NEWSನಮ್ಮಜಿಲ್ಲೆನಮ್ಮರಾಜ್ಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೂತನ ಕಚೇರಿ ಉದ್ಘಾಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೂತನ ಕಚೇರಿ ಇಂದು ರಾಜ್ಯ ರಾಜಧಾನಿಯ ಸುಂಕದಕಟ್ಟೆಯಲ್ಲಿ ಉದ್ಘಾಟನೆ ಮಾಡಲಾಯಿತು.

ಸಂಘದ ಗೌರವಾಧ್ಯಕ್ಷ, ಗೋವಿಂದರಾಜು ಮತ್ತು ಸಂಘದ ಅಧ್ಯಕ್ಷ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಇನ್ನು ಸಂಘದ ಸದಸ್ಯರು ನೂತನ ಕಚೇರಿ ನಂ. 31/31, ಹೆಗ್ಗನಹಳ್ಳಿ ಮುಖ್ಯ ರಸ್ತೆ ಸಲ್ಲಾಪುರದಮ್ಮ ದೇವಸ್ಥಾನದ ಹತ್ತಿರ ಸುಂಕದಕಟ್ಟೆ, ಬೆಂಗಳೂರು -91ಕ್ಕೆ ತಮ್ಮ ಯಾವುದೆ ವ್ಯವಹಾರವಿದ್ದರು ಭೇಟಿ ನೀಡಬಹುದು ಎಂದು ಅಧ್ಯಕ್ಷ ಭೈರೇಗೌಡ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿವೃತ್ತ ಅಧಿಕಾರಿ ವೇಣುಗೋಪಾಲ್, ಸಂಘದ ಒಳಿತಿಗಾಗಿ ಹಗಲು ಇರುಳು ಶ್ರಮಿಸಿದ ಹಲವಾರು ಹಿರಿಯ ಅಧಿಕಾರಿಗಳು ಮತ್ತು ಕಾರ್ಮಿಕ ಮುಖಂಡರಾದ ಸತೀಶ್, ಬಸವಣ್ಣ, ರಘು ಮೈಸೂರ್, ಮಹದೇವಸ್ವಾಮಿ ಇದ್ದರು.

ಸಂಘಕ್ಕೆ ಸರ್ವಾನುಮತದಿಂದ ನಿರ್ದೇಶಕರಾಗಿ ಆಯ್ಕೆಯಾದ ಹಾಸನ ಪ್ರೇಮಕುಮಾರ್, ರುದ್ರೇಶ್ ಎಸ್. ನಾಯಕ, ಸಂಘದ ಉಪಾಧ್ಯಕ್ಷ ಪ್ರಕಾಶ್ ಪಿ.ಎಂ., ಖಜಾಂಚಿ ಮಂಜುನಾಥ್ ಪ್ರಸಾದ್ (ಮಂಜಣ್ಣ ಎ.ಸಿ.) ಹಿರಿಯ ನಿರ್ದೇಶಕ ಮುತ್ತಣ್ಣ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರಾದ ಆನಂದ್ ಮೈಗೂರ ಹಾಗೂ ಪಂಪಾಪತಿ ಯಾದವ್, ಮಹಿಳಾ ನಿರ್ದೇಶಕಿ ರಾಮಲಕ್ಷ್ಮಮ್ಮ ಇದ್ದರು.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು