NEWSನಮ್ಮಜಿಲ್ಲೆನಮ್ಮರಾಜ್ಯ

ಏ.15ರಂದು ನಡೆದ KSRTC ಸಂಘಟನೆಗಳ ಸಭೆಯಲ್ಲಿ ಕೊಟ್ಟ ಭರವಸೆ ಶೀಘ್ರ ಜಾರಿಗೆ ತನ್ನಿ: ಸಿಎಂಗೆ ನೌಕರರ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೂ ಉಳಿದ 70 ನಿಗಮಗಳಿಗೆ ನೀಡುವ ವೇತನದಂತೆ ಹಾಗೂ ತಮ್ಮ ಪ್ರಣಾಳಿಕೆಯಂತೆ ಸರಿ ಸಮಾನ ವೇತನ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಸಮಸ್ತ ಸಾರಿಗೆ ನೌಕರರು ಮನವಿ ಮಾಡಿದ್ದಾರೆ.

ತಾವು ನಮ್ಮ ನೌಕರರ ಸಂಘಟನೆಗಳೊಂಗೆ ಇದೇ ಏ.15ರಂದು ಸಂಜೆ ನಡೆಸಿದ ಸಭೆಯಲ್ಲಿ ಸರಿ ಸಮಾನ ವೇತನ ಸೇರಿ ಇತರೆ ನಿಮ್ಮ ಬೇಡಿಕೆಗಳನ್ನು ಅತೀ ಶೀಘ್ರದಲ್ಲೇ ಈಡೇರಿಸುತ್ತೇವೆ ಎಂದು ಭರವಸೆ ನೀಡಿರುವುದಾಗಿ ನೀವೆ ಮಾಧ್ಯಮಗಳಿಗೆ ತಿಳಿಸಿದ್ದೀರಿ. ಅದರಂತೆ ನಮಗೆ ಸರಿ ಸಮಾನ ವೇತನವನ್ನು ಜಾರಿ ಮಾಡಬೇಕು ಎಂದು ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ನಮಗೂ ವೇತನ ಆಯೋಗದಂತೆ ವೇತನ ನೀಡಿದರೆ ಕಾಂಗ್ರೆಸ್ ಪಕ್ಷವು ಮತ್ತಷ್ಟು ಅವಧಿಗಳಿಗೆ ಆಯ್ಕೆ ಆಗುವುದು ಖಚಿತ ಹಾಗೂ ನಿಗಮದ 1.20 ಲಕ್ಷ ನೌಕರರು ಮತ್ತು ಕುಟುಂಬ ವರ್ಗವು ಸೇರಿದಂತೆ ದುಡಿಯುವ ವರ್ಗದ ಎಲ್ಲ ಮತದಾರರ ಒಲವು ಜೀವನಪೂರ್ತಿ ತಮ್ಮ ಮೇಲೆ ಇರುತ್ತದೆ ಎಂದು ಹೇಳಿದ್ದಾರೆ.

ಇನ್ನು ತಮ್ಮ ಸರ್ಕಾರದ ಕುರಿತು ಪ್ರಚಾರದ ಮಾಧ್ಯಮವಾಗಿ ಸಾರಿಗೆಯ ಚಾಲಕರು ಪ್ರಯಾಣಿಕರಿಗೆ ರಾಜ್ಯದ ಉದ್ದಗಲಕ್ಕೂ ಪ್ರಯಾಣದ ವೇಳೆಯಲ್ಲಿ ಅಬ್ಬರದ ಪ್ರಚಾರ ಮತ್ತು ಮಾತುಕತೆಯ ಮೂಲಕ ಮಾಡುತ್ತಾರೆ. ಇದು ಒಂದು ರೀತಿಯಲ್ಲಿ ಖರ್ಚುರಹಿತ ತಮ್ಮ ಸರ್ಕಾರದ ಕುರಿತು ಮಾಧ್ಯಮದ ಪ್ರಚಾರದಂತೆ ಆಗುತ್ತದೆ ಎಂದಿದ್ದಾರೆ.

ಇತಿಹಾಸವನ್ನು ತಿರುವುಹಾಕಿದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಲಾಭ ಮಾಡಿದ ಪಕ್ಷವು ಬಹುತೇಕ ಲಾಭವನ್ನೇ ನೋಡಿದೆ. ಆದ್ದರಿಂದ ದಯಮಾಡಿ 70 ನಿಗಮಗಳು ಮತ್ತು ಸರ್ಕಾರದ ಇಲಾಖೆಗಳಿಗೆ ನೀಡುವ ವೇತನ ಆಯೋಗದಂತೆ ಸಾರಿಗೆ ಸಂಸ್ಥೆಯ ನೌಕರರಿಗೂ ಸಹ ವೇತನ ಆಯೋಗ ಜಾರಿ ಮಾಡಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತೇವೆ.

ದಯವಿಟ್ಟು ಭ್ರಷ್ಟ ಸಂಘಟನೆಗಳ ದಲ್ಲಾಳಿಗಳ ಮುಖ ನೋಡಬೇಡಿ ಸಾರಿಗೆ ಸಂಸ್ಥೆ ನಿಷ್ಠಾವಂತ ನೌಕರರ ಮುಖ ನೋಡಿ ವೇತನ ಆಯೋಗ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು, ಚುನಾವಣಾ ಪೂರ್ವದಲ್ಲಿ ಕೊಟ್ಟ ಭರವಸೆಯನ್ನು ಜಾರಿ ಮಾಡಿ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿಯನ್ನು ಕೂಡಲೇ ಬಿಡುಗಡೆ ಮಾಡಲು ಆದೇಶ ಹೊರಡಿಸಿ ಎಂದು ಕೇಳಿಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?