100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಿಡಿಎ ಸ್ವತ್ತು ಪ್ರಭಾವೀ ಖಾಸಗಿ ಬಿಲ್ಡರ್ ಪಾಲು: ಕ್ರಮಕ್ಕೆ ರಮೇಶ್ ಆಗ್ರಹ

ಬೆಂಗಳೂರು: 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸ್ವತ್ತನ್ನು ನಾಲ್ಕೈದು ಮಂದಿ ಭ್ರಷ್ಟಾತಿ ಭ್ರಷ್ಟ ಅಧಿಕಾರಿಗಳು ಪ್ರಭಾವೀ ಖಾಸಗಿ ಬಿಲ್ಡರ್ ಒಬ್ಬನ ಹೆಸರಿಗೆ ನೋಂದಣಿ ಮಾಡಿಕೊಟ್ಟಿರುವ ಬೃಹತ್ ಭೂ ಹಗರಣ” ನಡೆದೊದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ರಚಿಸಿದ ಮೊಟ್ಟ ಮೊದಲ ಎರಡು ಬಡಾವಣೆಗಳ ಪೈಕಿ ಒಂದು ಎಂಬ ಖ್ಯಾತಿಯ ಮತ್ತು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣಗೊಂಡ ಏಷ್ಯದ ಪ್ರಪ್ರಥಮ ಬಡಾವಣೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಯನಗರ ಬಡಾವಣೆಯ ಒಂದನೇ ಬ್ಲಾಕಿನಲ್ಲಿರುವ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ 30 ಗುಂಟೆ (ಮುಕ್ಕಾಲು ಎಕರೆ) ಸ್ವತ್ತೂ ಸೇರಿದಂತೆ ನೂರಾರು ಎಕರೆ ವಿಸ್ತೀರ್ಣದ ಸ್ವತ್ತುಗಳನ್ನು 1948ರಲ್ಲಿ City Improvement Trust Board (CITB ಅಥವಾ ಈಗಿನ BDA) ಜಯನಗರ ಬಡಾವಣೆ ನಿರ್ಮಾಣಕ್ಕೆಂದು ಭೂಸ್ವಾಧೀನಪಡಿಸಿಕೊಂಡಿತ್ತು.
ಈ ರೀತಿ ಭೂಸ್ವಾಧೀನಪಡಿಸಿಕೊಂಡಿದ್ದ ನೂರಾರು ಎಕರೆಗಳಷ್ಟು ವಿಸ್ತೀರ್ಣದ ಜಮೀನುಗಳ ಪೈಕಿ, ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ 30 ಗುಂಟೆ (32,670 ಚ. ಅಡಿ) ವಿಸ್ತೀರ್ಣದ ಸ್ವತ್ತಿನಲ್ಲಿ “ಹೂವು – ಹಣ್ಣುಗಳನ್ನು ಬೆಳೆಯುವ ಸಸಿಗಳನ್ನು ಪೋಷಿಸುವ ನರ್ಸರಿ ಇದ್ದ ಕಾರಣ, ಆ ನರ್ಸರಿ ಮಾಲೀಕರಿಂದ “ನರ್ಸರಿಯನ್ನು ನಡೆಸಿಕೊಂಡು ಹೋಗಲು ಇನ್ನಷ್ಟು ಕಾಲಾವಕಾಶ ನೀಡಿ ಮತ್ತು ಮುಂದೆ ನರ್ಸರಿಯನ್ನು ಮುಚ್ಚುವ ಸಮಯದಲ್ಲಿ CITB ಯ ವಶಕ್ಕೆ ಒಪ್ಪಿಸುತ್ತೇವೆ”ಎಂಬರ್ಥದ ಮುಚ್ಚಳಿಕೆ ಪತ್ರವನ್ನು CITB ಅಧಿಕಾರಿಗಳು ಸದರಿ ಸ್ವತ್ತಿನ ಭೂ ಮಾಲೀಕರಿಂದ ಲಿಖಿತ ರೂಪದಲ್ಲಿ ಬರೆಯಿಸಿಕೊಂಡಿದ್ದರು.
ಅಲ್ಲದೇ ಸದರೀ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ ಭೂ ಮಾಲೀಕರಿಗೆ CITB ವತಿಯಿಂದ “ಭೂ ಸ್ವಾಧೀನ ಪ್ರಕ್ರಿಯೆ”ಗೆ ಸಂಬಂಧಿಸಿದಂತೆ ನ್ಯಾಯಯುತವಾದ ಪರಿಹಾರ ಧನವೂ ಸಹ ಬಿಡುಗಡೆಯಾಗಿತ್ತು. ಈ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ 30 ಗುಂಟೆ ಜಾಗದಲ್ಲಿದ್ದ ನರ್ಸರಿಯು ಕಳೆದ ಐದು ವರ್ಷಗಳ ಹಿಂದೆಯೇ ಸ್ಥಗಿತಗೊಂಡಿತ್ತು. ಈ ರೀತಿ ಸ್ಥಗಿತಗೊಂಡಿದ್ದ ನರ್ಸರಿಯ ಜಾಗವನ್ನು 1948 ರಲ್ಲಿ ಆ ಭೂ ಮಾಲೀಕರಿಂದ ಮುಚ್ಚಳಿಕೆ ಬರೆಯಿಸಿಕೊಂಡಿದ್ದ ಪತ್ರದಲ್ಲಿನ ಷರತ್ತಿನಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕಾನೂನು ರೀತ್ಯಾ ತಮ್ಮ ವಶಕ್ಕೆ ಪಡೆದುಕೊಳ್ಳಬೇಕಿತ್ತು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯವನ್ನು ದುರ್ಬಳಕೆ ಮಾಡಿಕೊಂಡಿರುವ ಬಿಲ್ಡರ್ ಒಬ್ಬ ತನ್ನ ಆರ್ಥಿಕ ಪ್ರಭಾವದಿಂದ 100 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯ ಹೊಂದಿರುವ 32,670 ಚ. ಅಡಿಗಳಷ್ಟು ವಿಸ್ತೀರ್ಣದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಈ ಅಮೂಲ್ಯ ಸ್ವತ್ತನ್ನು 1948 ರಲ್ಲೇ ತಮ್ಮ ಪಾಲಿನ ಪರಿಹಾರಧನವನ್ನು ಪಡೆದಿದ್ದ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ ಭೂ ಮಾಲೀಕರಿಂದ ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ಸ್ವತ್ತಿಗೆ ಸಂಬಂಧಿಸಿದಂತೆ ಪ್ರಸ್ತುತ ಇರುವ 23 ಜನರಿಂದ ದಿನಾಂಕ 02/01/2024 ರಂದು ₹ 23.76 ಕೋಟಿ ಮೊತ್ತವನ್ನು ನಮೂದಿಸಿ, ಹತ್ತಾರು ಲಕ್ಷ ರೂಪಾಯಿಗಳನ್ನು ಲಂಚದ ರೂಪದಲ್ಲಿ ನೀಡಿ ಕೋರಮಂಗಲದಲ್ಲಿರುವ ಬೊಮನಹಳ್ಳಿ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ “Sale Agreement”(ಕ್ರಯದ ಕರಾರು ಪತ್ರ) ಮಾಡಿಸಿಕೊಂಡಿದ್ದಾರೆ !!!
ಅದಾದ ನಂತರ ಇದೀಗ, ಅದೇ ಸ್ವತ್ತನ್ನು ಅಶೋಕ್ ಧಾರಿವಾಲ್ ಎಂಬ ಕುಖ್ಯಾತ ಬಿಲ್ಡರ್ ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳ ಕಛೇರಿಯಲ್ಲಿ ತಮ್ಮ ಹೆಸರಿಗೆ “ಕ್ರಯ ಪತ್ರ”ಮಾಡಿಸಿಕೊಂಡಿದ್ದು, Sale Agreement (ಕ್ರಯದ ಕರಾರು ಪತ್ರ) ದಲ್ಲಿ ಸಹಿ ಹಾಕಿದ್ದ 23 ಜನರ ಪೈಕಿ ‘ಶಾಂತಕುಮಾರ್’ಎಂಬ ವ್ಯಕ್ತಿಯು “ಸಹಿ” ಹಾಕದೇ ಇರುವ ಕಾರಣ, ಈ ನೊಂದಣಿ ಪ್ರಕ್ರಿಯೆಯನ್ನು “Pending Registration” ಎಂದು ಬಾಕಿ ಇಟ್ಟಿರುತ್ತಾರೆ.
₹ 100 ಕೋಟಿಗಳಿಗೂ ಹೆಚ್ಚು ಮೌಲ್ಯದ ಅತ್ಯಮೂಲ್ಯ BDA ಸ್ವತ್ತನ್ನು ಅಶೋಕ್ ಧಾರೀವಾಲ್ ಎಂಬ ಸರ್ಕಾರಿ ನೆಲಗಳ್ಳನೊಬ್ಬ ಕಬಳಿಸಲು ಸಹಕಾರ ನೀಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿಗಳ ವಿರುದ್ಧ ಮತ್ತು BDA ಸ್ವತ್ತು ಎಂಬ ಸತ್ಯ ತಿಳಿದಿದ್ದರೂ ಸಹ ಹತ್ತಾರು ಲಕ್ಷ ಲಂಚ ಪಡೆದು, ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದಿದ್ದರೂ ಸಹ ಕಾನೂನುಬಾಹಿರವಾಗಿ ನೋಂದಣಿ ಮಾಡಿಕೊಟ್ಟಿರುವ ಬೊಮ್ಮನಹಳ್ಳಿ ಉಪ ನೊಂದಣಾಧಿಕಾರಿ ಮತ್ತು ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳ ವಿರುದ್ಧ ಹಾಗೂ ಬಿಲ್ಡರ್ ವಿರುದ್ಧ ಕಾನೂನು ರೀತ್ಯಾ ಪ್ರಕರಣಗಳನ್ನು ದಾಖಲಿಸುವ ಸಂಬಂಧ ಸೂಕ್ತ ಕ್ರಮ ವಹಿಸಬೇಕೆಂದು ಮತ್ತು ಕೂಡಲೇ ಈ ಅತ್ಯಮೂಲ್ಯ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಶಕ್ಕೆ ಪಡೆದುಕೊಳ್ಳುವ ಸಂಬಂಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂಪೂರ್ಣ ದಾಖಲೆಗಳ ಸಹಿತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಆಗ್ರಹಿಸಿದ್ದಾರೆ.
ಹಾಗೆಯೇ ಬೊಮ್ಮನಹಳ್ಳಿ ಉಪ ನೊಂದಣಾಧಿಕಾರಿ ಮತ್ತು ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳ ವಿರುದ್ಧ ಹಾಗೂ ಅಶೋಕ್ ಧಾರಿವಾಲ್ ಎಂಬ ಕುಖ್ಯಾತ ಬಿಲ್ಡರ್ ವಿರುದ್ಧ ಕಾನೂನು ರೀತ್ಯಾ ಪ್ರಕರಣಗಳನ್ನು ದಾಖಲಿಸುವ ಸಂಬಂಧ ಸೂಕ್ತ ಕ್ರಮ ವಹಿಸುವಂತೆ ಮತ್ತು ಕೂಡಲೇ ಈ ಅತ್ಯಮೂಲ್ಯ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಶಕ್ಕೆ ವಹಿಸಿಕೊಡುವ ಸಂಬಂಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯದ ಕಂದಾಯ ಸಚಿವರಿಗೂ ಒತ್ತಾಯಿಸಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...