CrimeNEWSನಮ್ಮಜಿಲ್ಲೆ

ಮಾನವ ಕಳ್ಳ ಸಾಗಣಿಕೆ ನಿರ್ಮೂಲನೆಗೆ ಕೈಜೋಡಿಸಿ: ನ್ಯಾಯಾಧೀಶೆ ಕೃಪಾ ಕರೆ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಮಾನವ ಕಳ್ಳ ಸಾಗಣಿಕೆಯು ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗೆ ನಾಗರೀಕ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪಟ್ಟಣದ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಲ್. ಕೃಪಾ ಕರೆ ನೀಡಿದರು.

ಅವರು ಕೆ.ಆರ್.ಪೇಟೆ ಪಟ್ಟಣದ ಎಸ್.ಎಂ.ಲಿಂಗಪ್ಪ ಸಹಕಾರ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ, ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ಜಾಗೃತಿ, ಸಾಮಾಜಿಕ ಅನಿಷ್ಠ ಪದ್ಧತಿ ನಿರ್ಮೂಲನೆ ಹಾಗೂ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ, ಸಾಮಾಜಿಕ ಅನಿಷ್ಟ ಪದ್ಧತಿ ನಿಷೇಧ ಜಾಗೃತಿ ಕುರಿತು ಪ್ರಮಾಣ ವಚನ ಬೋಧಿಸಿ ಮಾತನಾಡಿದರು.

ಮಹಿಳೆಯರು ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ಜಾಲವು ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಭಾರತ ದೇಶವು ಮಾನವ ಕಳ್ಳ ಸಾಗಣಿಕೆಯ ಜಾಲದಲ್ಲಿ 3ನೇ ಸ್ಥಾನ ಪಡೆದಿದೆ. ಮಹಿಳೆಯರು ಹಾಗೂ ಮಕ್ಕಳು ಮೋಸ ಹಾಗೂ ಆಮಿಷಕ್ಕೆ ಸಿಲುಕಿ ಮಾನವ ಕಳ್ಳ ಸಾಗಣಿಕೆ ಜಾಲದ ಬಂಧಿಗಳಾಗಿ ದೌರ್ಜನ್ಯಕ್ಕೆ ಸಿಲುಕಿ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮಾನವ ಕಳ್ಳ ಸಾಗಣಿಕೆ ಜಾಲದ ಬಗ್ಗೆ ಶ್ರೀಸಾಮಾನ್ಯರು ಸದಾ ಜಾಗೃತರಾಗಿರಬೇಕು ಎಂದರು.

ಇನ್ನು ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಸಂಘಟಿತರಾಗಿ ಹೋರಾಟ ನಡೆಸಲು ಸಜ್ಜಾಗಬೇಕು ಎಂದು ಮನವಿ ಮಾಡಿದ ನ್ಯಾಯಾಧಿಶರಾದ ಕೃಪಾ ತಾಯಿಯ ಎದೆಯ ಹಾಲು ಅಮೃತಕ್ಕೆ ಸಮಾನವಾದ್ದರಿಂದ ತಾಯಂದಿರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಸ್ತನ್ಯಪಾನದ ಮೂಲಕ ಹಾಲುಣಿಸಿ ಮಕ್ಕಳ ಆರೋಗ್ಯ ಸಂವರ್ಧನೆಗೆ ಮುಂದಾಗಬೇಕು ಎಂದು ಹೇಳಿದರು.

ತಹಶೀಲ್ದಾರ್ ಆದರ್ಶ ಮಾತನಾಡಿ, ಮಾನವ ಕಳ್ಳ ಸಾಗಾಟದ ವಿಷ ವರ್ತುಲವನ್ನು ಕತ್ತರಿಸಿ ಆರೋಗ್ಯವಂತ ನಾಗರಿಕ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು. ಜನ ಜಾಗೃತಿಯಿಂದ ಮಾತ್ರ ಸಾಮಾಜಿಕ ಅನಿಷ್ಟ ಪದ್ಧತಿ ಸೇರಿದಂತೆ ಸಾಮಾಜಿಕ ಕಟ್ಟುಪಾಡುಗಳು ಹಾಗೂ ಮೌಢ್ಯವನ್ನು ನಿರ್ಮೂಲನೆ ಮಾಡಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್ ಮಾತನಾಡಿ ಗ್ರಾಮೀಣ ಪ್ರದೇಶದ ಜನರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ಸಾಧನೆ ಮಾಡಲು ಅವಕಾಶ ಮಾಡಿಕೊಡಬೇಕು. ಜನ ಸಾಮಾನ್ಯರು ಜಾಗೃತರಾದಾಗ ಮಾತ್ರ ಮಾನವ ಕಳ್ಳ ಸಾಗಣಿಕೆ ಸೇರಿದಂತೆ ಸಾಮಾಜಿಕ ಅನಿಷ್ಠ ಪದ್ದತಿಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಬಹುದು ಎಂದು ರವಿಶಂಕರ್ ಅಭಿಪ್ರಾಯಪಟ್ಟರು.

ಸಹಾಯಕ ಸರ್ಕಾರಿ ಅಭಿಯೋಜಕ ಸುರೇಂದ್ರ, ವಕೀಲರ ಸಂಘದ ಕಾರ್ಯದರ್ಶಿ ರಾಜೇಗೌಡ, ಸರ್ಕಲ್ ಇನ್ಸ್ಪೆಕ್ಟರ್ ಆನಂದೇಗೌಡ, ಮಹಿಳಾ ಮಕ್ಕಳ ಕಲ್ಯಾಣ ಅಧಿಕಾರಿ ಅರುಣಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಸಿಡಿಪಿಒ ಪದ್ಮಾ ಸ್ವಾಗತಿಸಿದರೆ, ರೂಪ ವಂದಿಸಿದರು, ಶಿಕ್ಷಣ ಸಂಯೋಜಕ ಜ್ಞಾನೇಶ್ ಮತ್ತು ರಾಜಶ್ವನಿರೀಕ್ಷಕ ಜಗಧೀಶ್ ಕಾರ್ಯಕ್ರಮ ನಿರೂಪಿಸಿದರು.
ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌