NEWSನಮ್ಮಜಿಲ್ಲೆನಮ್ಮರಾಜ್ಯ

ತಿ.ನರಸೀಪುರ ತಾಲೂಕಿನಲ್ಲಿ ಮಿತಿ ಮೀರಿದ ಚಿರತೆ ಹಾವಳಿ –  ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಮತ್ತೆ ಮತ್ತೆ ಚಿರತೆಗಳು ಕಾಣಿಸಿಕೊಳ್ಳುತ್ತಲೇ ಇವೆ. ಆದರೂ ಅರಣ್ಯ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಏನೂ ಕ್ರಮ ಕೈಗೊಂಡಂತೆ ಕಾಣಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೌದು! ಮೈಸೂರಿನ ತಿ.ನರಸೀಪುರ ತಾಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಮೀತಿ ಮೀರುತ್ತಿದೆ. ಒಂದು ತಿಂಗಳಲ್ಲಿ ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನು ಈ ಚಿರತೆಗಳ ಓಡಾಟ ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ.

ಇದರ ನಡುವೆಯೇ ತಾಲೂಕಿನವರೇ ಆದ ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರಾದ ಸಿದ್ದರಾಮನಹುಂಡಿಯ 5 ಕಿ.ಮೀ.ಅಂತರದ ತಾಯೂರು ಗ್ರಾಮದಲ್ಲಿ ಚಿರತೆ ಕಾಣಿಸಿದೆ. ರಾತ್ರಿ ವೇಳೆ ತಮ್ಮ ಗ್ರಾಮಕ್ಕೆ ಕಾರಿನಲ್ಲಿ ಹೋಗುತ್ತಿದ್ದವರು ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಚಿರತೆ ರಾಜಾರೋಷವಾಗಿ ಈ ಭಾಗದಲ್ಲಿ ಓಡಾಡುತ್ತಿದೆ. ರಾತ್ರಿ ಹಗಲೆನ್ನೆದೆ ಎಲ್ಲೆಲ್ಲೂ ಓಡಾಡುತ್ತಿದ್ದು, ಒಂದು ತಿಂಗಳ ಅವಧಿಯಲ್ಲಿ ಅನೇಕ ಜಾನುವಾರುಗಳನ್ನ ತಿಂದು ಹಾಕಿದೆ ಎನ್ನಲಾಗುತ್ತಿದೆ. ಅನೇಕ ಜನರ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆ ಸೆರೆ ಸಿಕ್ಕಿದೆ.

ಈಗಾಗಲೇ ತಾಲೂಕಿನಲ್ಲಿ ಚಿರತೆಗೆ ಇಬ್ಬರು ಬಲಿಯಾದ ಬಳಿಕ ಎಚ್ಚೆತ ಸರ್ಕಾರ ಚಿರತೆ ಶೂಟೌಟ್‌ಗೆ ಆದೇಶ ನೀಡಿದ್ದು, ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆ ನಿರ್ದೇಶಿಸಿದೆ. ಅಂತೆಯೇ ಚಿರತೆ ದಾಳಿಯಿಂದ ಮೃತಪಟ್ಟ ಯುವತಿ ಮೇಘನಾ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಈ ಪರಿಹಾರದ ಪೈಕಿ 5 ಲಕ್ಷ ರೂಪಾಯಿ ಚೆಕ್ ಈಗಾಗಲೇ ವಿತರಿಸಲಾಗಿದ್ದು, ಮೃತ ಮೇಘನಾಳ ಕುಟುಂಬಕ್ಕೆ ಪ್ರತಿ ತಿಂಗಳು 2000 ರೂ.ನಂತೆ 5 ವರ್ಷ ಪಿಂಚಣಿ ನೀಡಲಾಗುತ್ತದೆ. ಮೃತ ಯುವತಿ ಮೇಘನಾಳ ಕುಟುಂಬಸ್ಥರಲ್ಲಿ ಒಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಗುವುದು. ಅದು ತಕ್ಷಣವೇ ಜಾರಿಗೆ ಬರಲಿದೆ ಎಂದು MCFO ಮಾಲತಿ ಪ್ರಿಯಾ ತಿಳಿಸಿದ್ದಾರೆ.

ಚಿರತೆ ಹಾವಳಿಯನ್ನು, ಮನುಷ್ಯರಿಗೆ ಪ್ರಾಣಕ್ಕೆ ತೊಂದರೆ ತಪ್ಪಿಸಲು ನರಸೀಪುರ ತಾಲೂಕಿನಲ್ಲಿ 15 ತಜ್ಞರ ತಂಡ ನೇಮಕ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಇನ್ನು ಬನ್ನೂರು – ನರಸೀಪುರ ಸಮೀಪದ ಗ್ರಾಮಗಳಲ್ಲಿ ಚಿರತೆಗಳನ್ನು ಸೆರೆ ಹಿಡಿಯುವುದಕ್ಕೆ ಬೋನ್‌ಗಳನ್ನು ಇಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ