NEWSನಮ್ಮಜಿಲ್ಲೆಸಂಸ್ಕೃತಿ

ಅದ್ದೂರಿಯಾಗಿ ನಡೆದ ಖಿದ್ಮಾ ಫೌಂಡೇಶನಿಂದ ಆಯೋಜನೆಗೊಂಡ ಖಿದ್ಮಾ ಕಾವ್ಯಾಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ಜಯನಗರದ ವಿಜಯ ಕಾಲೇಜು ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ ಭಾನುವಾರ ವಿಜಯ ಕಾಲೇಜಿನ ಹಸಿರು ಭವನದಲ್ಲಿ ಅದ್ದೂರಿಯಾಗಿ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಕವಿಗಳು ಸ್ವರಚಿತ ಕವನವನ್ನು ವಾಚನ ಮಾಡಿದರು. ಕರ್ನಾಟಕ ಸುವರ್ಣ ಮಹೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತರಷ್ಟು ಸಾಧಕರಿಗೆ ಖಿದ್ಮಾ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ವಿಜಯ ಕಾಲೇಜು ಪ್ರಾಂಶುಪಾಲರಾದ ಪ್ರೊ.ಡಿ.ಆರ್.ಸುಧಾ ಕಾರ್ಯಕ್ರಮ ಉದ್ಘಾಟಿಸಿದರು. ಯೂಸಫ್ ಎಚ್.ಬಿ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಶ್ವಿನಿ ಎಸ್. ಅಂಗಡಿ ಕವಿಗೋಷ್ಠಿಯ ಅಧ್ಯಕ್ಷತೆ ಮತ್ತು ಡಾ.ಬಿ.ಎನ್. ಸುರೇಶ್ ಬಾಬು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದರು.

ಕಾರ್ಯಕ್ರಮದಲ್ಲಿ ವಿಜಯ ಕಾಲೇಜು ಉಪ ಪ್ರಾಂಶುಪಾಲ ಪ್ರೊ.ಎಲ್.ಕೆ. ಶ್ರೀವತ್ಸ, ಖಿದ್ಮಾ ಅಧ್ಯಕ್ಷ ಹಾಶಿಂ ಬನ್ನೂರು, ಕಮಲಾಕ್ಷಿ ಸುರೇಶ್ ಕೌಜಲಗಿ, ಹುಮಾಯೂನ್, ಡಾ. ಆರ್.ಎಸ್. ರವೀಂದ್ರ, ಕೆ.ಶ್ರೀಧರ್ (ಕೆ.ಸಿರಿ), ಡಾ.ಎಂ.ಎಂ.ಪೀರಜಾದೆ, ಉಮೇಶ್ ಸಿ. ಎನ್, ಡಾ.ಗಣೇಶ್ ಗಂಗೊಳ್ಳಿ, ವಿನಯ್ ಖಾನ್, ಡಾ ಜುಬೇದಾ ಎಂ ಬದಾಮಿ, ಡಾ. ಜ್ಯೋತಿ ಶ್ರೀನಿವಾಸ್, ಶ್ರೀ ಸಿನಾನ್ ಇದ್ದಬೆಟ್ಟು, ರಾಧಾಮಣಿ ಎಂ. ಕೋಲಾರ, ಉದಯ್ ಕಿರಣ್ ಬಿ, ಕಿರಣ್ ಕೆ. ಸಂತೋಷ್ ಕುಮಾರ್, ಪೂಜಾ ಸಿ.ಐ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಸ್ವಾಗತಿಸಿ, ರಶ್ಮಿತಾ ಸುರೇಶ್ ಜೋಗಿಬೆಟ್ಟು ನಿರೂಪಿಸಿದರು. ಕಾರ್ಯಕ್ರಮದ ಆಯೋಜಕ ಹಾಗೂ ರಾಜ್ಯ ಸಂಚಾಲಕ ಆಮಿರ್ ಬನ್ನೂರು ವಂದಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ