NEWSದೇಶ-ವಿದೇಶನಮ್ಮರಾಜ್ಯ

ಒಂದೂವರೆ ಶತಮಾನದ ಬಳಿಕ ಧಾರವಾಡಕ್ಕೆ ಭೇಟಿ ನೀಡಿದ ಕನ್ನಡ ನಿಘಂಟು ತಜ್ಞ ಕಿಟೆಲ್ ಕುಟುಂಬ

Kannada lexicographer Kitel family visited Dharwad after a century and a half

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕನ್ನಡ ನಿಘಂಟು ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದ ರೆವರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ಕುಟುಂಬ ಒಂದೂವರೆ ಶತಮಾನದ ಅಂದರೆ ಬರೋಬರಿ 150 ವರ್ಷಗಳ ಬಳಿಕ ಕರ್ನಾಟಕಕ್ಕೆ ಭೇಟಿ ನೀಡಿದೆ.

ಅದರಲ್ಲೂ ವಿದ್ಯಾಕಾಶಿ ಧಾರವಾಡಕ್ಕೆ ಕಿಟೆಲ್ ಕುಟುಂಬಸ್ಥರು ಭೇಟಿ ನೀಡಿದ್ದು ಈ ವೇಳೆ ಸಂತಸ ಹಂಚಿಕೊಂಡಿದ್ದಾರೆ. ಸುದೀರ್ಘ ಅವಧಿಯ ಬಳಿಕ ಜರ್ಮನಿಯಿಂದ ಕರ್ನಾಟಕಕ್ಕೆ ಕಿಟೆಲ್‌ ಅವರ ಕುಟುಂಬ ಭೇಟಿ ನೀಡಿದ್ದು ವಿಶೇಷವಾಗಿತ್ತು.

ಕಿಟೆಲ್ ಅವರ ಮರಿಮೊಮ್ಮಗಳಾದ ಅಲ್ಮುತ್ ಬರ್ಬೋರ್ ಎಲಿನೋರ್ ಮಯರ್, ಮೊಮ್ಮಗ ಈವ್ಸ್ ಪ್ಯಾಟ್ರಿಕ್ ಹಾಗೂ ಅವರ ಸ್ನೇಹಿತ ಜಾನ್ ಫೆಡ್ರಿಕ್ ಧಾರವಾಡಕ್ಕೆ ಭೇಟಿ ನೀಡಿದವರು.

ಈ ವೇಳೆ ಧಾರವಾಡದಲ್ಲಿರುವ ಕಿಟೆಲ್ ಹೆಸರಿನ ಕಾಲೇಜು ಹಾಗೂ ಕಿಟೆಲ್‌ ಅವರು ನೆಲೆಸಿದ್ದ ಜಾಗಗಳನ್ನು ಅವರು ವೀಕ್ಷಣೆ ಮಾಡಿದರು. ಇನ್ನು ಕಿಟೆಲ್‌ ಅವರ 200ನೇ ಜನ್ಮ ದಿನಾಚರಣೆಯನ್ನು ಧಾರವಾಡದಲ್ಲೇ ಆಯೋಜಿಸಲು ಕುಟುಂಬ ನಿರ್ಧರಿಸಿರುವುದಾಗಿ ತಿಳಿಸಿದರು.

ಅಲ್ಲದೇ ಕಿಟೆಲ್‌ ಅವರು ಬಳಸುತ್ತಿದ್ದ ಕೆಲವೊಂದಿಷ್ಟು ವಸ್ತುಗಳನ್ನು ಮ್ಯೂಸಿಯಂಗೆ ಕೊಡಲು ಈ ಕುಟುಂಬ ನಿರ್ಧರಿಸಿರುವುದಾಗಿ ಹೇಳಿದೆ. ಜರ್ಮನಿಯಿಂದ ಕರ್ನಾಟಕಕ್ಕೆ ಬಂದ ಕುಟುಂಬ ಬಹಳ ಸಂತಸ ವ್ಯಕ್ತಪಡಿಸಿದ್ದು, ಇದು ನಮ್ಮ ತವರೂರಿನಂತೆ ಭಾಷವಾಗುತ್ತಿದೆ ಎಂದು ಖುಷಿಪಟ್ಟಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...