NEWSಕೃಷಿನಮ್ಮಜಿಲ್ಲೆ

ಕೆಐಎಡಿಬಿ: ಭೂ ಸ್ವಾಧೀನ ಕುರಿತು ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ್‌ ರೈತರ ನಿಯೋಗದ ಜತೆ ಚರ್ಚೆ- ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಆನೇಕಲ್: ತಾಲೂಕಿನ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದ ಜತೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಎಂ.ಬಿ.ಪಾಟೀಲ ಅವರನ್ನು ಭೇಟಿಯಾಗಿ ಪ್ರಸ್ತುತ ಸರ್ಜಾಪುರ ಹೋಬಳಿಯಲ್ಲಿ ಕೆ.ಐ.ಎ.ಡಿ.ಬಿ ವತಿಯಿಂದ ನಡೆಯುತ್ತಿರುವ ಭೂ ಸ್ವಾಧೀನದ ಕುರಿತು ಚರ್ಚೆ ನಡೆಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಲೂಕಿನಲ್ಲಿ ಅನೇಕ ದಶಕಗಳಿಂದ ಕೈಗಾರಿಕೆಗಳಿಗೆ ಮತ್ತು ವಸತಿ ಯೋಜನೆಗಳಿಗೆ ಸಾವಿರಾರು ಎಕರೆ ಭೂಮಿ ಈಗಾಗಲೇ ಸ್ವಾಧೀನಗೊಂಡಿದ್ದು, ಈ ಹಿಂದೆ ಡಿಸೆಂಬರ್ 2024ರಲ್ಲಿ ರೈತರ ನಿಯೋಗ ನನ್ನನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರೈತರ ಮನೆಗಳು, ಪಾಲಿಹೌಸ್, ಫಲವತ್ತಾದoತಹ ಕೃಷಿ ಮತ್ತು ತೋಟಗಾರಿಕಾ ಭೂಮಿಗಳನ್ನು ಭೂಸ್ವಾಧೀನದಿಂದ ಕೈ ಬಿಡಬೇಕೆಂದು ಕೈಗಾರಿಕಾ ಮಂತ್ರಿಗಳಿಗೆ ಪತ್ರ ಮುಖೇನ ಒತ್ತಾಯಿಸಿದ್ದೆ ಎಂದರು.

ಜತೆಗೆ, 2006 ರಲ್ಲಿ ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ KIADB ಸಂಸ್ಥೆಯು 1260 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯುವ ನಿಟ್ಟಿನಲ್ಲಿ ರೈತರಿಗೆ ನಾನು ಸಹಕರಿಸಿದ್ದೆ ಎಂದು ಹೇಳಿದರು.

ರೈತರ ಕಲ್ಯಾಣ ನಮ್ಮ ಸರ್ಕಾರದ ಆದ್ಯತೆಯಾಗಿದ್ದು. ಆನೇಕಲ್ ತಾಲೂಕಿನ ರೈತರ ಹಕ್ಕು-ಹಿತಗಳ ಪರವಾಗಿ ನಾನು ಸಹ ಸದಾ ಬೆಂಬಲವಾಗಿ ನಿಂತಿದ್ದೇನೆ ಎಂದು ತಿಳಿಸಿದರು.

ಆನೇಕಲ್ ಶಾಸಕ ಶಿವಣ್ಣ, ವಿಧಾನಪರಿಷತ್ ಸದಸ್ಯರಾದ ಗೋಪಿನಾಥರೆಡ್ಡಿ, ಆರ್.ಕೆ.ರಮೇಶ್, ಇತರೇ ಮುಖಂಡರು, ಸಮಿತಿಯ ಅಧ್ಯಕ್ಷರು, ಮಾರ್ಗದರ್ಶಕರು, ಕಾರ್ಯದರ್ಶಿಗಳು, ಸಂಚಾಲಕರು, ಹೋರಾಟಗಾರರು, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ