KKRTC: ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಬಸ್ಗೆ ಕಾರು ಗುದ್ದಿದ ಕಾಂಗ್ರೆಸ್ ಮುಖಂಡ- ಈವರೆಗೂ FIR ದಾಖಲಿಸದ ಪೊಲೀಸರು!!?

ಮುಧೋಳ್: ಕಾಂಗ್ರೆಸ್ ಲೀಡರ್ ಒಬ್ಬ ಕುಡಿದ ಮತ್ತಿಲ್ಲಿನ ಕಾರು ಚಾಲನೆ ಮಾಡಿಕೊಂಡು ಬಂದು ಕೆಕೆಆರ್ಟಿಸಿ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಿದ್ದು, ಈ ಬಗ್ಗೆ ಎಫ್ಐಆರ್ ಕೂಡ ಮಾಡದೆ ಬಸ್ಅನ್ನು ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ 12ಗಂಟೆಯಿಂದಲೂ ನಿಲ್ಲಿಸಿಕೊಂಡು ಪ್ರಯಾಣಿಕರಿಗೆ ಸಮಸ್ಯೆಯನ್ನುಂಟು ಮಾಡಿರುವ ಘಟನೆ ಮುಧೋಳ್ನಲ್ಲಿ ನಡೆದಿದೆ.
ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿಕೊಂಡು ಬಂದ ಕಾಂಗ್ರೆಸ್ ಲೀಡರ್ ಭೀಮ್ಸೆ ಸರ್ಕಾರ್ ಕುರಿ ಎಂಬುವರು ತಾನು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಬಸ್ಅನ್ನು ಪೊಲೀಸ್ಠಾಣೆಗೆ ತೆಗೆದುಕೊಂಡು ಹೋಗಿ ನಿಲ್ಲಿಸಿದ ಬಳಿಕ ಈವರೆಗೂ ಅಂದರೆ ಏ.23ರ ಸಂಜೆ 6 ಗಂಟೆ ಆದರೂ ಆಸಾಮಿ ಪತ್ತೆಯಿಲ್ಲ.
ಇನ್ನು ಇತ್ತ ಈತ ಒಬ್ಬ ಕಾಂಗ್ರೆಸ್ ಮುಖಂಡ ಈತ ಹೇಳಿದಂತೆ ನಾವು ಕೇಳಬೇಕು ಎಂದು ಪೊಲೀಸರು ಪ್ರಯಾಣಿಕರಿಗೆ ತೊಂದರೆ ಕೊಟ್ಟಿರುವುದೂ ಅಲ್ಲದೆ ಈವರೆಗೂ ಸಾರಿಗೆ ಬಸ್ ಚಾಲಕ ಕೊಡುವ ದೂರನ್ನು ತೆಗೆದುಕೊಳ್ಳದೆ ಠಾಣೆ ಮುಂದೆ ಚಾಲಕ ಕಾದು ಕುಳಿತು ಕೊಳ್ಳುವಂತೆ ಮಾಡಿದ್ದಾರೆ.
ಕಾಂಗ್ರೆಸ್ ಲೀಡರ್ ಭೀಮ್ಸೆ ಸರ್ಕಾರ್ ಕುರಿ ಎಂಬಾತ ಈವರೆಗೂ ಯಾವುದೇ ದೂರು ನೀಡಿಲ್ಲ. ಇನ್ನು ಬಸ್ ಚಾಲಕ ದೂರು ನೀಡಿದರೆ ಅವರ ದೂರನ್ನು ಪೊಲೀಸರು ತೆಗೆದುಕೊಳ್ಳುತ್ತಿಲ್ಲ. ಈ ನಡುವೆ ಇಂದು ಬೆಳಗ್ಗೆ ಯಾವುದೋ ಒಂದು ಸಮಾರಂಭವಿದೆ ಎಂದು ಹೇಳಿ ಸರ್ಕಾರ್ ಕುರಿ ಜಮಖಂಡಿಗೆ ಹೋಗಿದ್ದಾರೆ. ಅಂದರೆ ಅವರನ್ನು ಪೊಲೀಸರು ಕಳಿಸಿದ್ದು, ಚಾಲಕ ಮತ್ತು ನಿರ್ವಾಹಕರನ್ನು ಮಾತ್ರ ಠಾಣೆಯಲ್ಲಿ ಕೂರಿಸಿಕೊಂಡಿದ್ದಾರೆ. ಇದನ್ನು ಗಮನಿಸಿದರೆ ಇಲ್ಲಿ ನ್ಯಾಯ ಎಲ್ಲಿದೆ ಎಂಬ ಅನುಮಾನ ಮೂಡುತ್ತಿದೆ.
ಇನ್ನು ಈ ಬಗ್ಗೆ ವಿಚಾರಿಸಲು ಮುಧೋಳ್ ಪೊಲೀಸ್ ಠಾಣೆಯ ಪಿಎಸ್ಐ ಅಜಿತ್ ಅವರಿಗೆ ಕರೆ ಮಾಡಿದರೆ ಅವರ ಕಚೇರಿಯ ಮೊಬೈಲ್ ಫೋನ್ ಸ್ವಿಚ್ ಆಫ್ ಎಂದು ಬಂದಿತು. ಬಳಿಕ ಸರ್ಕಲ್ ಇನ್ಸ್ಪೆಕ್ಟರ್ಗೆ ಕರೆ ಮಾಡಿದಾಗ ಅವರು ಕರೆಯನ್ನು ಸ್ವೀಕರಿಸಿ ಪಿಎಸ್ಐ ಅವರ ಖಾಸಗಿ ಫೋನ್ ನಂಬರ್ ಕೊಟ್ಟರು ಅದಕ್ಕೆ ಎರಡು ಬಾರಿ ಕರೆ ಮಾಡಿದರೂ ಪಿಎಸ್ಐ ಕರೆಯನ್ನು ಸ್ವೀಕರಿಸಲಿಲ್ಲ.
ಇತ್ತ ನಿನ್ನೆ ರಾತ್ರಿಯಿಂದ ಸರಿಯಾಗಿ ನಿದ್ರೆ ಇಲ್ಲದೆ ಜತೆಗೆ ಊಟ ಕೂಡ ಮಾಡದೆ ಬಸ್ ಚಾಲಕ ಮತ್ತು ನಿರ್ವಾಹಕರು ಪೊಲೀಸ್ ಠಾಣೆಯಲ್ಲೇ ಕುಳಿತಿದ್ದಾರೆ. ಇನ್ನು ಭೀಮ್ಸೆ ಸರ್ಕಾರ್ ಕುರಿ ನಾನು ಕಾಂಗ್ರೆಸ್ ಲೀಡರ್ ಎಂದು ಹೇಳಿಕೊಂಡು ಕಾನೂನನ್ನೇ ಗಾಳಿತೂರಿ ಒಂದು ಸರ್ಕಾರಿ ಬಸ್ಅನ್ನು ಪೊಲೀಸ್ ಠಾಣೆಯಲ್ಲೇ ಅದೂ ದೂರು ನೀಡದೆ ನಿಲ್ಲಿಸಿಕೊಂಡು ದರ್ಪ ಮೆರೆಯುತ್ತಿದ್ದಾರೆ.
ಪೊಲೀಸರು ಈತ ಸಿಎಂ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿ ನಮ್ಮ ಮೇಲೆ ಕಿಡಿಕಾರಿದರೆ ನಾವೇನು ಮಾಡುವುದು, ನಾವು ಅಮಾನತಾಗಬೇಕಾಗುತ್ತದೆ ಎಂದು ಹೆದರೆ ಆ ಭಯದಲ್ಲೇ ಈ ಭೀಮ್ಸೆ ಸರ್ಕಾರ್ ಕುರಿಯ ವಿರುದ್ಧ ಈವರೆಗೂ ದೂರು ದಾಖಲಿಸಿಕೊಂಡೇ ಇಲ್ಲ.
ಇನ್ನು ಇಂದು ಪರೀಕ್ಷೆ ಇದ್ದ ಕಾರಣ ರಾತ್ರಿಯೇ ಹುಬ್ಬಳ್ಳಿಯಿಂದ ಬೀದರ್ಗೆ ಪ್ರಯಾಣ ಬೆಳೆಸಿದ ವಿದ್ಯಾರ್ಥಿಗಳು ಇದರಿಂದ ಗಾಬರಿಗೊಂಡಿದ್ದರು. ಅವರನ್ನಾದರೂ ಸುರಕ್ಷಿತವಾಗಿ ಕಳಿಸಿಕೊಡುವ ವ್ಯವಸ್ಥೆಯನ್ನು ಪೊಲೀಸರು ಮಾಡಲಿಲ್ಲ. ಇತ್ತ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮುಂದೆ ಕೂರಲಾಗದೆ ಪರಿತಪ್ಪಿಸಿದ್ದಾರೆ.
ಇದನ್ನು ನೋಡಲಾರದೆ ಸಾರಿಗೆ ಬಸ್ ಚಾಲಕ ಅವರನ್ನು ಬೇರೆ ಬಸ್ಗೆ ಹತ್ತಿಸಿಬಿಟ್ಟು ಬರುತ್ತೇವೆ ಅಲ್ಲಿಯವರೆಗಾದರು ಬಸ್ ತೆಗೆದುಕೊಂಡು ಹೋಗುವುದಕ್ಕೆ ಅನುಮತಿ ಕೊಡಿ ಎಂದು ಪೊಲೀಸರ ಬಳಿ ಬೇಡಿಕೊಂಡಿದ್ದಾರೆ. ಆ ಬಳಿಕ ಇಬ್ಬರು ಪೊಲೀಸ್ ಸಿಬ್ಬಂದಿಗಳ ಕಾವಲಿನಲ್ಲಿ ಬಸ್ಅನ್ನು ತೆಗೆದುಕೊಂಡು ಗೋಗಲು ಅನುಮತಿ ನೀಡಿದ್ದಾರೆ.
ಮುಂಜಾನೆ ಸುಮಾರು 3.30ರ ವೇಳೆಗೆ ಒಂದು ಬಸ್ ಬಂದಿದ್ದು ಅದು ಸಿಂಧಗಿ ವರೆಗೆ ಮಾತ್ರ ಹೋಗುತ್ತಿತ್ತು. ಅದೇ ಬಸ್ಗೆ ಪ್ರಯಾಣಿಕರನ್ನು ಹತ್ತಿಸಿ ಸಿಂಧಗಿಯಿಂದ ಮುಂದಕ್ಕೆ ಬೇರೆ ಬಸ್ಗೆ ಹತ್ತಿಸುವಂತೆ ತಮ್ಮ ಸಹೋದ್ಯೋಗಿಗೆ ಚಾಲಕರು ಮನವಿ ಮಾಡಿದ್ದಾರೆ. ಅಲ್ಲದೆ ಆ ಪ್ರಯಾಣಿಕರು ಸುರಕ್ಷಿತವಾಗಿ ಅವರ ಸ್ಥಳ ತಲುಪುವ ವರೆಗೂ ಅವರಿಗೆ ಕರೆ ಮಾಡಿ ಚಾಲಕರು ವಿಚಾರಿಸಿಕೊಂಡಿದ್ದಾರೆ.
ನೋಡಿ ಒಬ್ಬ ಕಾಂಗ್ರೆಸ್ ಲೀಡರ್ ಈ ರೀತಿ ನಡೆದುಕೊಂಡದರೆ ಇನ್ನು ಸಾಮಾನ್ಯರು ಯಾವ ರೀತಿ ನಡೆದುಕೊಳ್ಳಬೇಕು. ಜತೆಗೆ ಈವರೆಗೂ ಪೊಲೀಸ್ ಠಾಣೆಗೆ ಬರದೆ ಯಾರೋ ಹಿಂಬಾಲಕರನ್ನು ಕಳಿಸಿ ಕಾರು ರೆಡಿ ಮಾಡಿಸಿಕೊಡುವಂತೆ ಚಾಲಕನಿಗೆ ಹೇಳಿದ್ದಾನಂತೆ ಈ ಬೀಮ್ಸೇ ಸರ್ಕಾರ್ ಕುರಿ. ತಪ್ಪು ಮಾಡಿ ಬಸ್ಗೆ ಡಿಕ್ಕಿ ಹೊಡೆದಿರುವುದು ಈತ. ಆದರೆ ಬಸ್ ಚಾಲಕ ಕಾರನ್ನು ಏಕೆ ರೆಡಿ ಮಾಡಿಸಿಕೊಡಬೇಕು. ಅಲ್ಲದೆ ಪೊಲೀಸರು ಏಕೆ ಈವರೆಗೂ ಚಾಲಕ ಕೊಡುತ್ತಿರುವ ದೂರನ್ನು ತೆಗೆದುಕೊಳ್ಳುತ್ತಿಲ್ಲ ಎಂಬುವುದು ಗೊತ್ತಾಗುತ್ತಿಲ್ಲ.
ಇನ್ನು ಸಾರಿಗೆಯ ಸಂಬಂಧಪಟ್ಟ ಮೇಲಧಿಕಾರಿಗಳು ಕೂಡ ಈ ಕಾಂಗ್ರೆಸ್ ಮುಖಂಡ ಎಂಬ ವಿಷಯ ತಿಳಿದ ಮೇಲೆ ಪೊಲೀಸ್ ಠಾಣೆಗೆ ಬರುವ ಧೈರ್ಯವನ್ನೇ ಮಾಡಿಲ್ಲ. ಈ ರೀತಿ ಆದರೆ ತಮ್ಮ ಅಧೀನ ನೌಕರರ ಗತಿ ಏನು ಡಿಸಿ ಮತ್ತು ಡಿಟಿಒ ಸಾಹೇಬರೆ ನಿಮಗೆ ಕಾನೂನು ಪಾಲನೆ ಯಾವರೀತಿ ಮಾಡಬೇಕು ಎಂಬು ನಾವು ಹೇಳಿಕೊಡಬೇಕಾ? ಈಗಲಾದರೂ ನಿಮ್ಮ ಚಾಲಕನ ಪರ ನಿಂತು ದೂರುಕೊಡಲು ಮುಂದಾಗಿ ಇಲ್ಲ ನಾವು ಈ ಹುದ್ದೆಗೆ ಲಾಯಕ್ ಇಲ್ಲ ಎಂದು ಮನೆಗಾದರೂ ಹೋಗಿ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...