CrimeNEWSನಮ್ಮಜಿಲ್ಲೆ

KKRTC ಬೀದರ್‌ ವಿಭಾಗ: ಜಾಕ್ ಸ್ಲಿಪ್‌ಆಗಿ ತುಂಡಾದ ತಾಂತ್ರಿಕ ಸಿಬ್ಬಂದಿಯ ಹೆಬ್ಬೆರಳು

ವಿಜಯಪಥ ಸಮಗ್ರ ಸುದ್ದಿ

ಭಾಲ್ಕಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ ವಿಭಾಗ ಭಾಲ್ಕಿ ಘಟಕದಲ್ಲಿ ಜಾಕ್ ಸ್ಲಿಪ್ ಆದ ಪರಿಣಾಮ ತಾಂತ್ರಿಕ ಸಿಬ್ಬಂದಿಯೊಬ್ಬರ ಎಡಗೈನ ಹೆಬ್ಬೆರಳು ತುಂಡಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಡಿ.6ರ ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಅವಘಟ ಸಂಭವಿಸಿದ್ದು ಘಟಕದ ತಾಂತ್ರಿಕ ಸಿಬ್ಬಂದಿ ಡೊಂಡಿಬಾ ಅವರ ಹೆಬ್ಬೆರಳು ತುಂಡಾಗಿದೆ. ಕೂಡಲೆ ಅವರನ್ನು ಭಾಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.

ಬಸ್‌ ರಿಪೇರಿ ಮಾಡುತ್ತಿದ್ದ ವೇಳೆ ಜಾಕ್ ಸ್ಲಿಪ್ ಆಗಿದ್ದರಿಂದ ಡೊಂಡಿಬಾ ಅವರ ಹೆಬ್ಬೆರಳು ಬಸ್ ಕೆಳಗೆ ಸಿಕ್ಕಿಹಾಕಿಕೊಂಡು ತುಂಡಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲೇ ಲೇಬರ್ ಆಫೀಸರ್, ಘಟಕ ವ್ಯವಸ್ಥಾಪಕರು ಹಾಗೂ ಇತರ ಸಿಬ್ಬಂದಿ ಇದ್ದು ಅವರ ಚಿಕತ್ಸೆಗೆ ಅಗತ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ.

ಈ ನಡುವೆ ಎಲ್ಲ ತಾಂತ್ರಿಕ ಸಿಬ್ಬಂದಿಗಳು ಕೂಡ ತಾವು ಘಟಕದಲ್ಲಿ ದೈನಂದಿನ ಕಾರ್ಯನಿರ್ವಹಿಸುವಾಗ ಸುರಕ್ಷತೆ & ಜಾಗೃತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಇಂಥ ಅಪಾಯದಿಂದ ದೂರವಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ