ಬೆಂಗಳೂರು: ಕನೌರಿ ಗಡಿಯಲ್ಲಿ (ಹರಿಯಾಣ – ಪಂಜಾಬ್ ಗಡಿ) MSP ಖಾತರಿ ಕಾನೂನಿಗಾಗಿ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ್ ಅವರು ಕಳೆದ 110 ದಿನಗಳಿಂದ ಉಪವಾಸ ಸತ್ಯಾಗ್ರ ಮಾಡುತ್ತಿದ್ದು, ಅದನ್ನು ಇನ್ನಷ್ಟು ತೀವ್ರಗೊಳಿಸಲು ಬೆಂಗಳೂರಿನಲ್ಲಿ ರೈತರ ಮಹತ್ವದ ಸಭೆ ಇಂದು ನಡೆಯಿತು.
SKM ರಾಜಕೀಯೇತರ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡಗಳ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿ ಗಾಂಧಿ ಭವನದಲ್ಲಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಮಟ್ಟದ ಸಮಿತಿಯನ್ನು ಭೇಟಿ ಮಾಡಿ ನಡೆಯುತ್ತಿರುವ ರೈತ ಚಳವಳಿಯನ್ನು ಬಲಪಡಿಸುವ ಕಾರ್ಯತಂತ್ರವನ್ನು ರೂಪಿಸಿತು.
ಫೆಬ್ರವರಿ 14 ರಂದು ಕೇಂದ್ರ ಸರ್ಕಾರದ ಮಂತ್ರಿಗಳೊಂದಿಗೆ ರೈತ ನಿಯೋಗ ಸಭೆಯಲ್ಲಿ ಭಾಗವಹಿಸಲು ಚಂಡೀಗಢಕ್ಕೆ ಹೋಗುವಾಗ ಅಪಘಾತಕ್ಕೀಡಾದ ಕುರುಬೂರು ಶಾಂತಕುಮಾರ್ ಅವರ ಆರೋಗ್ಯವನ್ನು ನಿಯೋಗ ಪರಿಶೀಲಿಸಿತು.
ರೈತ ನಾಯಕ ಕುರುಬೂರು ಶಾಂತಕುಮಾರ್ಅವರು ರೈತರಿಗೆ ಭಾವನಾತ್ಮಕ ಸಂದೇಶವನ್ನು ನೀಡಿ “ನೀವು ನನ್ನ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ ಮತ್ತು ಬದಲಾಗಿ MSP ಖಾತರಿ ಕಾನೂನಿಗಾಗಿ ನಡೆಯುತ್ತಿರುವ ಈ ಆಂದೋಲನವನ್ನು ಬಲಪಡಿಸಲು ನೀವೆಲ್ಲರೂ ಹಗಲು ರಾತ್ರಿ ಕೆಲಸ ಮಾಡಬೇಕು” ಎಂದು ಹೇಳಿದರು.
ಫೆಬ್ರವರಿ 14 ಮತ್ತು 22 ರಂದು ಕೇಂದ್ರ ಸರ್ಕಾರದ ಸಚಿವರೊಂದಿಗೆ ನಡೆದ ಕಳೆದ ಎರಡು ಸಭೆಗಳಲ್ಲಿ, ನಮ್ಮ ನಿಯೋಗವು MSP ಖಾತರಿ ಕಾನೂನನ್ನು ಬಲವಾಗಿ ಒತ್ತಾಯಿಸಿತು ಮತ್ತು MSP ಖಾತರಿ ಕಾನೂನನ್ನು ಬೆಂಬಲಿಸುವ ಬಲವಾದ ಸಂಗತಿಗಳನ್ನು ಮಂಡಿಸಿತು ಎಂದು ರೈತ ಮುಖಂಡರು ಹೇಳಿದರು.
ಕೇಂದ್ರ ಸರ್ಕಾರದ ಸಚಿವರು ಮತ್ತು SKM (ರಾಜಕೀಯೇತರ) ಮತ್ತು KMM ನ ರೈತ ನಿಯೋಗದ ನಡುವಿನ ಮುಂದಿನ ಸುತ್ತಿನ ಸಭೆ ಮಾರ್ಚ್ 19 ರಂದು ಚಂಡೀಗಢದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಇನ್ನು ಬೆಂಗಳೂರಿನ ಗಾಂಧಿ ಭವನಕ್ಕೆ ಬಂದಿದ್ದ ಹಲವಾರು ಜಿಲ್ಲೆಯ ರೈತ ಮುಖಂಡರ ಕೋರಿಕೆಯ ಮೇರೆಗೆ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರನ್ನು ಆಸ್ಪತ್ರೆಯಿಂದ ಅಂಬ್ಯುಲೆನ್ಸ್ ಮೂಲಕ ಕರೆತಂದು ರೈತ ಮುಖಂಡರನ್ನು ಭೇಟಿ ಮಾಡಿಸಿ ಅವರ ಆರೋಗ್ಯದ ಬಗ್ಗೆ ತಿಳಿಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಮುಖಂಡರಾದ ಅಭಿಮನ್ಯು ಕೋಹರ್, ಲಕ್ವಿಂದರ್ ಸಿಂಗ್,ಕಾಕಾಸಿಂಗ್, ಕೊತ್ವಾ ಸುಖಜಿತ್ ಸಿಂಗ್, ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಲ್ಲೂರು ರವಿಕುಮಾರ್,ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ವೀರನಗೌಡ ಕೋ ಪಾಟೀಲ್, ರಾಜ್ಯ ಹಸಿರು ಸೇನೆ ಅಧ್ಯಕ್ಷ ಕರಬಸಪ್ಪಗೌಡ, ಧಾರವಾಡ ಮಹೇಶ್ ಬೆಳಗಾಂವ್ಕರ್, ಗುಲ್ಬರ್ಗ ರಮೇಶ್ ಹೂಗಾರ್, ಚಿಕ್ಕಬಳ್ಳಾಪುರ ಶ್ರೀನಿವಾಸಲು, ಬಳ್ಳಾರಿ ಜಿ.ವಿ.ಲಕ್ಷ್ಮೀದೇವಿ, ಹಾಸನ ಧರ್ಮದಾಜ್, ದಾವಣಗೆರೆ ಅಂಜನಪ್ಪ ಪೂಜಾರ್, ರಾಯಚೂರು ಶಿವಾರ್ಜುನ ನಾಯಕ್, ಯಾದಗಿರಿ ನರಸರೆಡ್ಡಿ ಪೊಲೀಸ್ ಪಾಟೀಲ್, ಚಾಮರಾಜನಗರ ಮೂಕಹಳ್ಳಿ ಮಹದೇವಸ್ವಾಮಿ, ಮೈಸೂರು ಅತ್ತಹಳ್ಳಿ ದೇವರಾಜ್, ತುಮಕೂರು ಜಿಲ್ಲೆಯ ಶಿವಕುಮಾರ್, ಶಾಂತಕುಮಾರಿ ನೆಲಮಂಗಲ, ಬರಡಾನಪುರ ನಾಗರಾಜ್ ಭಾಗವಹಿಸಿದ್ದರು.
Related

You Might Also Like
KSRTC ನೌಕರರ ವೇತನ ಹೆಚ್ಚಳ ಸಂಬಂಧದ ಪ್ರಕರಣ: ಜು.16ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ನಂದಿ ಬೆಟ್ಟದಲ್ಲಿ 14ನೇ ಸಚಿವ ಸಂಪುಟ ಸಭೆ: ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ರೂ. ಖರ್ಚಾಗಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ...
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...