NEWSದೇಶ-ವಿದೇಶಸಂಸ್ಕೃತಿ

ಬಿಜೆಪಿಗೆ ಸ್ವಾಮಿ ವಿವೇಕಾನಂದರು ಬಳಸಿ ಬಿಸಾಡುವ ವಸ್ತುವಾಗಿದ್ದಾರೆಯೇ?: ಎಎಪಿ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ಹಾಗೂ ಸಂಘ ಪರಿವಾರ ಭಾರತದಲ್ಲಿ ಬಲವಾಗಿ ಬೇರೂರಲು ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡಿರುವುದು ಗುಟ್ಟಾಗಿ ಉಳಿದಿಲ್ಲ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕ್ರಮದ ವೇದಿಕೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗ್ರವಾಲ್ ಅವರು ಅಸಹನೆಯಿಂದ ಸ್ವಾಮಿ ವಿವೇಕಾನಂದರ ಫೋಟೊ ಯಾಕೆ ಇಟ್ಟಿದ್ದೀರಿ ಎಂದು ಪ್ರಶ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಇಂದು ಜಗದೀಶ್ ಸದಂ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಕಳೆದ 10 ವರ್ಷಗಳಿಂದ ಅಧಿಕಾರ ಸಾಧಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಈಗ ಸ್ವಾಮಿ ವಿವೇಕಾನಂದರ ಅಗತ್ಯವೂ ಇಲ್ಲ. ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯ ಅಂಗವಾಗಿ ಇರಿಸಲಾಗಿದ್ದ ಫೋಟೊವನ್ನು ಯಾಕೆ ಇಟ್ಟಿದ್ದೀರಿ ಎಂದು ಪ್ರಶ್ನಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗ್ರವಾಲ್, ಬಿಜೆಪಿ ಪಾಲಿಗೆ ವಿವೇಕಾನಂದರು ಬಳಸಿ ಬಿಸಾಡಲ್ಪಟ್ಟವರು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಕಿಡಿಕಾರಿದರು.

ಭಾರತದ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಪಸರಿಸಿದ ವೀರ ಸನ್ಯಾಸಿ, ನೈಜ ಹಿಂದೂ, ಅಪ್ರತಿಮ ವಾಗ್ಮಿ, ಅನುಪಮ ಮಾನವತಾವಾದಿ, ಯುವಪ್ರೇರಕ, ಸಿಡಿಲ ಸಂತ ಸ್ವಾಮಿ ವಿವೇಕಾನಂದರು ಹಾಕಿಕೊಟ್ಟಿರುವ ಧರ್ಮ ಮಾರ್ಗದಲ್ಲಿ ಎಂದೂ ಹೆಜ್ಜೆ ಇರಿಸದ ಬಿಜೆಪಿ, RSSನವರು ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ಬೆಂಬಲಿಸುತ್ತಿರುವ ಹೆಚ್ಚಿನ ಯುವಕರು ಸ್ವಾಮಿ ವಿವೇಕಾನಂದರ ಕಾರಣಕ್ಕಾಗಿ ಬೆಂಬಲಿಸುತ್ತಿರುವವರಾಗಿದ್ದಾರೆ. ಆದರೆ, ವಿವೇಕಾನಂದರ ಹೆಸರಲ್ಲಿ ಅಷ್ಟೂ ಯುವಕರನ್ನು ವಂಚಿಸಿದ್ದಾರೆ. ಹಿಂಸೆ, ದ್ವೇಷ, ವೈರತ್ವವವನ್ನೇ ತುಂಬಿಕೊಂಡಿರುವ ಬಿಜೆಪಿ, ಆರೆಸ್ಸೆಸ್ ನವರು ಎಂದೂ ವಿವೇಕಾನಂದರ ಪಥದಲ್ಲಿ ಹೆಜ್ಜೆ ಇರಿಸಿಲ್ಲ ಎಂದು ಜಗದೀಶ್ ಸದಂ ವಾಗ್ದಾಳಿ ನಡೆಸಿದರು.

ದೇವರು, ಧರ್ಮವನ್ನು ದುರ್ಬಳಕೆ ಮಾಡಿಕೊಂಡ ರೀತಿಯಲ್ಲೇ ಸ್ವಾಮಿ ವಿವೇಕಾನಂದರನ್ನು ದುರ್ಬಳಕೆ ಮಾಡಿಕೊಂಡರು. ಈ ಲೋಕಸಭೆ ಚುನಾವಣೆಯಲ್ಲಿ ರಾಮ ಮಂದಿರದ ಹೆಸರಲ್ಲಿ ರಾಜಕಾರಣ ಮಾಡಲು ಯತ್ನಿಸಿ ಸ್ವತಃ ಅಯೋಧ್ಯೆಯಲ್ಲೇ ಸೋತರು. ಈ ಕಾರಣಕ್ಕಾಗಿ ಬಿಜೆಪಿಯವರು ಶ್ರೀರಾಮನನ್ನೇ ನಿಂದಿಸುತ್ತಿದ್ದಾರೆ.

ಜನತೆ ಇಂತಹ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮೊದಲು ಭಗತ್ ಸಿಂಗ್ ಹೆಸರನ್ನು ಎತ್ತುತ್ತಿದ್ದರು. ಕ್ರಮೇಣ ಭಗತ್ ಸಿಂಗ್ ಅವರ ಬದುಕಿನ ಹೋರಾಟಕ್ಕೂ ತಮ್ಮ ಹೇರಿಕೆಯ ಹಿಂದುತ್ವದ ಸಿದ್ಧಾಂತಕ್ಕೂ ಸರಿ ಹೊಂದದ ಕಾರಣ ಭಗತ್ ಸಿಂಗ್ ಅವರನ್ನು ಕೈಬಿಟ್ಟರು.

ಇನ್ನು ಸ್ವಾಮಿ ವಿವೇಕಾನಂದರ ಬದುಕಿಗೂ ಬಿಜೆಪಿಗರ ಹಿಂದುತ್ವದ ಸಿದ್ಧಾಂತಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಾಗಾಗಿ ಅವರ ಹಾದಿಯನ್ನು ಎಂದೂ ತುಳಿಯದ ಬಿಜೆಪಿಗರು ಈಗೀಗ ಸ್ವಾಮಿ ವಿವೇಕಾನಂದರ ಹೆಸರನ್ನೇ ಹೇಳುತ್ತಿಲ್ಲ. ಬಿಜೆಪಿಗೆ ವಿವೇಕಾನಂದರ ಬಗ್ಗೆ ನಿಜಕ್ಕೂ ಗೌರವವಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ