Please assign a menu to the primary menu location under menu

NEWSಕ್ರೀಡೆನಮ್ಮಜಿಲ್ಲೆ

ಐಪಿಎಲ್  ಕ್ರಿಕೆಟ್: ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಎಂಟಿಸಿ ಬಸ್ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈಗಾಗಲೇ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಾವಳಿಗೆ ತೆರಳಲು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಿಎಂಟಿಸಿ ವಿವಿಧ ಮಾರ್ಗಗಳಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದು, ಇದರಿಂದ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ   ಏ.15,  ಮೇ 4,  ಮೇ, 12 ನೇ ಮೇ 18ರಂದು  ಐಪಿಎಲ್  ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿಯನ್ನು ವೀಕ್ಷಿಸಲು ಸಹಸ್ರಾರು ಮಂದಿ ಬೆಂಗಳೂರಿಗೆ ಆಗಮಿಸಲಿದ್ದು, ಅವರಿಗೆ ಸ್ಟೇಡಿಯಂಗೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬಿಎಂಟಿಸಿ ಕ್ರಮ ಕೈಗೊಂಡಿದೆ. ಅದರಂತೆ ವಿವಿಧ ಮಾರ್ಗಗಳಲ್ಲಿ ಬಸ್ ಗಳ ವ್ಯವಸ್ಥೆ ಮಾಡಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಇನ್ನು ಕ್ರಿಕೆಟ್ ಪಂದ್ಯಾವಳಿ ನಡೆಯುವ ದಿನಗಳಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮಾರ್ಗಸಂಖ್ಯೆ ಎಸ್.ಬಿ.ಎಸ್-1 ರಿಂದ  ಕಾಡಗೋಡಿ ಬಸ್ ನಿಲ್ದಾಣ (ಹೆಚ್.ಎ.ಎಲ್ ರಸ್ತೆ), ಎಸ್.ಬಿ.ಎಸ್-13 ಮಾರ್ಗದಿಂದ ಕಾಡಗೋಡಿ ಬಸ್ ನಿಲ್ದಾಣ (ಹೂಡಿ ರಸ್ತೆ), ಜಿ-2 ಮಾರ್ಗದಿಂದ ಸರ್ಜಾಪುರ, ಜಿ-3 ಮಾರ್ಗದಿಂದ ಎಲೆಕ್ಟ್ರಾನಿಕ ಸಿಟಿ (ಹೊಸೂರು ರಸ್ತೆ). ಜಿ-4  ಮಾರ್ಗದಿಂದ ಬನ್ನೇರುಘಟ್ಟ ಮೃಗಾಲಯ, ಜಿ-6 ಮಾರ್ಗದಿಂದ ಕೆಂಗೇರಿ ಕೆ.ಹೆಚ್.ಬಿ ಕ್ವಾಟ್ರಸ್ (ಎಂ.ಸಿ.ಟಿ.ಸಿ ನಾಯಂಡಹಳ್ಳಿ).

ಇನ್ನು ಜಿ-7 ಮಾರ್ಗದಿಂದ ಜನಪ್ರಿಯ ಟೌನ್‍ಷಿಪ್ (ಮಾಗಡಿ ರಸ್ತೆ),  ಜಿ-8 ಮಾರ್ಗದಿಂದ   ನೆಲಮಂಗಲ, ಜಿ-9 ಮಾರ್ಗದಿಂದ  ಯಲಯಂಕ 5ನೇ ಹಂತ, ಜಿ-10 ಮಾರ್ಗದಿಂದ ಆರ್.ಕೆ. ಹೆಗಡೆ ನಗರ (ನಾಗವಾರ, ಟ್ಯಾನರಿ ರಸ್ತೆ), ಜಿ-11 ಮಾರ್ಗದಿಂದ ಬಾಗಲೂರು (ಹೆಣ್ಣೂರು ರಸ್ತೆ), ಕೆ.ಬಿ.ಎಸ್ 12 ಹೆಚ್.ಕೆ. ಮಾರ್ಗದಿಂದ ಹೊಸಕೋಟೆಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಕ್ರಿಕೆಟ್ ಪ್ರೇಮಿಗಳು ಈ ಮಾರ್ಗಗಳಲ್ಲಿ ಸಂಚರಿಸುವ ಬಸ್ ಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಬಹುದಾಗಿದೆ. ಮುಂದಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ಕುತೂಹಲ ಘಟ್ಟಕ್ಕೆ ಹೋಗಲಿದ್ದು, ಜೀವನದಲ್ಲಿ ಒಮ್ಮೆಯಾದರೂ ಸ್ಟೇಡಿಯಂನಲ್ಲಿ ಕುಳಿತು ಪಂದ್ಯಾವಳಿಯನ್ನು ನೋಡಬೇಕೆಂದು ಬಯಸುವವರು ಟಿಕೆಟ್ ಕಾದಿರಿಸಲು ಮುಗಿಬಿದ್ದಿದ್ದಾರೆ. ಅದರಂತೆ ಕ್ರಿಕೆಟ್ ಪ್ರೇಮಿಗಳು ಸ್ಟೇಡಿಯಂಗೆ ತೆರಳಲು ಯಾವುದೇ ರೀತಿಯ ತೊಂದರೆಯಾಗಬಾರದೆಂದು ಬಿಎಂಟಿಸಿ ಬಸ್ ವ್ಯವಸ್ಥೆಗಳನ್ನು ಕಲ್ಪಿಸಿದೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ