CrimeNEWSನಮ್ಮಜಿಲ್ಲೆ

ಪ್ರಾಂಶುಪಾಲರ ಮೊಬೈಲ್ ಕಳವು ಮಾಡಿ ₹1.40 ಲಕ್ಷ ಎಗರಿಸಿದ ಖದೀಮರು

ವಿಜಯಪಥ ಸಮಗ್ರ ಸುದ್ದಿ

ಗದಗ: ಪ್ರಾಂಶುಪಾಲರ ಮೊಬೈಲ್ ಕಳ್ಳತನ ಮಾಡಿದ್ದಲ್ಲದೇ ದುಷ್ಕರ್ಮಿಗಳು ಅದೇ ಮೊಬೈಲ್​ನ ಆನ್​ಲೈನ್ ಆ್ಯಪ್ ಮೂಲಕ 1.40 ಲಕ್ಷ ರೂ.ಗಳನ್ನು ರ್ಗಾವಣೆ ಮಾಡಿಕೊಂಡಿದ್ದಾರೆ.

ಈ ಘಟನೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಾಂಶುಪಾಲರಾದ ಶ್ರೀಕಾಂತ ಕೃಷ್ಣಾಜಿ ಜೋಷಿ ಅವರು ಎಂದಿನಂತೆ ಕಾಲೇಜಿ​​ಗೆ ತೆರಳುತ್ತಿದ್ದರು. ಈ ವೇಳೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಗಳು 20 ಸಾವಿರ ರೂ. ಮೌಲ್ಯದ ಮೊಬೈಲನ್ನು​ ಪ್ರಾಂಶುಪಾಲರ ಜೇಬಿನಿಂದ ಕದ್ದಿದ್ದಾರೆ.

ಬಳಿಕ ಮೊಬೈಲ್​​ನಲ್ಲಿದ್ದ ಎಸ್​​ಬಿಐ ಖಾತೆಯ ಯುಪಿಐ ಬಳಸಿಕೊಂಡು ಬರೋಬ್ಬರಿ 1 ಲಕ್ಷದ 40 ಸಾವಿರ ರೂ.ಗಳನ್ನು ತಮ್ಮ ಅಕೌಂಟ್​ಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಮೊದಲು 75 ಸಾವಿರ ರೂ. 50 ಸಾವಿರ ರೂ. ಹಾಗೂ 15 ಸಾವಿರ ರೂ. ಎಂಬಂತೆ ಒಟ್ಟು ಮೂರು ಹಂತದಲ್ಲಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ.

ಪ್ರಾಂಶುಪಾಲರ ಎಸ್​ಬಿಐ ಖಾತೆಯಿಂದ ಹಣವನ್ನು ಖದೀಮರು ಅಕೌಂಟ್​ಗೆ ಹಾಕಿಕೊಂಡಿದ್ದು, ಸದ್ಯ ಈ ಸಂಬಂಧ ಆರೋಪಿಗಳನ್ನು ಪತ್ತೆ ಹಚ್ಚಿ ಹಣ ವಾಪಸ್ ಕೊಡಿಸುವಂತೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ