CRIMENEWSದೇಶ-ವಿದೇಶ

ಪ್ರತಿ ರಕ್ತದ ಹನಿಗೂ ಭಾರತ ಬೆಲೆ ತೆರಲೇಬೇಕು: ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

ವಿಜಯಪಥ ಸಮಗ್ರ ಸುದ್ದಿ

ಇಸ್ಲಾಮಾಬಾದ್‌: ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಿಂದ ಪಾಕಿಸ್ತಾನಕ್ಕೆ ನಡುಕ ಶುರುವಾಗಿದೆ. ಹೀಗಾಗಿ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಭಾರತದ ವಿರುದ್ಧ ಕಟು ಹೇಳಿಕೆ ನೀಡಿದ್ದಾರೆ.

ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್‌, ಭಾರತ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ಳುತ್ತೀವಿ ಎಂದ ಅವರು, ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರಿರುವವರೆಗೂ ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ದಾಳಿ ಒಪ್ಪಿಕೊಳ್ಳದ ಪಾಕ್‌: ಅಲ್ಲದೇ ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿ ಕುರಿತು ಮತ್ತೆ ಪ್ರಸ್ತಾಪಿಸಿದ ಷರೀಫ್‌, ಪಹಲ್ಗಾಮ್‌ ದಾಳಿ ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದ್ರೆ ಭಾರತ ನಮ್ಮ ಸ್ಪಷ್ಟನೆಯನ್ನು‌ ಸ್ವೀಕರಿಸದೇ ದಾಳಿ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೂ ಮುನ್ನ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡುತ್ತಾ, ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ. ಭಾರತದ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್‌ಗಳು ಮತ್ತು 2 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದರು.

ಏನಿದು ʻಆಪರೇಷನ್‌ ಸಿಂಧೂರʼ?: ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಪೆಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನು ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ʻಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಉಗ್ರರ ಮಟ್ಟಹಾಕಿದೆ.

ಇನ್ನು ಈ ದಾಳಿಯಲ್ಲಿ ಪಾಕ್‌ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ. ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದವು. ಇವು ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

Deva
the authorDeva

Leave a Reply

error: Content is protected !!
Latest news
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ