NEWSಕೃಷಿನಮ್ಮರಾಜ್ಯ

ಮಂಡ್ಯ-ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ: ರೈತರ, ಸಿಎಂ ಮುಖದಲ್ಲಿ ಮಂದಹಾಸ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಈ ವರ್ಷದ ವರುಣ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆಗಳು ತುಂಬುತ್ತಿವೆ. ಇದರಿಂದ ಅನ್ನದಾತರಿಗಂತೂ ಸಂತಸ ಮನೆ ಮಾಡಿದ್ದು, ಉತ್ತಮ ಬೆಳೆ ತೆಗೆಯುವುದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಜತೆಗೆ ಈ ಬಾರಿ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಸರ್ಕಾರಕ್ಕೂ ಖುಷಿಯ ವಿಷಯವಾಗಿದೆ.

ಹೌದು! ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ ಹೀಗಾಗಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ನೀರು ಹರಿದು ಬರುತ್ತಿದೆ. ಇದು ರೈತರ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮುಖದಲ್ಲೂ ಮಂದಹಾಸ ಮೂಡುವಂತೆ ಮಾಡಿದೆ.

ರಾಜ್ಯದಲ್ಲಿ ಕಾವೇರಿ ಒಡಲನ್ನೇ ನಂಬಿಕೊಂಡೇ ಕೋಟ್ಯಂತರ ಕುಟುಂಬಗಳು ಜೀವನ ನಡೆಸುತ್ತಿವೆ. ಕೃಷಿ, ಕುಡಿಯಲು ಕಾವೇರಿಯನ್ನೇ ನಂಬಿರುವ ಕೋಟ್ಯಂತರ ಕುಟುಂಬಗಳಿವೆ. ಆದರೆ ಕಳೆದ ವರ್ಷ ಕಾವೇರಿ ನೀರಿನ ಅಭಾವ ಉಂಟಾಗಿ ಬೆಂಗಳೂರಿನ ಜನತೆಯೂ ತತ್ತರಿಸಿ ಹೋಗಿದ್ದರು. ಈ ವರ್ಷದ ವರುಣನ ಅಬ್ಬರ ನೋಡಿದರೆ ಕೆಆರ್​ಎಸ್ ಅತೀ ಶೀಘ್ರದಲ್ಲೇ ತುಂಬಲಿದೆ ಎಂಬ ಭರವಸೆ ಮೂಡುತ್ತಿದೆ.

ಇನ್ನು ಇಂದಿನ ಕೆಆರ್‌ಎಸ್ ನೀರಿನ ಮಟ್ಟ ತಿಳಿಯುವುದಾದರೆ:
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 84.95 ಅಡಿ
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 13.142 ಟಿಎಂಸಿ
ಒಳ ಹರಿವು – 1,423 ಕ್ಯೂಸೆಕ್
ಹೊರ ಹರಿವು – 444 ಕ್ಯೂಸೆಕ್

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್