ಬೆಂಗಳೂರು: ಕನೌರಿ ಗಡಿಯಲ್ಲಿ (ಹರಿಯಾಣ – ಪಂಜಾಬ್ ಗಡಿ) MSP ಖಾತರಿ ಕಾನೂನಿಗಾಗಿ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ್ ಅವರು ಕಳೆದ 110 ದಿನಗಳಿಂದ ಉಪವಾಸ ಸತ್ಯಾಗ್ರ ಮಾಡುತ್ತಿದ್ದು, ಅದನ್ನು ಇನ್ನಷ್ಟು ತೀವ್ರಗೊಳಿಸಲು ಬೆಂಗಳೂರಿನಲ್ಲಿ ರೈತರ ಮಹತ್ವದ ಸಭೆ ಇಂದು ನಡೆಯಿತು.
SKM ರಾಜಕೀಯೇತರ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡಗಳ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿ ಗಾಂಧಿ ಭವನದಲ್ಲಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಮಟ್ಟದ ಸಮಿತಿಯನ್ನು ಭೇಟಿ ಮಾಡಿ ನಡೆಯುತ್ತಿರುವ ರೈತ ಚಳವಳಿಯನ್ನು ಬಲಪಡಿಸುವ ಕಾರ್ಯತಂತ್ರವನ್ನು ರೂಪಿಸಿತು.
ಫೆಬ್ರವರಿ 14 ರಂದು ಕೇಂದ್ರ ಸರ್ಕಾರದ ಮಂತ್ರಿಗಳೊಂದಿಗೆ ರೈತ ನಿಯೋಗ ಸಭೆಯಲ್ಲಿ ಭಾಗವಹಿಸಲು ಚಂಡೀಗಢಕ್ಕೆ ಹೋಗುವಾಗ ಅಪಘಾತಕ್ಕೀಡಾದ ಕುರುಬೂರು ಶಾಂತಕುಮಾರ್ ಅವರ ಆರೋಗ್ಯವನ್ನು ನಿಯೋಗ ಪರಿಶೀಲಿಸಿತು.
ರೈತ ನಾಯಕ ಕುರುಬೂರು ಶಾಂತಕುಮಾರ್ಅವರು ರೈತರಿಗೆ ಭಾವನಾತ್ಮಕ ಸಂದೇಶವನ್ನು ನೀಡಿ “ನೀವು ನನ್ನ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ ಮತ್ತು ಬದಲಾಗಿ MSP ಖಾತರಿ ಕಾನೂನಿಗಾಗಿ ನಡೆಯುತ್ತಿರುವ ಈ ಆಂದೋಲನವನ್ನು ಬಲಪಡಿಸಲು ನೀವೆಲ್ಲರೂ ಹಗಲು ರಾತ್ರಿ ಕೆಲಸ ಮಾಡಬೇಕು” ಎಂದು ಹೇಳಿದರು.
ಫೆಬ್ರವರಿ 14 ಮತ್ತು 22 ರಂದು ಕೇಂದ್ರ ಸರ್ಕಾರದ ಸಚಿವರೊಂದಿಗೆ ನಡೆದ ಕಳೆದ ಎರಡು ಸಭೆಗಳಲ್ಲಿ, ನಮ್ಮ ನಿಯೋಗವು MSP ಖಾತರಿ ಕಾನೂನನ್ನು ಬಲವಾಗಿ ಒತ್ತಾಯಿಸಿತು ಮತ್ತು MSP ಖಾತರಿ ಕಾನೂನನ್ನು ಬೆಂಬಲಿಸುವ ಬಲವಾದ ಸಂಗತಿಗಳನ್ನು ಮಂಡಿಸಿತು ಎಂದು ರೈತ ಮುಖಂಡರು ಹೇಳಿದರು.
ಕೇಂದ್ರ ಸರ್ಕಾರದ ಸಚಿವರು ಮತ್ತು SKM (ರಾಜಕೀಯೇತರ) ಮತ್ತು KMM ನ ರೈತ ನಿಯೋಗದ ನಡುವಿನ ಮುಂದಿನ ಸುತ್ತಿನ ಸಭೆ ಮಾರ್ಚ್ 19 ರಂದು ಚಂಡೀಗಢದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಇನ್ನು ಬೆಂಗಳೂರಿನ ಗಾಂಧಿ ಭವನಕ್ಕೆ ಬಂದಿದ್ದ ಹಲವಾರು ಜಿಲ್ಲೆಯ ರೈತ ಮುಖಂಡರ ಕೋರಿಕೆಯ ಮೇರೆಗೆ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರನ್ನು ಆಸ್ಪತ್ರೆಯಿಂದ ಅಂಬ್ಯುಲೆನ್ಸ್ ಮೂಲಕ ಕರೆತಂದು ರೈತ ಮುಖಂಡರನ್ನು ಭೇಟಿ ಮಾಡಿಸಿ ಅವರ ಆರೋಗ್ಯದ ಬಗ್ಗೆ ತಿಳಿಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮುಖಂಡರಾದ ಅಭಿಮನ್ಯು ಕೋಹರ್, ಲಕ್ವಿಂದರ್ ಸಿಂಗ್,ಕಾಕಾಸಿಂಗ್, ಕೊತ್ವಾ ಸುಖಜಿತ್ ಸಿಂಗ್, ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಲ್ಲೂರು ರವಿಕುಮಾರ್,ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ವೀರನಗೌಡ ಕೋ ಪಾಟೀಲ್, ರಾಜ್ಯ ಹಸಿರು ಸೇನೆ ಅಧ್ಯಕ್ಷ ಕರಬಸಪ್ಪಗೌಡ, ಧಾರವಾಡ ಮಹೇಶ್ ಬೆಳಗಾಂವ್ಕರ್, ಗುಲ್ಬರ್ಗ ರಮೇಶ್ ಹೂಗಾರ್, ಚಿಕ್ಕಬಳ್ಳಾಪುರ ಶ್ರೀನಿವಾಸಲು, ಬಳ್ಳಾರಿ ಜಿ.ವಿ.ಲಕ್ಷ್ಮೀದೇವಿ, ಹಾಸನ ಧರ್ಮದಾಜ್, ದಾವಣಗೆರೆ ಅಂಜನಪ್ಪ ಪೂಜಾರ್, ರಾಯಚೂರು ಶಿವಾರ್ಜುನ ನಾಯಕ್, ಯಾದಗಿರಿ ನರಸರೆಡ್ಡಿ ಪೊಲೀಸ್ ಪಾಟೀಲ್, ಚಾಮರಾಜನಗರ ಮೂಕಹಳ್ಳಿ ಮಹದೇವಸ್ವಾಮಿ, ಮೈಸೂರು ಅತ್ತಹಳ್ಳಿ ದೇವರಾಜ್, ತುಮಕೂರು ಜಿಲ್ಲೆಯ ಶಿವಕುಮಾರ್, ಶಾಂತಕುಮಾರಿ ನೆಲಮಂಗಲ, ಬರಡಾನಪುರ ನಾಗರಾಜ್ ಭಾಗವಹಿಸಿದ್ದರು.
Related

You Might Also Like
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...