NEWSನಮ್ಮರಾಜ್ಯರಾಜಕೀಯ

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಘಟನೆ: ನನಗೆ ಸೊಂಟ ನೋವು ಎಂದ ಸಚಿವ HCM

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಘಟನೆ ಧಾರವಾಡದಲ್ಲಿ ಜರುಗಿದ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ ನೀಡಿದರು.

ನನಗೆ ಕುಳಿತರೆ ಬೇಗ ಏಳಲು ಆಗೋದಿಲ್ಲ, ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.

ಆಪರೇಷನ್ ಕಮಲ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮಹದೇವಪ್ಪ, ನಮ್ಮ ಅಧ್ಯಕ್ಷರಿಗೆ ಮಾಹಿತಿ ಇರುತ್ತೆ. ಹೀಗಾಗಿ ಅವರು ಹೇಳಿರುತ್ತಾರೆ. ನಾನು ಅಧಿಕಾರಿಗಳ ಸಭೆಯಲ್ಲಿದ್ದೇನೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಮಗಿಂತ ಮಾಧ್ಯಮಗಳಿಗೇ ಹೆಚ್ಚು ಮಾಹಿತಿ ಇದೆ ಎಂದರು.

ಬಹುಮತವಿಲ್ಲದೇ ಬಿಜೆಪಿ 2 ಸಲ ಅಧಿಕಾರಕ್ಕೆ ಬಂದಿದೆ. ಅದು ಹೇಗೆ ಬಂದಿದ್ದು ಅನ್ನೋದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಇತಿಹಾಸವೇ ಹಾಗಿದೆ. ಆ ಇತಿಹಾಸವನ್ನು ಮಾಧ್ಯಮದವರೇ ಹೇಳಲಿ ಎಂದ ಅವರು. ಬಿಜೆಪಿ ಶಾಸಕರು, ಎಸ್‌.ಟಿ. ಸೋಮಶೇಖರ್ ಬರದ ಬಗ್ಗೆ ನೀಡುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸೋಮಶೇಖರ್ ಸರಿಯಾಗಿಯೇ ಹೇಳಿದ್ದಾರೆ. ಅವರು ಆ ಬಗ್ಗೆ ಕರಾರುವಕ್ಕಾಗಿ ಹೇಳಿದ್ದಾರೆ ಎಂದರು.

ಇನ್ನು ಅವರು ಕೇಂದ್ರಕ್ಕೆ ಹೋಗಿ ಹೇಳಿ ಅಂದಿದ್ದಾರೆ. ಬರದ ಎಲ್ಲ ವರದಿಯನ್ನು ನೀಡಲಾಗಿದೆ. ರಾಜ್ಯದ ಜನರ ಹಿತ ಕಾಯಬೇಕೆಂದಿದ್ದರೆ ಕೇಂದ್ರಕ್ಕೆ ಕೇಳಲಿ. ಸಂಕಷ್ಟದಲ್ಲಿರೋ ರೈತರಿಗೆ ಪರಿಹಾರ ಕೊಡಬೇಕೆಂದರೆ ಕೇಂದ್ರವನ್ನು ಕೇಳಲಿ. 4,000 ಕೋಟಿ ರೂ. ಕೇಳಲಾಗಿದೆ. ದಯವಿಟ್ಟು ಆ ಹಣವನ್ನು ನೀಡುವಂತೆ ಕೇಳಲಿ ಎಂದು ಮಹದೇಪ್ಪ ಹೇಳಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್