Please assign a menu to the primary menu location under menu

CrimeNEWSನಮ್ಮಜಿಲ್ಲೆ

BMTC ಚಾಲಕನ ಮೇಲೆ ಕುಮಾರಸ್ವಾಮಿ ಲೇಔಟ್‌ನಲ್ಲಿ ಮಚ್ಚಿನಿಂದ ಹಲ್ಲೆ: ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ ಅದರಲ್ಲೂ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ನೌಕರರು ಜೀವ ಭಯದಲ್ಲೇ ಕರ್ತವ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಬಂದಿದೆ.

ಹೌದು! ತಡರಾತ್ರಿ ಅಂದರೆ ಏ.5ರ ರಾತ್ರಿ 12.30ರ ಸುಮಾರಿಗೆ ಕುಮಾರಸ್ವಾಮಿ ಬಡಾವಣೆಯ ಇ ಬಸ್‌ ನಿಲ್ದಾಣಕ್ಕೆ ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳಲ್ಲಿ ಇಬ್ಬರು ನಿಗಮದ ಬಸ್‌ ಚಾಲಕನ ಮೇಲೆ ಮಚ್ಚಿನಿಂದ ಮತ್ತು ಕೈಯಿಂದ ಹಲ್ಲೆ ಮಾಡಿ ತೀವ್ರವಾಗಿ ಗಾಯಗೊಳಿಸಿದ್ದಾರೆ.

ಬಿಎಂಟಿಸಿ ಬನಶಂಕರಿ ಘಟಕ – 20ರ ಚಾಲಕ ನಾಗೇಂದ್ರ ಎಂಬುವರೆ ಅಪರಿಚಿತ ವ್ಯಕ್ತಿಗಳಿಂದ ಹಲ್ಲೆಗೊಳಗಾದವರಾಗಿದ್ದಾರೆ. ಇನ್ನು ಈ ಸಂಬಂಧ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಇಂದು (ಏ.5) ಮಧ್ಯಾಹ್ನ ದೂರು ನೀಡಿದ್ದು ಹಲ್ಲೆಕೋರರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ದೂರಿನಲ್ಲೇನಿದೆ?: ನಾಗೇಂದ್ರ ಆದ ನಾನು ಸುಮಾರು 30 ವರ್ಷಗಳಿಂದ ಬಿಎಂಟಿಸಿಯಲ್ಲಿ ಚಾಲಕನಾಗಿದ್ದು, ಎಂದಿನಂತೆ ಏ.4ರ ಮಧ್ಯಾಹ್ನ 2ಗಂಟೆಯಿಂದ ಏ.5ರ ಮಧ್ಯಾಹ್ನ 2ಗಂಟೆಯವರೆಗೆ ಮಾರ್ಗ ಸಂಖ್ಯೆ 15E/2ರಲ್ಲಿ ವಾಹನ ಸಂಖ್ಯೆ ಕೆಎ-57- ಎಫ್-2683 ರಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೆ.

ನನ್ನ ಜತೆ ನಿರ್ವಾಹಕರಾಗಿ ಮಹೇಶ್‌ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಏ.5ರ ತಡರಾತ್ರಿ 12.30ರ ಸುಮಾರಿಗೆ 15 ಇ ಬಸ್ ನಿಲ್ದಾಣದಲ್ಲಿ ಅಂದಿನ ಕತ್ಯವ ಮುಗಿಸಿ ತಂಗಿದ್ದಾಗ, ಬಸ್‌ ನಿಲ್ದಾಣದಕ್ಕೆ ಬಂದ 4 ಜನ ಅಪರಿಚಿತರು ನಿಲ್ದಾಣದಲ್ಲಿ ಜೋರಾಗಿ ಕೂಗಾಡುತ್ತಿದ್ದರು. ಆ ವೇಳೆ ನಾನು ಬಸ್‌ನಲ್ಲಿಯೇ ಕುಳಿತುಕೊಂಡು ಅವರಿಗೆ ಇಲ್ಲಿ ಕೂಗಾಡಬೇಡಿ ಹೋಗಿ ಎಂದು ಹೇಳಿದೆ. ಆ ವೇಳೆ ಅವರಲ್ಲಿ ಒಬ್ಬ ಆಸಾಮಿ ನಾವು ಏನಾದರೂ ಮಾಡುತ್ತೇವೆ ನಿನಗೆ ಯಾಕಲೆ ಎಂದು ಅವಾಚ್ಯವಾಗಿ ನಿಂದಿಸಿದ.

ಆಗ ನಾನು ಹಾಗೂ ಮಹೇಶ್ ಅವರು ಬಸ್‌ನಿಂದ ಕೆಳಗಡೆ ಇಳಿದು ಯಾಕಪ್ಪ ಆ ರೀತಿ ಬೈಯುತ್ತೀಯ ಎಂದು ಕೇಳಿದು ಹೋದೆವು. ಆಗ ನಮಗೆ ಬೈಯುತ್ತಿದ್ದ ಆಸಾಮಿಯು ಕೈಗಳಿಂದ ನನ್ನ ಮುಖಕ್ಕೆ ಹಾಗೂ ಕುತ್ತಿಗೆಗೆ ಹೊಡೆದ. ನಂತರ ಆತನ ಪಕ್ಕದಲ್ಲಿದ್ದ ಇನ್ನೊಬ್ಬ ಆಸಾಮಿಯು ಕೈಯಲ್ಲಿ ಮಚ್ಚನ್ನು ಹಿಡಿದುಕೊಂಡು ಅವಾಚ್ಯವಾಗಿ ನಿಂದಿಸಿ ಇವನನ್ನು ಸುಮ್ಮನೆ ಬಿಡಬಾರದು ಎಂದು ಬೈಯುತ್ತಾ ಬಂದು ಮಚ್ಚಿನಿಂದ ನನ್ನ ತಲೆಗೆ ಹೊಡೆದ.

ಆಗ ನಾನು ಅದನ್ನು ತಡೆಯಲು ಎಡಗೈಯನ್ನು ಅಡ್ಡ ಇಟ್ಟಾಗ ನನ್ನ ಎಡಗೈನ ಹೆಬ್ಬೆರಳಿಗೆ ಗಾಯವಾಯಿತು. ನಂತರ ಮತ್ತೆ ನನಗೆ ಮಚ್ಚಿನಿಂದ ಹೊಡೆದಾಗ ನನ್ನ ತಲೆಗೆ ಹಾಗೂ ಕಣ್ಣಿನ ಕೆಳಭಾಗದಲ್ಲಿ ತೀವ್ರತರವಾದ ರಕ್ತಗಾಯವಾಗಿದೆ. ಮತ್ತೇ ನನಗೆ ಮಚ್ಚಿನಿಂದ ಹೊಡೆಯಲು ಬಂದಿದ್ದು, ನಾವಿಬ್ಬರು ಅಲ್ಲಿಂದ ಓಡಿ ಹೋದೆವು. ಆ ಗಲಾಟೆಯಲ್ಲಿ ತನ್ನ ಕುತ್ತಿಗೆಯಲ್ಲಿದ್ದ ಸುಮಾರು 16 ಗ್ರಾಂ ಚಿನ್ನದ ಚೈನ್ ಸಹ ಕಳೆದು ಹೋಗಿದೆ.

ನಂತರ ನಾನು ಮಹೇಶ್ ಅವರ ಸಹಾಯದಿಂದ ವಾಸವಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ದೂರು ನೀಡಿದೇನೆ. ಹೀಗಾಗಿ ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿ ನನ್ನ ಮೇಲೆ ತೀವ್ರತರವಾದ ಹಲ್ಲೆ ಮಾಡಿರುವ ಈ ಅಪರಿಚಿತರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್‌ ಠಾಣೆಯಲ್ಲಿ ಚಾಲಕ ನಾಗೇಂದ್ರ ದೂರು ನೀಡಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಬಿಎಂಟಿಸಿ ಬನಶಂಕರಿ 20ನೇ ಘಟಕದ ವ್ಯವಸ್ಥಾಪಕರು, ಇತರ ಅಧಿಕಾರಿಗಳು ಪೊಲೀಸ್‌ ಠಾಣಾಧಿಕಾರಿಗಳಿಗೆ ವಿವರಿಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೋರಿದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ಮಾಡಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ