NEWSನಮ್ಮಜಿಲ್ಲೆಮೈಸೂರು

ಮೈಸೂರು ದಸರಾ: ಪ್ರವಾಸಿಗರ ಸುಗಮ ಸಂಚಾರಕ್ಕೆ ಪ್ರಾಮುಖ್ಯತೆ- ಶಾಸಕ ಶ್ರೀವತ್ಸ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೈಸೂರಿನ ಜನರ ಸುಗಮ ಸಂಚಾರಕ್ಕಾಗಿ ಶಾಸಕ ಟಿ.ಎಸ್.ಶ್ರೀವತ್ಸ ಆಯಕಟ್ಟಿನ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ, ವೃತ್ತನಿರೀಕ್ಷಕ ಯೋಗೀಶ್ ಅವರೊಂದಿಗೆ ಹೆಚ್ಚು ಅಪಘಾತವಾಗುವ   ಸ್ಥಳಗಳನ್ನು ಪರಿಶೀಲಿಸಿದರು. ಈ ವೇಳೆ ಮಾತಾಡಿದ ಶಾಸಕ ಶ್ರೀವತ್ಸ, ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರಿಗೆ ಮತ್ತು ಮೈಸೂರಿನ ಜನರಿಗೆ ತೊಂದರೆ ಆಗದ ರೀತಿ ನೋಡಿಕೊಳ್ಳಬೇಕಿದೆ. ಇಂದು ಒಂದೆರಡು  ಅಪಘಾತ ಸ್ಥಳಗಳನ್ನು ಎಸಿಪಿ ಅವರಿಗೆ ತೋರಿಸಿದ್ದೇನೆ ಎಂದು ಹೇಳಿದರು.

ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ, ಎಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ, ಯಾವ ಕಡೆ ಹಂಪ್ಸ್‌ಗಳನ್ನು ಹಾಕಬೇಕು ಎಂಬ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ ಎಂದರು.

ಮಾನಂದವಾಡಿ ಜಂಕ್ಷನ್, ಸೆಂಚುರಿ ಪಾರ್ಕ್, ನಜರ್‌ಬಾದ್ ಠಾಣೆ ಬಳಿ, ಹಳೆ ರಿಜೆನ್ಸಿ ಥಿಯೇಟರ್ ಬಳಿ, ಜಿಂಜರ್ ಹೋಟೆಲ್ ತಿರುವಿನ ಜಾಗದಲ್ಲಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಜನ ಇನ್ನು ಸಮಸ್ಯೆ ಹೇಳಿದ್ದಾರೆ. ಮೈಸೂರು ಸೌತ್ ಬಳಿ ಸಮಸ್ಯೆ ಇದೆ ಎಂದು ತಿಳಿಸಿದರು.

ಇನ್ನು ಜಾಕಿ ಫ್ಯಾಕ್ಟರಿ ನಾಡನಹಳ್ಳಿ ಪಾಳ್ಯ, ಎಚ್.ಡಿ.ಕೋಟೆ ಕಡೆ ಹೋಗುವ ರಸ್ತೆಗಳಲ್ಲೂ ಹಂಪ್ಸ್ ಹಾಕಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ಶ್ರೀವತ್ಸ ತಿಳಿಸಿದರು.

ಸಂಚಾರ ವಿಭಾಗದ ಎಸಿಪಿ ಪರಶುರಾಮಪ್ಪ, ವೃತ್ತನಿರೀಕ್ಷಕ ಯೋಗೀಶ್, ನಗರಪಾಲಿಕೆ ಸದಸ್ಯೆ ಛಾಯಾದೇವಿ, ಸಿಂಡಿಕೇಟ್ ಸದಸ್ಯ ಗೋಕುಲ್ ಗೋವರ್ಧನ್, ಬಿಜೆಪಿ ಮುಖಂಡರಾದ ಪ್ರದೀಪ್ ಕುಮಾರ್, ಜೈರಾಮ್, ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಜೋಗಿ ಮಂಜು, ಜಗದೀಶ್, ಕೆ.ಎಂ.ನಿಶಾಂತ್, ಮನೋಜ, ಪ್ರಸನ್ನ, ಕಿಶೋರ ಕಂಡೇಶ್, ಚೇತನ್ ಇದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ