NEWSಕ್ರೀಡೆನಮ್ಮಜಿಲ್ಲೆ

ಐಪಿಎಲ್  ಕ್ರಿಕೆಟ್: ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಎಂಟಿಸಿ ಬಸ್ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈಗಾಗಲೇ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಾವಳಿಗೆ ತೆರಳಲು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಿಎಂಟಿಸಿ ವಿವಿಧ ಮಾರ್ಗಗಳಲ್ಲಿ ಬಸ್ ವ್ಯವಸ್ಥೆಯನ್ನು ಮಾಡಿದ್ದು, ಇದರಿಂದ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ   ಏ.15,  ಮೇ 4,  ಮೇ, 12 ನೇ ಮೇ 18ರಂದು  ಐಪಿಎಲ್  ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿಯನ್ನು ವೀಕ್ಷಿಸಲು ಸಹಸ್ರಾರು ಮಂದಿ ಬೆಂಗಳೂರಿಗೆ ಆಗಮಿಸಲಿದ್ದು, ಅವರಿಗೆ ಸ್ಟೇಡಿಯಂಗೆ ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬಿಎಂಟಿಸಿ ಕ್ರಮ ಕೈಗೊಂಡಿದೆ. ಅದರಂತೆ ವಿವಿಧ ಮಾರ್ಗಗಳಲ್ಲಿ ಬಸ್ ಗಳ ವ್ಯವಸ್ಥೆ ಮಾಡಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಇನ್ನು ಕ್ರಿಕೆಟ್ ಪಂದ್ಯಾವಳಿ ನಡೆಯುವ ದಿನಗಳಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮಾರ್ಗಸಂಖ್ಯೆ ಎಸ್.ಬಿ.ಎಸ್-1 ರಿಂದ  ಕಾಡಗೋಡಿ ಬಸ್ ನಿಲ್ದಾಣ (ಹೆಚ್.ಎ.ಎಲ್ ರಸ್ತೆ), ಎಸ್.ಬಿ.ಎಸ್-13 ಮಾರ್ಗದಿಂದ ಕಾಡಗೋಡಿ ಬಸ್ ನಿಲ್ದಾಣ (ಹೂಡಿ ರಸ್ತೆ), ಜಿ-2 ಮಾರ್ಗದಿಂದ ಸರ್ಜಾಪುರ, ಜಿ-3 ಮಾರ್ಗದಿಂದ ಎಲೆಕ್ಟ್ರಾನಿಕ ಸಿಟಿ (ಹೊಸೂರು ರಸ್ತೆ). ಜಿ-4  ಮಾರ್ಗದಿಂದ ಬನ್ನೇರುಘಟ್ಟ ಮೃಗಾಲಯ, ಜಿ-6 ಮಾರ್ಗದಿಂದ ಕೆಂಗೇರಿ ಕೆ.ಹೆಚ್.ಬಿ ಕ್ವಾಟ್ರಸ್ (ಎಂ.ಸಿ.ಟಿ.ಸಿ ನಾಯಂಡಹಳ್ಳಿ).

ಇನ್ನು ಜಿ-7 ಮಾರ್ಗದಿಂದ ಜನಪ್ರಿಯ ಟೌನ್‍ಷಿಪ್ (ಮಾಗಡಿ ರಸ್ತೆ),  ಜಿ-8 ಮಾರ್ಗದಿಂದ   ನೆಲಮಂಗಲ, ಜಿ-9 ಮಾರ್ಗದಿಂದ  ಯಲಯಂಕ 5ನೇ ಹಂತ, ಜಿ-10 ಮಾರ್ಗದಿಂದ ಆರ್.ಕೆ. ಹೆಗಡೆ ನಗರ (ನಾಗವಾರ, ಟ್ಯಾನರಿ ರಸ್ತೆ), ಜಿ-11 ಮಾರ್ಗದಿಂದ ಬಾಗಲೂರು (ಹೆಣ್ಣೂರು ರಸ್ತೆ), ಕೆ.ಬಿ.ಎಸ್ 12 ಹೆಚ್.ಕೆ. ಮಾರ್ಗದಿಂದ ಹೊಸಕೋಟೆಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಕ್ರಿಕೆಟ್ ಪ್ರೇಮಿಗಳು ಈ ಮಾರ್ಗಗಳಲ್ಲಿ ಸಂಚರಿಸುವ ಬಸ್ ಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಬಹುದಾಗಿದೆ. ಮುಂದಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ಕುತೂಹಲ ಘಟ್ಟಕ್ಕೆ ಹೋಗಲಿದ್ದು, ಜೀವನದಲ್ಲಿ ಒಮ್ಮೆಯಾದರೂ ಸ್ಟೇಡಿಯಂನಲ್ಲಿ ಕುಳಿತು ಪಂದ್ಯಾವಳಿಯನ್ನು ನೋಡಬೇಕೆಂದು ಬಯಸುವವರು ಟಿಕೆಟ್ ಕಾದಿರಿಸಲು ಮುಗಿಬಿದ್ದಿದ್ದಾರೆ. ಅದರಂತೆ ಕ್ರಿಕೆಟ್ ಪ್ರೇಮಿಗಳು ಸ್ಟೇಡಿಯಂಗೆ ತೆರಳಲು ಯಾವುದೇ ರೀತಿಯ ತೊಂದರೆಯಾಗಬಾರದೆಂದು ಬಿಎಂಟಿಸಿ ಬಸ್ ವ್ಯವಸ್ಥೆಗಳನ್ನು ಕಲ್ಪಿಸಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...