NEWSನಮ್ಮಜಿಲ್ಲೆ

KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ಘಟಕಕ್ಕೆ ಭೇಟಿ ನೀಡಿದ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ತಂಡ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ವಿಶೇಷವಾಗಿ ವಿನ್ಯಾಸಗೊಳಿಸಿರುವ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿತು.

ಬಳಿಕ ಸಂಸ್ಥೆಯ ಎಲ್ಲ ಬಸ್‌ಗಳಿಗೆ ಅಂಟಿಸಲಾಯಿತು. ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮಿಕಾಂತ ಭೀ ನಾಲವಾರ, ವಿಭಾಗೀಯ ನಿಯಂತ್ರಣ ಅಧಿಕಾರಿ ಎಂ.ವೆಂಕಟೇಶ್ ಅವರಿಗೆ ಪೋಸ್ಟರ್‌ಗಳನ್ನು ಈ ತಂಡ ಹಸ್ತಾಂತರಿಸಿತು.

ಈ ಸಂದರ್ಭದಲ್ಲಿ ಘಟಕದ ಎಲ್ಲ ಮೆಕ್ಯಾನಿಕ್‌ಗಳು, ಚಾಲಕರು ಮತ್ತು ನಿರ್ವಾಹಕರಿಗೆ ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ಅದರ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು.

ವಿಭಾಗಿಯ ಸಂಚಾರ ಅಧಿಕಾರಿ ಜಾಧವ್, ವಿಭಾಗಿಯ ತಾಂತ್ರಿಕ ಶಿಲ್ಪಿ ಅಶ್ರಫ್ ಅಲಿ, ಘಟಕ ವ್ಯವಸ್ಥಾಪಕ ಪಿ.ಬಿ.ಭಟ್ಟೂರ ಮತ್ತು ಹಿರಿಯ ಮೋಟಾರು ವಾಹನ ನಿರೀಕ್ಷಕ ವಿನಾಯಕ ನಾಯಕ್, ಘಟಕದ ಸಹಾಯಕ ಸಿಬ್ಬಂದಿ ಸಂತೋಷ್ ಉಪಸ್ಥಿತರಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ