100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಿಡಿಎ ಸ್ವತ್ತು ಪ್ರಭಾವೀ ಖಾಸಗಿ ಬಿಲ್ಡರ್ ಪಾಲು: ಕ್ರಮಕ್ಕೆ ರಮೇಶ್ ಆಗ್ರಹ

ಬೆಂಗಳೂರು: 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸ್ವತ್ತನ್ನು ನಾಲ್ಕೈದು ಮಂದಿ ಭ್ರಷ್ಟಾತಿ ಭ್ರಷ್ಟ ಅಧಿಕಾರಿಗಳು ಪ್ರಭಾವೀ ಖಾಸಗಿ ಬಿಲ್ಡರ್ ಒಬ್ಬನ ಹೆಸರಿಗೆ ನೋಂದಣಿ ಮಾಡಿಕೊಟ್ಟಿರುವ ಬೃಹತ್ ಭೂ ಹಗರಣ” ನಡೆದೊದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ರಚಿಸಿದ ಮೊಟ್ಟ ಮೊದಲ ಎರಡು ಬಡಾವಣೆಗಳ ಪೈಕಿ ಒಂದು ಎಂಬ ಖ್ಯಾತಿಯ ಮತ್ತು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣಗೊಂಡ ಏಷ್ಯದ ಪ್ರಪ್ರಥಮ ಬಡಾವಣೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಜಯನಗರ ಬಡಾವಣೆಯ ಒಂದನೇ ಬ್ಲಾಕಿನಲ್ಲಿರುವ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ 30 ಗುಂಟೆ (ಮುಕ್ಕಾಲು ಎಕರೆ) ಸ್ವತ್ತೂ ಸೇರಿದಂತೆ ನೂರಾರು ಎಕರೆ ವಿಸ್ತೀರ್ಣದ ಸ್ವತ್ತುಗಳನ್ನು 1948ರಲ್ಲಿ City Improvement Trust Board (CITB ಅಥವಾ ಈಗಿನ BDA) ಜಯನಗರ ಬಡಾವಣೆ ನಿರ್ಮಾಣಕ್ಕೆಂದು ಭೂಸ್ವಾಧೀನಪಡಿಸಿಕೊಂಡಿತ್ತು.
ಈ ರೀತಿ ಭೂಸ್ವಾಧೀನಪಡಿಸಿಕೊಂಡಿದ್ದ ನೂರಾರು ಎಕರೆಗಳಷ್ಟು ವಿಸ್ತೀರ್ಣದ ಜಮೀನುಗಳ ಪೈಕಿ, ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ 30 ಗುಂಟೆ (32,670 ಚ. ಅಡಿ) ವಿಸ್ತೀರ್ಣದ ಸ್ವತ್ತಿನಲ್ಲಿ “ಹೂವು – ಹಣ್ಣುಗಳನ್ನು ಬೆಳೆಯುವ ಸಸಿಗಳನ್ನು ಪೋಷಿಸುವ ನರ್ಸರಿ ಇದ್ದ ಕಾರಣ, ಆ ನರ್ಸರಿ ಮಾಲೀಕರಿಂದ “ನರ್ಸರಿಯನ್ನು ನಡೆಸಿಕೊಂಡು ಹೋಗಲು ಇನ್ನಷ್ಟು ಕಾಲಾವಕಾಶ ನೀಡಿ ಮತ್ತು ಮುಂದೆ ನರ್ಸರಿಯನ್ನು ಮುಚ್ಚುವ ಸಮಯದಲ್ಲಿ CITB ಯ ವಶಕ್ಕೆ ಒಪ್ಪಿಸುತ್ತೇವೆ”ಎಂಬರ್ಥದ ಮುಚ್ಚಳಿಕೆ ಪತ್ರವನ್ನು CITB ಅಧಿಕಾರಿಗಳು ಸದರಿ ಸ್ವತ್ತಿನ ಭೂ ಮಾಲೀಕರಿಂದ ಲಿಖಿತ ರೂಪದಲ್ಲಿ ಬರೆಯಿಸಿಕೊಂಡಿದ್ದರು.
ಅಲ್ಲದೇ ಸದರೀ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ ಭೂ ಮಾಲೀಕರಿಗೆ CITB ವತಿಯಿಂದ “ಭೂ ಸ್ವಾಧೀನ ಪ್ರಕ್ರಿಯೆ”ಗೆ ಸಂಬಂಧಿಸಿದಂತೆ ನ್ಯಾಯಯುತವಾದ ಪರಿಹಾರ ಧನವೂ ಸಹ ಬಿಡುಗಡೆಯಾಗಿತ್ತು. ಈ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ 30 ಗುಂಟೆ ಜಾಗದಲ್ಲಿದ್ದ ನರ್ಸರಿಯು ಕಳೆದ ಐದು ವರ್ಷಗಳ ಹಿಂದೆಯೇ ಸ್ಥಗಿತಗೊಂಡಿತ್ತು. ಈ ರೀತಿ ಸ್ಥಗಿತಗೊಂಡಿದ್ದ ನರ್ಸರಿಯ ಜಾಗವನ್ನು 1948 ರಲ್ಲಿ ಆ ಭೂ ಮಾಲೀಕರಿಂದ ಮುಚ್ಚಳಿಕೆ ಬರೆಯಿಸಿಕೊಂಡಿದ್ದ ಪತ್ರದಲ್ಲಿನ ಷರತ್ತಿನಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಕಾನೂನು ರೀತ್ಯಾ ತಮ್ಮ ವಶಕ್ಕೆ ಪಡೆದುಕೊಳ್ಳಬೇಕಿತ್ತು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯವನ್ನು ದುರ್ಬಳಕೆ ಮಾಡಿಕೊಂಡಿರುವ ಬಿಲ್ಡರ್ ಒಬ್ಬ ತನ್ನ ಆರ್ಥಿಕ ಪ್ರಭಾವದಿಂದ 100 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯ ಹೊಂದಿರುವ 32,670 ಚ. ಅಡಿಗಳಷ್ಟು ವಿಸ್ತೀರ್ಣದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಈ ಅಮೂಲ್ಯ ಸ್ವತ್ತನ್ನು 1948 ರಲ್ಲೇ ತಮ್ಮ ಪಾಲಿನ ಪರಿಹಾರಧನವನ್ನು ಪಡೆದಿದ್ದ ಸಿದ್ಧಾಪುರ ಗ್ರಾಮದ ಸರ್ವೆ ನಂ: 27/3 ರ ಭೂ ಮಾಲೀಕರಿಂದ ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ಸ್ವತ್ತಿಗೆ ಸಂಬಂಧಿಸಿದಂತೆ ಪ್ರಸ್ತುತ ಇರುವ 23 ಜನರಿಂದ ದಿನಾಂಕ 02/01/2024 ರಂದು ₹ 23.76 ಕೋಟಿ ಮೊತ್ತವನ್ನು ನಮೂದಿಸಿ, ಹತ್ತಾರು ಲಕ್ಷ ರೂಪಾಯಿಗಳನ್ನು ಲಂಚದ ರೂಪದಲ್ಲಿ ನೀಡಿ ಕೋರಮಂಗಲದಲ್ಲಿರುವ ಬೊಮನಹಳ್ಳಿ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ “Sale Agreement”(ಕ್ರಯದ ಕರಾರು ಪತ್ರ) ಮಾಡಿಸಿಕೊಂಡಿದ್ದಾರೆ !!!

ಅದಾದ ನಂತರ ಇದೀಗ, ಅದೇ ಸ್ವತ್ತನ್ನು ಅಶೋಕ್ ಧಾರಿವಾಲ್ ಎಂಬ ಕುಖ್ಯಾತ ಬಿಲ್ಡರ್ ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳ ಕಛೇರಿಯಲ್ಲಿ ತಮ್ಮ ಹೆಸರಿಗೆ “ಕ್ರಯ ಪತ್ರ”ಮಾಡಿಸಿಕೊಂಡಿದ್ದು, Sale Agreement (ಕ್ರಯದ ಕರಾರು ಪತ್ರ) ದಲ್ಲಿ ಸಹಿ ಹಾಕಿದ್ದ 23 ಜನರ ಪೈಕಿ ‘ಶಾಂತಕುಮಾರ್’ಎಂಬ ವ್ಯಕ್ತಿಯು “ಸಹಿ” ಹಾಕದೇ ಇರುವ ಕಾರಣ, ಈ ನೊಂದಣಿ ಪ್ರಕ್ರಿಯೆಯನ್ನು “Pending Registration” ಎಂದು ಬಾಕಿ ಇಟ್ಟಿರುತ್ತಾರೆ.
₹ 100 ಕೋಟಿಗಳಿಗೂ ಹೆಚ್ಚು ಮೌಲ್ಯದ ಅತ್ಯಮೂಲ್ಯ BDA ಸ್ವತ್ತನ್ನು ಅಶೋಕ್ ಧಾರೀವಾಲ್ ಎಂಬ ಸರ್ಕಾರಿ ನೆಲಗಳ್ಳನೊಬ್ಬ ಕಬಳಿಸಲು ಸಹಕಾರ ನೀಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿಗಳ ವಿರುದ್ಧ ಮತ್ತು BDA ಸ್ವತ್ತು ಎಂಬ ಸತ್ಯ ತಿಳಿದಿದ್ದರೂ ಸಹ ಹತ್ತಾರು ಲಕ್ಷ ಲಂಚ ಪಡೆದು, ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದಿದ್ದರೂ ಸಹ ಕಾನೂನುಬಾಹಿರವಾಗಿ ನೋಂದಣಿ ಮಾಡಿಕೊಟ್ಟಿರುವ ಬೊಮ್ಮನಹಳ್ಳಿ ಉಪ ನೊಂದಣಾಧಿಕಾರಿ ಮತ್ತು ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳ ವಿರುದ್ಧ ಹಾಗೂ ಬಿಲ್ಡರ್ ವಿರುದ್ಧ ಕಾನೂನು ರೀತ್ಯಾ ಪ್ರಕರಣಗಳನ್ನು ದಾಖಲಿಸುವ ಸಂಬಂಧ ಸೂಕ್ತ ಕ್ರಮ ವಹಿಸಬೇಕೆಂದು ಮತ್ತು ಕೂಡಲೇ ಈ ಅತ್ಯಮೂಲ್ಯ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಶಕ್ಕೆ ಪಡೆದುಕೊಳ್ಳುವ ಸಂಬಂಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂಪೂರ್ಣ ದಾಖಲೆಗಳ ಸಹಿತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಆಗ್ರಹಿಸಿದ್ದಾರೆ.
ಹಾಗೆಯೇ ಬೊಮ್ಮನಹಳ್ಳಿ ಉಪ ನೊಂದಣಾಧಿಕಾರಿ ಮತ್ತು ರಾಜರಾಜೇಶ್ವರಿನಗರ ಉಪ ನೊಂದಣಾಧಿಕಾರಿಗಳ ವಿರುದ್ಧ ಹಾಗೂ ಅಶೋಕ್ ಧಾರಿವಾಲ್ ಎಂಬ ಕುಖ್ಯಾತ ಬಿಲ್ಡರ್ ವಿರುದ್ಧ ಕಾನೂನು ರೀತ್ಯಾ ಪ್ರಕರಣಗಳನ್ನು ದಾಖಲಿಸುವ ಸಂಬಂಧ ಸೂಕ್ತ ಕ್ರಮ ವಹಿಸುವಂತೆ ಮತ್ತು ಕೂಡಲೇ ಈ ಅತ್ಯಮೂಲ್ಯ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಶಕ್ಕೆ ವಹಿಸಿಕೊಡುವ ಸಂಬಂಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯದ ಕಂದಾಯ ಸಚಿವರಿಗೂ ಒತ್ತಾಯಿಸಿದ್ದಾರೆ.
Related


You Might Also Like
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಹಕಾರ ಸಂಘದ ವಾರ್ಷಿಕೋತ್ಸವ
ಬೀದರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಹಕಾರ ಸಂಘವು ತನ್ನ 30ನೇ ಸಾಮಾನ್ಯ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ರಂಗಮಂದಿರದಲ್ಲಿ ಭವ್ಯವಾಗಿ ಆಚರಿಸಿತು....
ಇತ್ತೀಚಿಗೆ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ: ಸಿಎಂ ಸಿದ್ದರಾಮಯ್ಯ ಆತಂಕ
ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ...
ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ: 1,65,000 ರೂ. ಎಗರಿಸಿದ ಹ್ಯಾಕರ್
ಬೆಂಗಳೂರು: ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ದಂಪತಿಗೆ ಸೈಬರ್ ವಂಚಕರಿಂದ ಸಂಕಷ್ಟ ಎದುರಾಗಿದೆ. ಪ್ರಿಯಾಂಕ ಉಪೇಂದ್ರ ಅವರು ಆನ್ಲೈನ್ ವಸ್ತುಗಳನ್ನು ಆರ್ಡರ್ ಮಾಡಿದ್ದಾರೆ. ಇದನ್ನೇ...
ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಈ ಕರ್ತವ್ಯ ತಪ್ಪದೇ ಎಲ್ಲರೂ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ,...
ಅವನನ್ನ ಮೂರ್ಖ ಅಂತ ಕರೆಯಬೇಕು: ಪ್ರತಾಪ್ ಸಿಂಹ ಹೆಸರು ಹೇಳದೆ ಸಿಎಂ ವಾಗ್ದಾಳಿ
ಬೆಂಗಳೂರು: ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಬಾರದು ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ....
KSRTC: ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಕೂಡ 38 ತಿಂಗಳ ಹಿಂಬಾಕಿ ಸರ್ಕಾರ ಕೊಟ್ಟರೆ ನೌಕರರು ಖುಷಿಯಾಗುತ್ತಾರೆ ಎಂದೇ ಶಿಫಾರಸು ಮಾಡಿದೆ
ಬೆಂಗಳೂರು: ಸಾರಿಗೆ ನೌಕರರಿಗೆ 2020 ಜನವರಿ 1ರಿಂದ ಜಾರಿಗೆ ಬಂದಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ತಾವು ಈಗಾಗಲೇ 14 ತಿಂಗಳ ಹಿಂಬಾಕಿಯಷ್ಟೇ...
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...