CrimeNEWSನಮ್ಮಜಿಲ್ಲೆ

KKRTC: ಚಲಿಸುತ್ತಿದ್ದಾಗಲೇ ಕಿತ್ತು ಕೈಗೆ ಬಂದ ಬಸ್‌ ಸ್ಟೇರಿಂಗ್- ತಪ್ಪಿದ ಭಾರೀ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ ಚಲಿಸುತ್ತಿದ್ದಾಗಲೇ ಸ್ಟೇರಿಂಗ್ ಕಿತ್ತು ಬಂದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪರಿಣಾಮ ಬಸ್​ ರಸ್ತೆ ಬದಿಯ ಕಂದಕಕ್ಕೆ ಹೋಗಿ ನಿಂತಿದೆ.

ಚಲಿಸುತ್ತಿದ್ದಾಗಲೇಏ ಏಕಾಏಕಿ ಬಸ್​ ಸ್ಟೇರಿಂಗ್​ ಚಾಲಕನ ಕೈಗೆ ಬಂದಿದೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಬಸ್​ ಚಾಲಕ ಭಾರೀ ದೊಡ್ಡ ದುರಂತವನ್ನು ತಪ್ಪಿದ್ದಾನೆ. ಹೀಗಾಗಿ 100ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇತ್ತೀಚೆಗೆ ಕೆಕೆಆರ್‌ಟಿಸಿಯ ಬಸ್‌ಗಳಲ್ಲಿ ಭಾರಿ ಸಮಸ್ಯೆ ಆಗುತ್ತಿದ್ದು, ಬಿಡಿ ಭಾಗಗಳು ಕಿತ್ತು ಬರುತ್ತಿವೆ. ವಾರದಿಂದ ಈಚೆಗೆ 5 ಬಸ್‌ಗಳ ಟಯರ್‌ಗಳು ಬರ್ಸ್ಟ್‌ಆಗಿ 5-10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡಕ್ಕೆ ಸವೆದು ಹೋಗಿರುವ ಟಯರ್‌ಗಳನ್ನು ಬಸ್‌ಗಳಿಗೆ ಅಳವಡಿಸಿರುವುದೇ ಕಾರಣ ಎಂದು ಚಾಲನಾ ಸಿಬ್ಬಂದಿ ಆರೋಪ ಮಾಡಿದ್ದಾರೆ.

ಮತ್ತೆ ಇದೇ ನಿಗಮದ ಬಸ್‌ನ ಸ್ಟೇರಿಂಗ್ ಕೈಗೆ ಬಂದಿದ್ದು, ಚಾಲಕ ಸ್ವಲ್ಪ ಸಮಯ ಪ್ರಜ್ಞೆ ಮೆರೆಯದಿದ್ದರೂ ಎಂಥ ಅನಾಹುತ ಆಗುತ್ತಿತ್ತು ಎಂಬುದನ್ನು ಊಹಿಸಿಕೊಳ್ಳುವುದು ಅಸಾಧ್ಯವಾಗುತ್ತಿದೆ. ಈರೀತಿಯ ಅವಘಡಗಳಿಗೆ ಡಿಪೋ ಮಟ್ಟದಲ್ಲಿ ಇರುವ ಅಧಿಕಾರಿಗಳ ಬೇಜವಾಬ್ದಾರಿತನವೆ ಪ್ರಮುಖ ಕಾರಣ ಎಂಬ ದೂರುಗಳು ಕೇಳಿ ಬರುತ್ತಿವೆ.

ನಿತ್ಯ ಲಕ್ಷಾಂತರ ಪ್ರಯಾಣಿಕರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ಸುರಕ್ಷಿತವಾಗಿ ತಲುಪಿಸಬೇಕಾದ ಸರ್ಕಾರಿ ಬಸ್‌ಗಳೇ ಈರೀತಿ ಆದರೆ, ಜನರು ಮತ್ತ್ಯಾವ ಬಸ್‌ಗಳಲ್ಲಿ ಪ್ರಯಾಣ ಮಾಡಬೇಕು ಎಂಬ ಆತಂಕವನ್ನು ವ್ಯಕ್ತಪಡಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ