NEWSನಮ್ಮಜಿಲ್ಲೆನಮ್ಮರಾಜ್ಯ

KSRTC – 15 ದಿನಗಳ ಬಳಿಕ ಅನಿರ್ದಿಷ್ಟಾವಧಿ ಮುಷ್ಕರ: ತುರ್ತು ಸಭೆಯಲ್ಲಿ ಸಮಾನ ಮನಸ್ಕರ ವೇದಿಕೆ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರು ನಾಳೆ ಸಂಜೆ 5 ಗಂಟೆಯವರೆಗೂ ಸರ್ಕಾರಕ್ಕೆ ಗಡುವು ನೀಡಿದ್ದು ಬೇಡಿಕೆ ಈಡೇರಿಸದಿದ್ದರೆ 15 ದಿನಗಳ ಬಳಿಕ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಹಮ್ಮಿಕೊಳ್ಳುವುದಾಗಿ ಧರಣಿ ನಿರತ ನೌಕರರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರವೇ ಕೊಟ್ಟಿರುವ  ಲಿಖಿತ ಭರವಸೆಯನ್ನು ಈಡೇರಿಸುವಂತೆ ಹಾಗೂ ಸಮಸ್ಯೆಗಳ ಶಾಶ್ವತ ನಿವಾರಣೆಗಾಗಿ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರು ಇದೇ ಮಾರ್ಚ್‌ ಒಂದರಿಂದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಈ ಬಗ್ಗೆ   ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್. ಚಂದ್ರಶೇಖರ್ ತಿಳಿಸಿದ್ದಾರೆ.

ನಾವು ಸೋಮವಾರ (ಮಾ.6) ಕಾರ್ಮಿಕ ಆಯುಕ್ತರಿಗೆ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಮಾಡುವ ಬಗ್ಗೆ ನೋಟಿಸ್ ನೀಡಿ 14 ದಿನಗಳ ನಂತರ ಮುಷ್ಕರ ಪ್ರಾರಂಭಿಸಲು ಇಂದು ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಕರೆದಿದ್ದ ತುರ್ತು ಸಭೆಯಲ್ಲಿ ನಿರ್ಧರಿಸಿರುವುದಾಗಿ ತಿಳಿಸಿದರು.

ಇನ್ನು ಮೂರನೇ ದಿನವಾದ ಇಂದು ಧರಣಿ ಯಶಸ್ವಿಯಾಗಿದ್ದು, ನಾಳೆಯೂ ಅಂದರೆ ಮಾ.4 ರಂದು ಸಹ ಮುಂದುವರಿಯಲಿದೆ. ನಾಳೆ ಸಂಜೆವರೆಗೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ 15 ದಿನಗಳ ಬಳಿಕ ಅರ್ನಿದಿಷ್ಟಾವಧಿ ಮುಷ್ಕರ ಮಾಡುವುದು ಖಚಿತ ಎಂದು ಧರಣಿ ಸ್ಥಳದಲ್ಲೇ ಘೋಷಣೆ ಮಾಡಿದರು.

ಈಗ ನಡೆಯುತ್ತಿರುವ ಅರ್ನಿದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಾಳೆ ಕೈ ಬಿಡಬೇಕೊ ಇಲ್ಲ  ನಿರಂತರವಾಗಿ ಮುಷ್ಕರ ಕೈಗೊಳ್ಳುವವರೆಗೂ  ಮುಂದುವರಿಸಬೇಕೋ ಎಂಬುದರ ಬಗ್ಗೆ ನಾಳೆಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ