NEWSನಮ್ಮಜಿಲ್ಲೆಸಂಸ್ಕೃತಿ

ರಾಜ್ಯದ ನಾಯಕರಿಗೆ ಬುದ್ಧಿ ಬರಲಿ ಎಂದು 101 ಪ್ರದಕ್ಷಿಣೆ ಹಾಕಿದ ಪ್ರಜ್ಞಾವಂತ ನಾಗರಿಕ ವೇದಿಕೆ ಕಾರ್ಯಕರ್ತರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯ ಸರ್ಕಾರ ಕಾವೇರಿ ವಿಚಾರದಲ್ಲಿ ಪೂರಕವಾಗಿ ಸ್ಪಂದಿಸಲಿ ಎಂದು ನಗರದ 101 ಗಣಪತಿ ದೇವಸ್ಥಾನದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆಯ ಕಾರ್ಯಕರ್ತರು 101 ಪ್ರದಕ್ಷಿಣೆ ಹಾಕಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ನಗರಪಾಲಿಕ ಸದಸ್ಯ ಮಾವಿ ರಾಮ್ ಪ್ರಸಾದ್ ಮತ್ತು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಚಂದ್ರಶೇಖರ್ ಅವರರ ನೇತೃತ್ವದಲ್ಲಿ ನಡೆದ ವಿನೂತನ ಪ್ರತಿಭಟನಾ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳಿಗೆ ಬುದ್ಧಿ ಬರಲಿ ಎಂದು ವಿಘ್ನ ನಿವಾರಕ ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಾಮೂಹಿಕ ನಮಸ್ಕಾರ ಮಾಡಿದ್ದಲ್ಲದೆ, ದೇಗುಲದಲ್ಲಿ 101 ಪ್ರದಕ್ಷಿಣೆ ಮಾಡುವ ಮೂಲಕ ಜನಪ್ರತಿನಿಧಿಗಳಿಗೆ ಬುದ್ಧಿಕೊಡುವಂತೆ ದೇವರಲ್ಲಿ ಬೇಡಿಕೊಂಡಿರುವುದಾಗಿ ತಿಳಿಸಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಕಾವೇರಿಗಾಗಿ ಕರೆ ನೀಡಲಾಗಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ರಾಜಕೀಯ ನಾಯಕರು ರಾಜಕೀಯ ಮರೆತು ನಾಡಿನ ಹಿತ ಕಾಪಾಡುವಂತೆ ಒತ್ತಾಯಗಳನ್ನು ಪ್ರತಿಭಟನಾಕಾರರು ಮಾಡಿದ್ದಾರೆ. ಈ ನಡುವೆ ಪ್ರಜ್ಞಾವಂತ ನಾಗರಿಕ ವೇದಿಕೆಯ ಕಾರ್ಯಕರ್ತರು ಈ ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಕಾವೇರಿ ಸಮಸ್ಯೆ ನಿವಾರಿಸಲಿ ಹಾಗೂ ನ್ಯಾಯಾಧಿಕರಣ ವಸ್ತುಸ್ಥಿತಿಯನ್ನು ಅರ್ಥ ಮಾಡಿಕೊಳ್ಳಲಿ ಮತ್ತು ರಾಜ್ಯದಲ್ಲಿ ವರುಣನ ಕೃಪೆ ಬರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಗಮನಸೆಳೆದಿದ್ದಾರೆ.

ಮಾವಿ ರಾಮ್ ಪ್ರಸಾದ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಚಂದ್ರಶೇಖರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೊಳ ಜಗದೀಶ್, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ನಂದೀಶ್ ನಾಯಕ್, ಅಪೂರ್ವ ಸುರೇಶ್, ಮೋಹನ್ ಕುಮಾರ್ ಗೌಡ, ಗೌತಮ್, ಈಶ್ವರ್ ಗೌಡ, ಸದಾಶಿವ್, ಚಂದ್ರು ಇನ್ನಿತರರು ಭಾಗಿಯಾಗಿದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ