NEWSಉದ್ಯೋಗವಿಜ್ಞಾನ

ಜ.7 ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಸ್ಪರ್ಧೆಗೆ ನೋಂದಾಯಿಸಲು ಕೊನೆಯದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ/ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. 22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿದೆ.

2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್‌ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ. ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.

ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು. ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 18005999918 ಅನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ