NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ

ವಿಜಯಪಥ ಸಮಗ್ರ ಸುದ್ದಿ

ಇಂಡಿ: ನಾನು ಭಿಮಾತೀರದವನು ನನಗೆ ಭೀಮಾತೀರದ ಎಲ್ಲ ರೌಡಿಗಳು ಪರಿಚಯವಿದ್ದಾರೆ ನೀವು ಏನಾದರೂ ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ಜೀವ ಬೇದರಿಕೆ ಹಾಕಿದ್ದ ಇಂಡಿ ಘಟಕದ ವ್ಯವಸ್ಥಾಪಕ ಸಂಗನಗೌಡ ಬಿರಾದಾರ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಕಳೆದ ಅಕ್ಟೋಬರ್‌ 19ರಂದು ಡಿಎಂ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಜಯಪಥ “KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ – ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ” ಶೀರ್ಷಿಕೆಯಡಿ ಸಮಗ್ರವಾದ ವರದಿ ಮಾಡಿತ್ತು.

ವಿಜಯಪಥ ಮೀಡಿಯಾದಲ್ಲಿ ವರದಿ ಬಂದಿದ್ದರಿಂದ ಅಧಿಕಾರಿಗಳು ತನಿಖೆ ನಡೆಸಿದ್ದು, ಡಿಎಂ ವಿರುದ್ಧ ದಾಖಲಾಗಿರುವ ದೂರು ಮೇಲ್ನೋಟಕ್ಕೆ ಸತ್ಯವಾಗಿದೆ ಎಂದು ತಿಳಿದ ಅಧಿಕಾರಿಗಳು ಇಂಡಿ ಘಟಕದಿಂದ ವಿಜಯಪುರ ಘಟಕ-1ಕ್ಕೆ ವರ್ಗಾವಣೆ ಮಾಡಿ ನಿನ್ನೆ ಅಂದರೆ ನ.7ರಂದು ಆದೇಶ ಹೊರಡಿಸಿದ್ದಾರೆ.

ವಿಜಯಪುರ ವಿಭಾಗದ ಕೂಟದ ಗೌರವ ಅಧ್ಯಕ್ಷ ಯಾಕೂಬ ನಾಟಿಕಾರ ಅವರು ಕೂಡ ಭ್ರಷ್ಟ ಡಿಎಂ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹ ಮಾಡಿದ್ದರು.

ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಿ ಇಂಡಿ ಘಟಕದ ಘಟಕ ವ್ಯವಸ್ಥಾಪಕರನ್ನು ಭ್ರಷ್ಟಾಚಾರದ ಆರೋಪದ ಮೇಲೆ ವರ್ಗಾವಣೆ ಮಾಡಿರುವುದಕ್ಕೆ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅವರಿಗೆ ಹಾಗೂ ವಿಜಯಪಥ ಮೀಡಿಯಾಗೆ ನಾಟಿಕಾರ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ – ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು