ಏ.15ರಂದು ನಡೆದ KSRTC ಸಂಘಟನೆಗಳ ಸಭೆಯಲ್ಲಿ ಕೊಟ್ಟ ಭರವಸೆ ಶೀಘ್ರ ಜಾರಿಗೆ ತನ್ನಿ: ಸಿಎಂಗೆ ನೌಕರರ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೂ ಉಳಿದ 70 ನಿಗಮಗಳಿಗೆ ನೀಡುವ ವೇತನದಂತೆ ಹಾಗೂ ತಮ್ಮ ಪ್ರಣಾಳಿಕೆಯಂತೆ ಸರಿ ಸಮಾನ ವೇತನ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಸಮಸ್ತ ಸಾರಿಗೆ ನೌಕರರು ಮನವಿ ಮಾಡಿದ್ದಾರೆ.
ತಾವು ನಮ್ಮ ನೌಕರರ ಸಂಘಟನೆಗಳೊಂಗೆ ಇದೇ ಏ.15ರಂದು ಸಂಜೆ ನಡೆಸಿದ ಸಭೆಯಲ್ಲಿ ಸರಿ ಸಮಾನ ವೇತನ ಸೇರಿ ಇತರೆ ನಿಮ್ಮ ಬೇಡಿಕೆಗಳನ್ನು ಅತೀ ಶೀಘ್ರದಲ್ಲೇ ಈಡೇರಿಸುತ್ತೇವೆ ಎಂದು ಭರವಸೆ ನೀಡಿರುವುದಾಗಿ ನೀವೆ ಮಾಧ್ಯಮಗಳಿಗೆ ತಿಳಿಸಿದ್ದೀರಿ. ಅದರಂತೆ ನಮಗೆ ಸರಿ ಸಮಾನ ವೇತನವನ್ನು ಜಾರಿ ಮಾಡಬೇಕು ಎಂದು ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನಮಗೂ ವೇತನ ಆಯೋಗದಂತೆ ವೇತನ ನೀಡಿದರೆ ಕಾಂಗ್ರೆಸ್ ಪಕ್ಷವು ಮತ್ತಷ್ಟು ಅವಧಿಗಳಿಗೆ ಆಯ್ಕೆ ಆಗುವುದು ಖಚಿತ ಹಾಗೂ ನಿಗಮದ 1.20 ಲಕ್ಷ ನೌಕರರು ಮತ್ತು ಕುಟುಂಬ ವರ್ಗವು ಸೇರಿದಂತೆ ದುಡಿಯುವ ವರ್ಗದ ಎಲ್ಲ ಮತದಾರರ ಒಲವು ಜೀವನಪೂರ್ತಿ ತಮ್ಮ ಮೇಲೆ ಇರುತ್ತದೆ ಎಂದು ಹೇಳಿದ್ದಾರೆ.
ಇನ್ನು ತಮ್ಮ ಸರ್ಕಾರದ ಕುರಿತು ಪ್ರಚಾರದ ಮಾಧ್ಯಮವಾಗಿ ಸಾರಿಗೆಯ ಚಾಲಕರು ಪ್ರಯಾಣಿಕರಿಗೆ ರಾಜ್ಯದ ಉದ್ದಗಲಕ್ಕೂ ಪ್ರಯಾಣದ ವೇಳೆಯಲ್ಲಿ ಅಬ್ಬರದ ಪ್ರಚಾರ ಮತ್ತು ಮಾತುಕತೆಯ ಮೂಲಕ ಮಾಡುತ್ತಾರೆ. ಇದು ಒಂದು ರೀತಿಯಲ್ಲಿ ಖರ್ಚುರಹಿತ ತಮ್ಮ ಸರ್ಕಾರದ ಕುರಿತು ಮಾಧ್ಯಮದ ಪ್ರಚಾರದಂತೆ ಆಗುತ್ತದೆ ಎಂದಿದ್ದಾರೆ.
ಇತಿಹಾಸವನ್ನು ತಿರುವುಹಾಕಿದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಲಾಭ ಮಾಡಿದ ಪಕ್ಷವು ಬಹುತೇಕ ಲಾಭವನ್ನೇ ನೋಡಿದೆ. ಆದ್ದರಿಂದ ದಯಮಾಡಿ 70 ನಿಗಮಗಳು ಮತ್ತು ಸರ್ಕಾರದ ಇಲಾಖೆಗಳಿಗೆ ನೀಡುವ ವೇತನ ಆಯೋಗದಂತೆ ಸಾರಿಗೆ ಸಂಸ್ಥೆಯ ನೌಕರರಿಗೂ ಸಹ ವೇತನ ಆಯೋಗ ಜಾರಿ ಮಾಡಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇವೆ.
ದಯವಿಟ್ಟು ಭ್ರಷ್ಟ ಸಂಘಟನೆಗಳ ದಲ್ಲಾಳಿಗಳ ಮುಖ ನೋಡಬೇಡಿ ಸಾರಿಗೆ ಸಂಸ್ಥೆ ನಿಷ್ಠಾವಂತ ನೌಕರರ ಮುಖ ನೋಡಿ ವೇತನ ಆಯೋಗ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು, ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಜಾರಿ ಮಾಡಿ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಕೂಡಲೇ ಬಿಡುಗಡೆ ಮಾಡಲು ಆದೇಶ ಹೊರಡಿಸಿ ಎಂದು ಕೇಳಿಕೊಂಡಿದ್ದಾರೆ.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...