NEWSಕೃಷಿನಮ್ಮಜಿಲ್ಲೆ

ಸೆ.13ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯಿಂದ ಕಾವೇರಿ ಮೇಕೆದಾಟು ಚಿಂತನ ಮಂಥನ

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಕಾವೇರಿ ನೀರು ಬಿಡುಗಡೆಗೆ ಆದೇಶ ಹೊರಡಿಸಿರುವ ಬಗ್ಗೆ ಕಾವೇರಿ ಮೇಕೆದಾಟು ಚಿಂತನ ಮಂಥನ ಸಭೆಯನ್ನು ನಾಳೆ ಸೆ.13ರಂದು ರಾಮನಗರದಲ್ಲಿ ಆಯೋಜಿಸಲಾಗಿದೆ ಎಂದು ಸಂಚಾಲನ ಸಮಿತಿಯ ಕುರುಬೂರು ಶಾಂತಕುಮಾರ್, ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.

ಕಾವೇರಿ ಜಲಾಶಯದಲ್ಲಿ ಹಿಂದಿನ ಎರಡು ವರ್ಷಗಳು 500ಕ್ಕೂ ಹೆಚ್ಚು ಟಿಎಂಸಿ ನೀರು ತಮಿಳುನಾಡಿಗೆ ಹರಿದು ಸಮುದ್ರ ಸೇರಿದೆ. ಹೆಚ್ಚುವರಿ ನೀರನ್ನ ಮೇಕೆದಾಟು ಅಣೆಕಟ್ಟೆ ನಿರ್ಮಿಸಿ ಉಳಿಸಿಕೊಂಡಿದ್ದರೆ ಕಾವೇರಿ ಅಚ್ಚುಕಟ್ಟು ಭಾಗದ ರೈತರು ಈ ವರ್ಷ ಸಂಕಷ್ಟಪಡುವ ಪರಿಸ್ಥಿತಿ ಬರುತ್ತಲಿಲ್ಲ ಎಂದು ಹೇಳಿದ್ದಾರೆ.

ಇನ್ನು ಇಂದಿನ ಮಳೆ ಪ್ರಮಾಣ ಕಡಿಮೆ, ಬರ ಸನ್ನಿವೇಶದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಜಲಾಶಯಗಳ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿ ಕರ್ನಾಟಕದ ರೈತರನ್ನ ಬಲಿ ಕೊಟ್ಟಿದೆ ಮತ್ತೆ ನೀರು ಕೊಡುವಂತೆ ಕಾವೇರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಆದೇಶವನ್ನು ಧಿಕ್ಕರಿಸಬೇಕು ರಾಜ್ಯದ ಜನರನ್ನ ರಕ್ಷಿಸಬೇಕು ಎಂದು ಆಗ್ರಹಿಸಲಾಗುವುದು.

ರಾಜ್ಯದ ನೆಲ ಜಲ ಭಾಷೆ ವಿಚಾರ ಬಂದಾಗ ರಾಜ್ಯದ ಎಂಪಿಗಳು ಮೌನ ತಾಳುತ್ತಿದ್ದಾರೆ ಇದು ಸರಿಯಾದ ಬೆಳವಣಿಗೆ ಅಲ್ಲ. ಈ ವಿಚಾರಗಳ ಬಗ್ಗೆ ಪಕ್ಷಾತೀತವಾಗಿ ರಾಜ್ಯಾದ್ಯಂತ ಸಂಘಟಿತ ಹೋರಾಟ ನಡೆಸಲು ಕೇಂದ್ರ, ರಾಜ್ಯ ಸರ್ಕಾರದ ಗಮನ ಸೆಳೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕಾರ್ಯ ಆರಂಭ ಮಾಡಿದೆ.

ಇದರ ಎರಡನೇ ಸಭೆ ರಾಮನಗರದಲ್ಲಿ ನಾಳೆ ಸೆ.13ರಂದು ಬೆಳಗ್ಗೆ 11 ಗಂಟೆಗೆ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ ರಾಜ್ಯದ ಹಿತಶಕ್ತಿ ದೃಷ್ಟಿಯಿಂದ ಕಾವೇರಿ ಪ್ರಾಧಿಕಾರದ ಆದೇಶದ ಬಗ್ಗೆ ವಿಮರ್ಶೆ ಮುಂದಿನ ಹೋರಾಟದ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ