NEWS

KKRTC: ವರ್ಗಾವಣೆಗೊಂಡು ಮೂರು ದಿನಗಳು ಕಳೆದರೂ ಕದಲದ ಕೊಪ್ಪಳ ಘಟಕ ಡಿಎಂ – ಮೇಲಧಿಕಾರಿಗಳ ಅದೇಶಕ್ಕೂ ಕಿಮ್ಮತ್ತಿಲ್ಲ

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ: ಕಲ್ಯಾಣ ಕರ್ನಾಕಟ ರಸ್ತೆ ಸಾರಿಗೆ ಸಂಸ್ಥೆಯ ಕೊಪ್ಪಳ ಘಟಕ ವ್ಯವಸ್ಥಾಪಕರು ಬಳ್ಳಾರಿ ವಿಭಾಗದ ಸಂಡೂರು ಘಟಕಕ್ಕೆ ವರ್ಗಾವಣೆಗೊಂಡು ಮೂರುದಿನಗಳು ಕಳೆದರೂ ಇನ್ನೂ ಸಂಡೂರಿನ ಘಟಕ್ಕೆ ಹೋಗಲು ಮೀನಮೇಷ ಎಣಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದೇ ಡಿಸೆಂಬರ್‌ 10 ರಂದು ಕೊಪ್ಪಳ ವಿಭಾಗದ ಕೊಪ್ಪಳ ಘಟಕದ ವ್ಯವಸ್ಥಾಪಕ ಬಿ.ವಿ. ಭಟ್ಟೂರ ಅರವನ್ನು   ಸಂಡೂರು ಘಟಕಕ್ಕೆ ವರ್ಗಾವಣೆ ಮಾಡಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಆದರೆ ಅವರ ಆದೇಶವನ್ನು ಧಿಕ್ಕರಿಸಿ ಕೊಪ್ಪಳದಲ್ಲೇ ಉಳಿಯಬೇಕು ಎಂದು ಹಾಲಿ ಮಾಜಿ ಶಾಸಕರು ಮತ್ತು ಸಂಸದರ ಮನೆ ಬಾಗಿಲಿಗೆ ಎಡತಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಘಟಕದಲ್ಲಿ ಭಟ್ಟೂರ ಅವರು ನೌಕರರಿಗೆ ತುಂಬ ಕಿರುಕುಳ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಇವರ ಕರ್ಮಕಾಂಡ ಹೇಳ ತೀರದಾಗಿದೆ ಎಂದು ಹೆಸರೇಳಲಿಚ್ಛಿಸಿದ ಘಟಕದ ಸಿಬ್ಬಂದಿ ಆರೋಪಿಸಿದ್ದಾರೆ.

ಇನ್ನು ಈ ಹಿಂದೆಯೂ 2-3 ಬಾರಿ ವರ್ಗಾವಣೆಗೊಂಡಿದ್ದರು ಆಗಲು ಶಾಸಕರು ಸಂಸದರಿಂದ ನಿಗಮದ ಅಧಿಕಾರಿಗಳ ಮೇಲೆ ಒತ್ತಡ ತಂದು ವರ್ಗಾವಣೆ ಆದೇಶ ರದ್ದು ಮಾಡಿಸಿಕೊಂಡು ಘಟಕದಲ್ಲೇ ಉಳಿದುಕೊಂಡರು. ಈಗ ಮತ್ತೆ ಅದೇ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಮೂರು ದಿನ ಕಳೆದರೂ ಮೇಲಧಿಕಾರಿಗಳ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೇ ಇದಕ್ಕೆ ಸ್ಪಷ್ಟ ನಿದರ್ಶನ ಎಂದು ಘಟಕದ ಸಿಬ್ಬಂದಿ ಆರೋಪಿಸಿದ್ದಾರೆ.

ಇನ್ನು ಘಟಕದಲ್ಲಿ ಭಾರಿ ಭ್ರಷ್ಟಾಚಾರ ಮಾಡಿಕೊಂಡು ಕೊಪ್ಪಳದಿಂದ ಕದಲದೆ ಅಲ್ಲೇ ಉಳಿದುಕೊಳ್ಳುವುದಕ್ಕೆ ಯತ್ನಿಸುತ್ತಿದ್ದಾರೆ. ಹೀಗಾಗಿ ಅದಕ್ಕೆ ಮೇಲಧಿಕಾರಿಗಳು ಅವಕಾಶ ಮಾಡಿಕೊಡದೆ ಘಟಕ ವ್ಯವಸ್ಥಾಪಕರನ್ನು ವರ್ಗಾವಣೆಗೊಂಡ ಸ್ಥಳಕ್ಕೆ ಕೂಡಲೇ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಕ್ಕೂ ಸಿದ್ಧರಿದ್ದೇವೆ ಎಂದು ಘಟಕದ ಸಿಬ್ಬಂದಿ ಒತ್ತಾಯ ಪೂರ್ವಕ ಮನವಿ ಮಾಡಿದ್ದಾರೆ.

ಇನ್ನು ಘಟಕ ವ್ಯಸ್ಥಾಪಕರು ನೌಕರರಿಂದ ಲಂಚ ವಸೂಲಿ ಮಾಡುತ್ತಾರೆ ಎಂಬುದರ ಬಗ್ಗೆ ಸಿಬ್ಬಂದಿ ಪೋನ್‌ ಸಂಭಾಷಣೆಯಲ್ಲಿ ತೊಡಗಿರುವ ಆಡಿಯೋ ಕೂಡ ವಿಜಯಪಥಕ್ಕೆ ಲಭ್ಯವಾಗಿದ್ದು, ಡಿಎಂ ಅವರ ಭ್ರಷ್ಟಾಚಾರವನ್ನು ಅನಾವರಣಗೊಳಿಸಿದ್ದಾರೆ.

ಘಟಕದಲ್ಲಿ ಲಂಚ ಕೊಡದೆ ರಜೆ ಸಿಗುವುದಿಲ್ಲ, ರೂಟ್‌ಗಳು ಸಿಗುವುದಿಲ್ಲ ಎಂಬ ಆರೋಪವನ್ನು ಸಿಬ್ಬಂದಿ ಮಾಡಿದ್ದು, ಘಟಕದಲ್ಲಿ ನಡೆಯುತ್ತಿರುವ ಲಂಚವತಾರದಿಂದ ಬೇಸತ್ತಿದ್ದೇವೆ. ಹೀಗಾಗಿ ವರ್ಗಾವಣೆಗೊಂಡಿರುವ ಡಿಎಂ ಅವರು ಮತ್ತೆ ಇಲ್ಲೇ  ಉಳಿದುಕೊಳ್ಳುವ ಪ್ರಯತ್ನಕ್ಕೆ ಆದ್ಯತೆ ನೀಡಬಾರದು ಎಂದು ನೊಂದ ಸಿಬ್ಬಂದಿ ವರ್ಗ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಮತ್ತು ನಿಗದಮ ವ್ಯವಸ್ಥಾಪಕ ನಿರ್ದೇಶಕರಲ್ಲಿ ಮನವಿ ಮಾಡಿದ್ದಾರೆ.

ವರ್ಗಾವಣೆ ಆದೇಶ ಹೊರಡಿಸಿರುವುದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ