- ಭಾರತ ರತ್ನ ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ
ಬೆಂಗಳೂರು: ‘ಲಿಖಿತ ರೂಪದಲ್ಲಿರುವ ಅತ್ಯುತ್ತಮ ಸಂವಿಧಾನ ನಮ್ಮ ಭಾರತ ಸಂವಿಧಾನ’ ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಬಿಎಂಪಿ ವತಿಯಿಂದ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಹಮ್ಮಿಕೊಂಡಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಾ. ಬಿ.ಆರ್ ಅಂಬೇಡ್ಕರ್ ರವರು ಇಡೀ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ಕಲ್ಪಿಸಿಕೊಟ್ಟವರು. ಅದು ಇಡೀ ಪ್ರಪಂಚದಲ್ಲಿಯೇ ಉತ್ತಮವಾದ, ವಿವರಾತ್ಮಕವಾದ ಸಂವಿಧಾನವಾಗಿದೆ. ಇದು ಕೇವಲ ಭಾರತಕ್ಕೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ವಿಶ್ವದ ಅನೇಕ ದೇಶಗಳಿಗೆ ಮುನ್ನುಡಿಯಾಗಲಿದೆ ಎಂದು ಹೇಳಿದರು.
ಪೌರಕರ್ಮಿಕರಿಗಾಗಿ ಒಂಟಿ ಮನೆ ಯೋಜನೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿವಿಧ ಸೌಲಭ್ಯ, ಧನಸಹಾಯ, ಬೋನಸ್ ನೀಡಲಾಗುತ್ತಿದೆ. ಹಲವಾರು ಹಿತರಕ್ಷಣಾ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನವನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಕಳೆದ ಬಾರಿ ಆಯವ್ಯಯಕ್ಕಿಂತ ಹೆಚ್ಚಿನ ಅನುದಾನವನ್ನು ಈ ಬಾರಿ ಮಿಸಲಿಡಲಾಗಿದೆ ಎಂದು ಹೇಳಿದರು.
12,692 ಪೌರಕಾರ್ಮಿಕರ ಕಾಯಂ: ಪೌರಕಾರ್ಮಿಕರ ಒಳಿತಿಗಾಗಿ ಪಾಲಿಕೆ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ 12,692 ನೇರ ವೇತನ ಪೌರಕಾರ್ಮಿಕರನ್ನು ಕಾಯಂ ಮಾಡಿಕೊಳ್ಳುತ್ತಿದ್ದೇವೆ. ಪೌರಕಾರ್ಮಿಕರ ಕಾಯಂಮಾತಿಗೆ ಪ್ರಮುಖ ಕಾರಣೀಕರ್ತರು ಮುಖ್ಯ ಆಯುಕ್ತರು, ವಿಶೇಷ ಆಯುಕ್ತರು, ವಲಯ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಮುತುವರ್ಜಿ ವಹಿಸಿದ್ದು, ಅವರೆಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ.
ಮೇ 1 ರಂದು ನೇಮಕಾತಿ ಆದೇಶ ವಿತರಣೆ: ಪೌರಕಾರ್ಮಿಕರನ್ನು ಖಾಯಂ ಮಾಡುವ ವೇಳೆ ಸಾಕಷ್ಟು ದೂರುಗಳು, ಮೋಸ, ದುರುಪಯೋಗಗಳಿಗೆ ಯಾವ ಅಧಿಕಾರಿಗಳೂ ಆಸ್ಪದ ನೀಡದೆ, ಖಾಯಮಾತಿ ಪ್ರಕ್ರಿಯೆಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಖಾಯಂ ಆದ ನಂತರ ಪೌರಕಾರ್ಮಿಕರು ಮುಂದಿನ ದಿನಗಳಲ್ಲಿ ನೆಮ್ಮದಿ ಜೀವನ ಸಾಗಿಸಲು ಅನುಕೂಲವಾಗಲಿದೆ. 1ನೇ ಮೇ 2025 ರಂದು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಖಾಯಂ ಆದವರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ರವರ ಕುರಿತಂತಹ ಪುಸ್ತಕಗಳನ್ನು ನಾವೆಲ್ಲರೂ ಓದಿ ಅರಿತುಕೊಳ್ಳಬೇಕಿದೆ. ಅವರ ವ್ಯಕ್ತಿತ್ವವನ್ನು ನಾವು ಎಲ್ಲರಿಗೂ ಪರಿಚಯಿಸಬೇಕು. ಅವರ ಎಲ್ಲಾ ವಿಚಾರಧಾರೆಗಳನ್ನು ಇತರರಿಗೂ ತಿಳಿಯುವ ಹಾಗೆ ಮಾಡಬೇಕೆಂದು ಅಭಿಪ್ರಾಯಪಟ್ಟರು.
ಪೌರಕಾರ್ಮಿಕರ ಮಕ್ಕಳು ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಗಳಿಸಿದವರಿಗೆ ಇಂದು ಸನ್ಮಾನ ಮಾಡಿ, ಅವರೆಲ್ಲರಿಗೂ “ಡಾ. ಬಿ.ಆರ್ ಅಂಬೇಡ್ಕರ್ ರವರ ವಿಚಾರಗಳು” ಎಂಬ ಪುಸ್ತಕವನ್ನು ನೀಡಲಾಗಿದೆ. ಅದನ್ನು ಸಂಪೂರ್ಣವಾಗಿ ಓದಿ ಬೇರೆಯವರಿಗೂ ಅದನ್ನು ಓದಿ ತಿಳಿದುಕೊಳ್ಳಲು ಪ್ರೇರಣೆ ನೀಡಬೇಕೆಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ: ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ-2025 ಕಾರ್ಯಕ್ರಮಕ್ಕೂ ಮುಂಚಿತವಾಗಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ ಹಾಗೂ ಪೌರಕಾರ್ಮಿಕರ ಪಿತಾಮಹ ಐ.ಪಿ.ಡಿ ಸಾಲಪ್ಪ ರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
ಪೌರಕಾರ್ಮಿಕರ ಮಕ್ಕಳಿಗೆ ಸನ್ಮಾನ: ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿಯಲ್ಲಿ ಉತ್ತಮ ಅಂಕ ಪಡೆದ ಪೌರಕಾರ್ಮಿಕರ 46 ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಅತ್ಯುತ್ತಮ ಪೌರಕಾರ್ಮಿಕರಿಗೆ ಸನ್ಮಾನ: ಪಾಲಿಕೆಯ ಎಂಟು ವಲಯಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 17 ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಪೌರಕಾರ್ಮಿಕರಿಗೆ ಬೋನಸ್: ಡಾ: ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಪ್ರಯುಕ್ತ ಖಾಯಂ ಪೌರಕಾರ್ಮಿಕರಿಗೆ 22,000 ರೂ. ಹಾಗೂ ನೇರ ವೇತನ ಪೌರಕಾರ್ಮಿಕರಿಗೆ 8,000 ರೂ. ಗಳ ಬೋನಸ್ ನೀಡಲಾಗುವುದು.
ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಕರೀಗೌಡ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಪೌರಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...