NEWSಕೃಷಿನಮ್ಮರಾಜ್ಯ

ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌

ಸಾಲುಮರದ ತಿಮ್ಮಕ್ಕನ 113ನೇ ವರ್ಷದ ಜನ್ಮದಿನದ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಾವುದೇ ಸ್ವಾರ್ಥವಿಲ್ಲದೇ ಮರಗಳನ್ನೆ ಮಕ್ಕಳೆಂದು ಭಾವಿಸಿ ಮನುಕುಲವನ್ನು ರಕ್ಷಿಸುವ ಬಹುದೊಡ್ಡ ಕೆಲಸವನ್ನು ಸಾಲುಮರದ ತಿಮ್ಮಕ್ಕನವರು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

ವಸಂತನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ವೃಕ್ಷಮಾತೆ, ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ರವರ 113ನೇ ವರ್ಷದ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ‘ನ್ಯಾಷನಲ್ ಗ್ರೀನರಿ ಅವಾರ್ಡ್’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಬಳಿಕ ದೇಶದಾದ್ಯಂತ ನಡೆಯುವ ‘ಮಹಾವೃಕ್ಷ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಮಳೆ‌ ಬರಬೇಕಾದ ಸಂದರ್ಭಕ್ಕೆ ಬರುತ್ತಿಲ್ಲ‌. ಒಂದು ಭಾಗದಲ್ಲಿ ಮಳೆಯಾದರೆ, ಮತ್ತೊಂದು ಭಾಗದಲ್ಲಿ ಮಳೆಯಾಗುತ್ತಿಲ್ಲ. ಭೂಮಿಯ ಹಸಿರು ಪದರು ಕಡಿಮೆಯಾಗಿರುವುದೇ ಕಾರಣ. ಭಾರತದಲ್ಲಿ 21.7 ಹಸಿರು ಪದರ ಇದೆ. ಕರ್ನಾಟಕದಲ್ಲಿ ಮತ್ತಷ್ಟು ಕಡಿಮೆಯಾಗಿದೆ. ಇದರಿಂದ ಭೂಮಿಯ ಉಷ್ಣಾಂಶ ಹೆಚ್ಚಾಗುತ್ತಿದೆ. ಇದರ ಪರಿಣಾಮ ಕೋಟ್ಯಂತರ ಕೀಟಗಳು ನಾಶವಾಗುತ್ತಿವೆ. ಕೀಟಗಳು ನಾಶವಾದರೆ ಮನುಕುಲಕ್ಕೆ ಅಪಾಯ ಎದುರಾಗಲಿದೆ ಎಂದರು.

ಬಹುತೇಕ ದೇಶಗಳಲ್ಲಿ ಅಗ್ನಿ ಅವಘಡದಿಂದ ಕಾಡು ನಾಶವಾಗಿದೆ. ಅರಣ್ಯ ಭೂಮಿ ಕ್ಷೀಣಿಸುತ್ತಿದೆ. ಇದು ಮನುಕುಲಕ್ಕೆ ಅಪಾಯಕಾರಿ. ತಾಯಿ ಸಾಲುಮರದ ತಿಮ್ಮಕ್ಕನಿಗೆ ಇದ್ಯಾವುದರ ಬಗ್ಗೆಯೂ ಗೊತ್ತಿಲ್ಲ. ಆದರೂ ಮರಗಳನ್ನು ಮಕ್ಕಳೆಂದು ಭಾವಿಸಿ ಬೆಳೆಸುವ ಮುಖೇನ ಮನುಕುಲವನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ. ಅವರ ಸಾಧನೆಯನ್ನು ಎಷ್ಟು ಶ್ಲಾಘಿಸಿದರು ಸಾಲುವುದಿಲ್ಲ ಎಂದು ಹೇಳಿದರು.

ಆಕೆಯ ಹುಟ್ಟುಹಬ್ಬ ನಿಮಿತ್ತ ಮಾತ್ರ. ಈ ಕಾರ್ಯಕ್ರಮದಿಂದ ಪರಿಸರ ಸಂರಕ್ಷಣೆಯ ಸಂದೇಶ ಎಲ್ಲೆಡೆ ಹೋಗಬೇಕು. ಇಂತಹ ಕಾರ್ಯಕ್ರಮಗಳನ್ನು ಸರ್ಕಾರ ಎಂದಿಗೂ ಸಹ ಇಂತಹ ಪ್ರೋತ್ಸಾಹಿಸಿದೆ. ತಿಮ್ಮಕ್ಕನವರ ಸೇವೆ ಮಾಡುವ ಪುಣ್ಯ ನಮಗೆ ಸಿಕ್ಕಿರುವುದೇ ಪುಣ್ಯ. ಅವರ ಕಾಲಮಾನದಲ್ಲಿ ನಾವಿರುವುದೇ ಸಂತೋಷದಾಯಕ ವಿಷಯ. ಹಾಗಾಗಿ ನಾನು ಸಹ ಸಾಲುಮರದ ತಿಮ್ಮಕ್ಕನವರ ಮಗ ಉಮೇಶ ಅವರ ಜೊತೆಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗದ ಭೋವಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಖ್ಯಾತ ವೈದ್ಯ ಡಾ. ರಮಣರಾವ್, ಅಪೋಲೋ ಆಸ್ಪತ್ರೆ ಮುಖ್ಯಸ್ಥ ಡಾ. ಗೋವಿಂದಯ್ಯ ಯತೀಶ್, ಡಾ. ರಜನಿ ಸುರೇಂದರ್ ಭಟ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ಆರಂಭ- ಸ್ಥಗಿತಗೊಂಡ ರೈತರ ಕೆಲಸ ಕಾರ್ಯಗಳು ಸಾಲುಮರದ ತಿಮ್ಮಕ್ಕನವರಿಂದ ಮನುಕುಲ ರಕ್ಷಿಸುವ ಕೆಲಸವಾಗಿದೆ: ಗೃಹ ಸಚಿವ ಪರಮೇಶ್ವರ್‌ ಜನರ ಸಮಸ್ಯೆಗೆ ಧ್ವನಿಯಾಗಲಿದೆ ಎಎಪಿ: ಪಾರ್ಕ್, ಆಟದ ಮೈದಾನದಲ್ಲಿ ಅವ್ಯವಸ್ಥೆ ಇದ್ದರೆ ಫೋಟೊ, ವಿಡಿಯೋ ಕಳಿಸಿ ಬನ್ನೂರು ಕಾವೇರಿ ವೃತ್ತ, ಬಸವೇಶ್ವರ ಪ್ರತಿಮೆ ಬಳಿಯ ಸಿಸಿ ಕ್ಯಾಮರಾ ತೆರವಿಗೆ ಆಗ್ರಹಿಸಿ ಸಹಸ್ರಾರು ರೈತರ ಪ್ರತಿಭಟನೆ- ಆ... ಸೆ.27ರಂದು EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC & KSRTC ನಿವೃತ್ತ ನೌಕರರ ಸಂಘಟನೆ ಕಾರ್ಯಾಧ್ಯಕ್ಷ ನಂಜುಂಡೇಗೌಡ WELCOME TO KSRTC ಸ್ನಾನಗೃಹ ಬಸ್ - ಕಳಪೆ ಬಸ್‌ ಬಿಟ್ಟ NWKRTC ನಿಗಮಕ್ಕೆ ಛೀಮಾರಿಹಾಕಿದ ಪ್ರಯಾಣಿಕ KSRTC: ಬಸ್‌ ಬರುತ್ತಿರುವುದ ಗಮನಿಸದೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್‌ ಡಿಕ್ಕಿ- ಕಾಲು ಮುರಿತ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ ಸಲ್ಲಿಸಿದ ಕೆಎಚ್‌ಎಂ ಹೈಕೋರ್ಟ್ ಬಿಗ್ ಶಾಕ್ ಜತೆಗೆ ಸಿಎಂ ಸಿದ್ದರಾಮಯ್ಯಗೆ ನಾಳೆ ಕೂಡ ಮಹತ್ವದ ದಿನ