CrimeNEWSನಮ್ಮಜಿಲ್ಲೆ

KKRTC- ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್‌ ಪಲ್ಟಿ: ಚಾಲಕ, ಮೂವರು ಮಕ್ಕಳಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ತಾಲೂಕಿನ ಬೇವಿನಹಳ್ಳಿ ಗ್ರಾಮದ ಸಮೀಪದ ತಿರುವಿನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, 26 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಆಪಾರಾಗಿರುವ ಘಟನೆ ಮಂಗಳವಾರ ಜರುಗಿದೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಸಜ್ಜಲಗುಡ್ಡ ಗ್ರಾಮದ ಸರ್ಕಾರಿ ಶಾಲೆಯ 53 ಮಕ್ಕಳು, 6 ಶಿಕ್ಷಕರು ಬಸ್‌ನಲ್ಲಿ ಶಿಗ್ಗಾವಿ ತಾಲೂಕಿನ ಗೊಟಗೋಡಿ ಸ್ಥಳಕ್ಕೆ ಪ್ರವಾಸ ಹೊರಟಿದ್ದರು. ಎದುರಿಗೆ ಬಂದ ಕಾರನ್ನು ತಪ್ಪಿಸಲು ಹೋಗಿ ಬಸ್‌ ಪಲ್ಟಿಯಾಗಿದೆ.

ಗಂಭೀರ ಗಾಯಗೊಂಡ ಬಸ್‌ ಚಾಲಕ ಮಲ್ಲಪ್ಪ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಗೊಂಡ 26 ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯವಾಗಿರುವ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ‌ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಫ್‌.ಬಾರ್ಕಿ, ಎಸ್ಪಿ ಅಂಶುಕುಮಾರ, ಡಿಎಸ್‌ಪಿ ಎಂ.ಎಸ್‌.ಪಾಟೀಲ, ಸಿಪಿಐ ಆನಂದ ಒನಕುದ್ರೆ ಸೇರಿದಂತೆ ಶಿಕ್ಷಣ, ಸಾರಿಗೆ ಇಲಾಖೆ ಅಧಿಕಾರಿಗಳು, ಶಿಕ್ಷಕರು ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿ ಸಾಹಸ: ಬಸ್‌ ಪಲ್ಟಿ ಆಗಿ ಪಕ್ಕದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ ಭಾರ ಹಾಗೂ ಬಿದ್ದ ರಭಸಕ್ಕೆ ಕಂಬ ತುಂಡಾಗಿ ನೆಲಕ್ಕುರುಳಿದ್ದು, ಈ ವೇಳೆ ವಿದ್ಯುತ್‌ ಟ್ರಿಪ್‌ ಸಂಪರ್ಕ ಕಡಿತಗೊಂಡಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

ಈ ನಡುವೆ, ಬಸ್‌ನಲ್ಲಿದ್ದ 7ನೆ ತರಗತಿ ವಿದ್ಯಾರ್ಥಿ ಮಲ್ಲನಗೌಡ ಚಳಗೇರಿ ತುರ್ತು ನಿರ್ಗಮನದ ಬಾಗಿಲು ತೆರೆದು ಜಿಗಿದಿದ್ದಾನೆ. ಉಳಿದ ವಿದ್ಯಾರ್ಥಿಗಳನ್ನು ಹೊರ ತರಲು ಪ್ರಯತ್ನಿಸಿದ್ದಾನೆ. ಈ ವಿದ್ಯಾರ್ಥಿ ಶ್ರಮಕ್ಕೆ ಸಾರ್ವಜನಿಕರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು