ಏ.15ರಂದು ನಡೆದ KSRTC ಸಂಘಟನೆಗಳ ಸಭೆಯಲ್ಲಿ ಕೊಟ್ಟ ಭರವಸೆ ಶೀಘ್ರ ಜಾರಿಗೆ ತನ್ನಿ: ಸಿಎಂಗೆ ನೌಕರರ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೂ ಉಳಿದ 70 ನಿಗಮಗಳಿಗೆ ನೀಡುವ ವೇತನದಂತೆ ಹಾಗೂ ತಮ್ಮ ಪ್ರಣಾಳಿಕೆಯಂತೆ ಸರಿ ಸಮಾನ ವೇತನ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಸಮಸ್ತ ಸಾರಿಗೆ ನೌಕರರು ಮನವಿ ಮಾಡಿದ್ದಾರೆ.
ತಾವು ನಮ್ಮ ನೌಕರರ ಸಂಘಟನೆಗಳೊಂಗೆ ಇದೇ ಏ.15ರಂದು ಸಂಜೆ ನಡೆಸಿದ ಸಭೆಯಲ್ಲಿ ಸರಿ ಸಮಾನ ವೇತನ ಸೇರಿ ಇತರೆ ನಿಮ್ಮ ಬೇಡಿಕೆಗಳನ್ನು ಅತೀ ಶೀಘ್ರದಲ್ಲೇ ಈಡೇರಿಸುತ್ತೇವೆ ಎಂದು ಭರವಸೆ ನೀಡಿರುವುದಾಗಿ ನೀವೆ ಮಾಧ್ಯಮಗಳಿಗೆ ತಿಳಿಸಿದ್ದೀರಿ. ಅದರಂತೆ ನಮಗೆ ಸರಿ ಸಮಾನ ವೇತನವನ್ನು ಜಾರಿ ಮಾಡಬೇಕು ಎಂದು ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನಮಗೂ ವೇತನ ಆಯೋಗದಂತೆ ವೇತನ ನೀಡಿದರೆ ಕಾಂಗ್ರೆಸ್ ಪಕ್ಷವು ಮತ್ತಷ್ಟು ಅವಧಿಗಳಿಗೆ ಆಯ್ಕೆ ಆಗುವುದು ಖಚಿತ ಹಾಗೂ ನಿಗಮದ 1.20 ಲಕ್ಷ ನೌಕರರು ಮತ್ತು ಕುಟುಂಬ ವರ್ಗವು ಸೇರಿದಂತೆ ದುಡಿಯುವ ವರ್ಗದ ಎಲ್ಲ ಮತದಾರರ ಒಲವು ಜೀವನಪೂರ್ತಿ ತಮ್ಮ ಮೇಲೆ ಇರುತ್ತದೆ ಎಂದು ಹೇಳಿದ್ದಾರೆ.
ಇನ್ನು ತಮ್ಮ ಸರ್ಕಾರದ ಕುರಿತು ಪ್ರಚಾರದ ಮಾಧ್ಯಮವಾಗಿ ಸಾರಿಗೆಯ ಚಾಲಕರು ಪ್ರಯಾಣಿಕರಿಗೆ ರಾಜ್ಯದ ಉದ್ದಗಲಕ್ಕೂ ಪ್ರಯಾಣದ ವೇಳೆಯಲ್ಲಿ ಅಬ್ಬರದ ಪ್ರಚಾರ ಮತ್ತು ಮಾತುಕತೆಯ ಮೂಲಕ ಮಾಡುತ್ತಾರೆ. ಇದು ಒಂದು ರೀತಿಯಲ್ಲಿ ಖರ್ಚುರಹಿತ ತಮ್ಮ ಸರ್ಕಾರದ ಕುರಿತು ಮಾಧ್ಯಮದ ಪ್ರಚಾರದಂತೆ ಆಗುತ್ತದೆ ಎಂದಿದ್ದಾರೆ.
ಇತಿಹಾಸವನ್ನು ತಿರುವುಹಾಕಿದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಲಾಭ ಮಾಡಿದ ಪಕ್ಷವು ಬಹುತೇಕ ಲಾಭವನ್ನೇ ನೋಡಿದೆ. ಆದ್ದರಿಂದ ದಯಮಾಡಿ 70 ನಿಗಮಗಳು ಮತ್ತು ಸರ್ಕಾರದ ಇಲಾಖೆಗಳಿಗೆ ನೀಡುವ ವೇತನ ಆಯೋಗದಂತೆ ಸಾರಿಗೆ ಸಂಸ್ಥೆಯ ನೌಕರರಿಗೂ ಸಹ ವೇತನ ಆಯೋಗ ಜಾರಿ ಮಾಡಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇವೆ.
ದಯವಿಟ್ಟು ಭ್ರಷ್ಟ ಸಂಘಟನೆಗಳ ದಲ್ಲಾಳಿಗಳ ಮುಖ ನೋಡಬೇಡಿ ಸಾರಿಗೆ ಸಂಸ್ಥೆ ನಿಷ್ಠಾವಂತ ನೌಕರರ ಮುಖ ನೋಡಿ ವೇತನ ಆಯೋಗ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು, ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಜಾರಿ ಮಾಡಿ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಕೂಡಲೇ ಬಿಡುಗಡೆ ಮಾಡಲು ಆದೇಶ ಹೊರಡಿಸಿ ಎಂದು ಕೇಳಿಕೊಂಡಿದ್ದಾರೆ.

Related


You Might Also Like
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...