ನ್ಯೂಡೆಲ್ಲಿ: ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಏಳು ಮಂದಿ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್ಎಫ್ (BSF) ವಿಫಲಗೊಳಿಸಿದೆ.
ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್ಎಫ್ ಯೋಧರು ಗುಂಡಿಕ್ಕಿ ಕೊಂದಿದ್ದಾರೆ ಈ ಮಾಹಿತಿಯನ್ನು ಬಿಎಸ್ಎಫ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ಜಮ್ಮು, ರಾಜಸ್ಥಾನ ಮತ್ತು ಪಂಜಾಬ್ನ ಅಮೃತಸರ ಸೇರಿ ಭಾರತದ 15 ನಗರಗಳನ್ನು ಗುರಿಯಾಗಿಸಿ ಪಾಕಿಸ್ತಾನ ಮಿಸೈಲ್, ಡ್ರೋನ್ ದಾಳಿ ನಡೆಸಿತು. ಭಾರತೀಯ ಸೇನೆ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಪಾಕ್ನ ಎಲ್ಲಾ ಮಿಸೈಲ್ಗಳನ್ನು ಹೊಡೆದುರುಳಿಸಿದೆ.
10 ಸಾವಿರ ಮಂದಿ ಸ್ಥಳಾಂತರ: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನತೆ ಹೆಚ್ಚಿದ ಬೆನ್ನಲ್ಲೇ ಗಡಿ ಗ್ರಾಮಗಳಿಂದ ಸುಮಾರು 10,000 ನಿವಾಸಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಪಾಕ್ ಅಮಾಯಕರನ್ನ ಗುರಿಯಾಗಿಸಿ ಶೆಲ್ ದಾಳಿ ನಡೆಸಿದೆ. ಪಾಕ್ ದಾಳಿಯಿಂದ ಪೂಂಚ್ ಜಿಲ್ಲೆ ಮಾತ್ರವಲ್ಲದೆ, ಉರಿ, ಬಾರಾಮುಲ್ಲಾ, ಕರ್ನಾ, ತಂಗ್ಧರ್, ಮೆಂಧರ್ ಸೇರಿದಂತೆ ವಿವಿಧೆಡೆ ನಾಗರಿಕರ ಮನೆ ಮಳಿಗೆಗಳು ಹಾನಿಗೊಳಗಾಗಿವೆ.
ಮಿಲಿಟರಿ ಕಂಟೋನ್ಮೆಂಟ್ಗಳೇ ಶಿಫ್ಟ್: ಇನ್ನೂ ಭಾರತೀಯ ರಕ್ಷಣಾ ಪಡೆಗಳ ದಿಟ್ಟ ಉತ್ತರಕ್ಕೆ ಕಕ್ಕಾಬಿಕ್ಕಿಯಾಗಿರುವ ಪಾಕಿಸ್ತಾನದ ಸಿಂಧ್, ಪಂಜಾಬ್ ಕಂಟೋನ್ಮೆಂಟ್ಗಳಲ್ಲಿ ಭೀತಿ ಹೆಚ್ಚಾಗಿದೆ. ಹೀಗಾಗಿ ಮಿಲಿಟರಿ ಕಂಟೋನ್ಮೆಂಟ್ಗಳನ್ನ ಸಾಮೂಹಿಕವಾಗಿ ಸ್ಥಳಾಂತರ ಮಾಡಿಕೊಳ್ಳುತ್ತಿದೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...