CRIMENEWSಬೆಂಗಳೂರು

ಕೇವಲ 30 ಸೆಕೆಂಡ್‌ಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಖದೀಮರು ಎಸ್ಕೇಪ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿನ್ನದಂಗಡಿ ಮುಚ್ಚುವ ವೇಳೆ ಗನ್ ಹಿಡಿದು ಒಳಬಂದ ಮೂವರು ಮುಸುಕುಧಾರಿ ಖದೀಮರು ಕೇವಲ 30 ಸೆಕೆಂಡ್‌ಗಳಲ್ಲೇ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಗಳನ್ನು ದೋಚಿ ಪರಾರಿಯಾದ ಘಟನೆ ನಗರದ ಮಾಚೋಹಳ್ಳಿ ಗೇಟ್‌ ಬಳಿ ನಡೆದಿದೆ.

ಮಾಚೋಹಳ್ಳಿ ಗೇಟ್‌ನ ರಾಮ್ ಜ್ಯುವೆಲರ್ಸ್‌ನಲ್ಲಿ ಗುರುವಾರ ರಾತ್ರಿ 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಮೂವರು ಮುಸುಕುಧಾರಿಗಳು ಗನ್ ಹಿಡಿದು ಬಂದು ಕೃತ್ಯವೆಸಗಿದ್ದಾರೆ.

ಜ್ಯುವೆಲ್ಲರಿ ಮಾಲೀಕ ಕನ್ನಯ್ಯಲಾಲ್ ಅಂಗಡಿ ಕ್ಲೋಸ್ ಮಾಡಿಕೊಂಡು ಮನೆಗೆ ಹೋಗುದಕ್ಕೆ ರೆಡಿಯಾಗುತ್ತಿದ್ದ ವೇಳೆ ಗನ್ ಹಿಡಿದು ಮೂವರು ಅಂಗಡಿಗೆ ಎಂಟ್ರಿಕೊಟ್ಟಿದ್ದಾರೆ. ಈ ವೇಳೆ ಹೆದರಿಸಿ ಟೇಬಲ್ ಮೇಲಿದ್ದ ಚಿನ್ನವನ್ನು ಬಾಚಿಕೊಂಡಿದ್ದಾರೆ.

ಆಗ ಮಾಲೀಕ ಕನ್ನಯ್ಯಲಾಲ್ ಕೂಗಾಡಿದರು ಆದರೂ ಹೆದರದ ಖದೀಮರು ಅವರನ್ನು ಮತ್ತು ಸಿಬ್ಬಂದಿಯನ್ನು ತಳ್ಳಿ ಚಿನ್ನಾಭರಣ ದೂಚಿ 30 ಸೆಕೆಂಡ್‌ಗಳಲ್ಲಿ ಪರಾರಿಯಾದರು. ಈ ಕೃತ್ಯ ಅಂಗಡಿಯಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನು ಕೂಗಾಟ ಕೇಳಿ ಪಕ್ಕದ ಅಂಗಡಿಯ ಹುಡುಗ ಬಂದಿದ್ದು, ಆತನನ್ನು ತಳ್ಳಿ ಕಳ್ಳರು ಎಸ್ಕೇಪ್ ಆಗಿದ್ದಾರೆ. ಕೈಗೆ ಸಿಕ್ಕ ಚಿನ್ನವನ್ನು ದೋಚಿ ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ.

ಈ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ