಾರಿಗೆ ಸಚಿವರು ಪದೇಪದೇ ಹೇಳ್ತಾ ಇದ್ದಾರೆ. ಆದಾಯ ಬಂದರು ಸಹ ಬಾಕಿ 38 ತಿಂಗಳ ವೇತನ ಮತ್ತೆ 1/1 2024 ರಿಂದ ವೇತನ ಪರಿಷ್ಕರಣೆಯನ್ನು ಮಾಡಿಲ್ಲ. ಎಲ್ಲ ಇಲಾಖೆಗಳಿಗೂ ಸಂಬಳವನ್ನು ಹೆಚ್ಚು ಮಾಡ್ತಾ ಬಂದು ನಮ್ಮ ಸಾರಿಗೆ ಸಂಸ್ಥೆ ನೌಕರರಿಗೆ ಮಾತ್ರ ಮಾಡದೆ ತಾರತಮ್ಯವನ್ನು ತೋರಿಸ್ತಾ ಇದ್ದೀರಿ ಯಾಕೆ ಅಂತ ನಮಗೆ ಇನ್ನು ಗೊತ್ತಾಗಿಲ್ಲ.

ನೋಡಿ ಈ ಸಂಸ್ಥೆಯ ನೌಕರರು ಹಗಲು ರಾತ್ರಿ ಅನ್ನ, ನಿದ್ದೆ ಇಲ್ಲದೆ ಸರಿಯಾದ ಸಮಯಕ್ಕೆ ಊಟ, ತಿಂಡಿ ಇಲ್ಲದೆ ದುಡಿತಾ ಇರ್ತಕ್ಕಂತ ವರ್ಗ, ಸಾರಿಗೆ ಸಂಸ್ಥೆಯ ನೌಕರರು. ಇವರ ದುರಿತದಿಂದ ಸಾರಿಗೆ ಸಂಸ್ಥೆ ಚೆನ್ನಾಗಿದೆ. ಹೀಗಾಗಿ ತಾವು ಏನು ಘೋಷಣೆ ಮಾಡಿದ್ದೀರಿ ಅದನ್ನು ಅನುಷ್ಠಾನಕ್ಕೆ ತರಬೇಕು ಅಂತ ಮನವಿ ಮಾಡಿದ್ದಾರೆ.

ಇನ್ನು ಮುಂದೆ ನಾಲ್ಕು ಸಾರಿಗೆ ನಿಗಮಗಳಿಗೂ ಒಂದನೇ ತಾರೀಖು ಸಂಬಳವನ್ನು ನಿಗದಿ ಮಾಡಿ ಜತೆಗೆ ಸಮರ್ಪಕವಾಗಿ ಜಾರಿಗೆ ತರುವ ಮೂಲಕ ನೌಕರರಲ್ಲಿ ನಾವೆಲ್ಲ ಒಂದೇ ಸಂಸ್ಥೆಯ ನೌಕರರು ಎಂಬ ಆಶಾ ಭಾವನೆ ಮೂಡಿಸಿ ಉತ್ಸಾಹ ತುಂಬಬೇಕು ಎಂದು ಒತ್ತಾಯಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...