CrimeNEWSನಮ್ಮಜಿಲ್ಲೆ

KKRTC: ಎದುರಿಗೆ ವೇಗವಾಗಿ ಬಂದ ಲಾರಿ- ಅಪಘಾತ ತಪ್ಪಿಸಲು ಹೋದ ಬಸ್‌ ಪಲ್ಟಿ, ನಾಲ್ವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಪಲ್ಟಿಯದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕಿಣ್ಣಸಡಕ್ ಸಮೀಪದಲ್ಲಿ ನಡೆದಿದೆ.

ಕಲಬುರಗಿ–ಹೈದರಾಬಾದ್ ನಡುವೆ ಸಂಚರಿಸುತ್ತಿದ್ದ ಬಸ್, ಇಂದು ಸೋಮವಾರ ಮುಂಜಾನೆ 5.30ರ ಸುಮಾರಿಗೆ ಅವಘಡ ಸಂಭವಿಸಿದೆ. ಹೈದರಾಬಾದ್‌ನಿಂದ ಕಲಬುರಗಿಗೆ ಬರುತ್ತಿದ್ದ ವೇಳೆ ಕಿಣ್ಣಸಡಕ್‌ನ ದರ್ಗಾ ಸಮೀಪವಿರುವ ಹೊಡ್ಡು ಹಾಗೂ ಹೆದ್ದಾರಿಯ ತಿರುವಿನಲ್ಲಿ ಎದುರಿಗೆ ವೇಗವಾಗಿ ಲಾರಿ ಬರುತ್ತಿತ್ತು. ಆ ವೇಳೆ ಲಾರಿಗೆ ಡಿಕ್ಕಿ ಆಗುತ್ತದೆ ಎಂದು ಅದನ್ನು ತಪ್ಪಿಸಲು ಚಾಲಕ ಒಂದೇ ಬಾರಿ ಬ್ರೇಕ್ ಹಾಕಿ ಪಕ್ಕಕ್ಕೆ ತೆಗೆದುಕೊಳ್ಳಲು ಯತ್ನಿಸಿದಾಗ ಆಯ ತಪ್ಪಿ ಬಸ್ ಪಲ್ಟಿಯಾಗಿದೆ.

ಬಸ್‌ ಪಲ್ಟಿಯಾಗಿ ರಸ್ತೆಯಲ್ಲೇ ಬಿದ್ದಿದ್ದರಿಂದ ಕೆಲ ಕಾಲ ಸಂಚಾರಕ್ಕೆ ಅಡಚಣೆ ಎದುರಾಯಿತು. ವಿಷಯ ತಿಳಿದ ಕಮಲಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಬಂಧ ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ವಿ. ನಾರಾಯಣ, ಎಸ್ಐ ವಿಶ್ವನಾಥ ಮುದ್ದಾರೆಡ್ಡಿ, ಕುಪೇಂದ್ರ, ರಾಜಶೇಖರ ನಾಶಿ ಅವರು ಭೇಟಿ ನೀಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು