KKRTC: ಮಧ್ಯರಾತ್ರಿ ಕೆಟ್ಟುನಿಂತ ಎಸಿ ಬಸ್- 8ಗಂಟೆಗಳು ಪ್ರಯಾಣಿಕರ ಪರದಾಡಿಸಿದ ಡಿಎಂ ಅಮಾನತು ಮಾಡಿ ಎಂಡಿ ರಾಚಪ್ಪ ಆದೇಶ

- ಮಧ್ಯರಾತ್ರಿ ಕೆಟ್ಟು ನಿಂತ ಕೆಕೆಆರ್ಟಿಸಿ ಬಸ್ । ಪರ್ಯಾಯ ವ್ಯವಸ್ಥೆ ಮಾಡದೆ ಡಿಪೋ ವ್ಯವಸ್ಥಾಪಕನ ನಿರ್ಲಕ್ಷ್ಯ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (KKRTC) ಸಂಸ್ಥೆಯ ಎಸಿ ಸ್ವೀಪರ್ ಬಸ್ವೊಂದು ಕಲಬುರಗಿ- ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯದಲ್ಲೇ ತಡರಾತ್ರಿ ಕೆಟ್ಟು ನಿಂತಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ಮಾಡಿದ ಘಟಕ ವ್ಯವಸ್ಥಾಪಕರನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಅಮಾನತು ಮಾಡಿದ್ದಾರೆ.
ಮಾರ್ಗಮಧ್ಯೆ ಬಸ್ ಕೆಟ್ಟು ನಿಂತ ಬಳಿಕ ಸಕಾಲಕ್ಕೆ ಮತ್ತೊಂದು ಬಸ್ ವ್ಯವಸ್ಥೆ ಮಾಡದೆ ನಿರ್ಲಕ್ಷ್ಯ ಮಾಡಿದ ಸಂಸ್ಥೆಯ ಕಲಬುರಗಿ ಘಟಕ-1ರ ಡಿಎಂ ಅಶೋಕ ದೊಡ್ಡಮನಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಕೆಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ತಿಳಿಸಿದ್ದಾರೆ.
ಘಟನೆ ವಿವರ: ಕಲಬುರಗಿ ಘಟಕ-1ರ ಎಸಿ ಸ್ವೀಪರ್ ಬಸ್ (ಕೆಎ 32 ಎಫ್ 2011) ಗುರುವಾರ ಅಂದರೆ ಮೇ 15 ರಾತ್ರಿ 7 ಗಂಟೆಗೆ ಸುಮಾರಿಗೆ 30 ಜನ ಪ್ರಯಾಣಿಕರನ್ನು ಕರೆದುಕೊಂಡು ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿತ್ತು. ಈ ಬಸ್ ಶುಕ್ರವಾರ ಮೇ 16ರ ಬೆಳಗ್ಗೆ 7 ಗಂಟೆಗೆ ಬೆಂಗಳೂರಿಗೆ ತಲುಪಬೇಕಾಗಿತ್ತು.
ಇನ್ನು ಪ್ರಯಾಣಿಕರು ತಲಾ 1210 ರೂ. ಬಸ್ ಚಾರ್ಜ್ಕೊಟ್ಟದರು. ಇನ್ನು ಶುಕ್ರವಾರ ಬೆಳಗ್ಗೆ ಮದುವೆ, ಆಸ್ಪತ್ರೆ ಮತ್ತು ಸಂದರ್ಶನ ಹೀಗೆ ಹಲವಾರು ಕಾರ್ಯಗಳಲ್ಲಿ ತೊಡಗುವವರಿದ್ದರು. ಆದರೆ ಬೆಂಗಳೂರನ್ನು ಸಮಯಕ್ಕೆ ಸರಿಯಾಗಿ ತಲುಪುತ್ತೇವೆ ಅಂದು ಕೊಂಡಿದ್ದ ವೃದ್ಧರು, ಕಂಪನಿಗಳಲ್ಲಿ ಸಂದರ್ಶನಕ್ಕೆ ಹೋಗುತ್ತಿದ್ದ ಯುವಕರು ಸೇರಿದಂತೆ ಇತರೆ ಪ್ರಯಾಣಿಕರಿಗೆ ಶಾಕ್ಆಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಳ್ಳಾರಿ ಬಳಿಯಲ್ಲಿರುವ ಬೈಲೂರ ಹತ್ತಿರ ಹಠಾತ್ ಆಗಿ ಬಸ್ ಕೆಟ್ಟು ನಿಂತಿದೆ. ಇದನ್ನು ನೋಡಿ ಪ್ರಯಾಣಿಕರು ಆತಂಕಗೊಂಡರು.
ಇನ್ನು ಸ್ವಲ್ಪಹೊತ್ತಿನಲ್ಲೇ ಬಸ್ ದುರಸ್ತಿಯಾಗಲಿದೆ ಎಂಬ ಆಶಾಭಾವನೆ ಹೊಂದಿದ್ದ ಪ್ರಯಾಣಿಕರಿಗೆ ನಿರಾಸೆಯಾಗಿದೆ. ಹಲವಾರು ಗಂಟೆಗಳ ಕಾಲ ಚಾಲಕ-ನಿರ್ವಾಹಕರು ದುರಸ್ತಿಗೆ ಪ್ರಯತ್ನಿಸಿದ್ದರೂ ಅದು ಫಲ ನೀಡಲಿಲ್ಲ. ಕೊನೆಗೆ ಪ್ರಯಾಣಿಕರು ಮತ್ತು ಚಾಲಕರು ಕಲಬುರಗಿ ಘಟಕ-1ರ ಮ್ಯಾನೇಜರ್ಗೆ ಕರೆ ಮಾಡಿ ಪರ್ಯಾಯ ಬಸ್ ವ್ಯವಸ್ಥೆಗೆ ಮನವಿ ಮಾಡಿದ್ದಾರೆ.
ಆದರೆ ಸಕಾಲಕ್ಕೆ ಅವರು ಬಸ್ ವ್ಯವಸ್ಥೆ ಮಾಡಲಿಲ್ಲ. ಮನೆಯಲ್ಲಿ ಹೋಗಿ ಬೆಚ್ಚಗೆ ಮಲಗಿ ಬಳಗ್ಗೆ ಡ್ಯೂಟಿಗೆ ಮಾಮೂಲಿನಂತೆ ಬಂದು ಅದರಲ್ಲೂ ಮುಂಜಾನೆ 5-6ಗಂಟೆಗಾದರೂ ಬಸ್ ವ್ಯವಸ್ಥೆ ಮಾಡಬೇಕಿತ್ತು. ಆದರೆ ಹಾಗೆ ಮಾಡದರೆ ಮಾರನೇ ದಿನ ಅಂದರೆ ಶುಕ್ರವಾರ ಬೆಳಗ್ಗೆ 10 ಗಂಟೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆ.
ಇನ್ನು ಅಲ್ಲಿಯವರೆಗೂ ಪ್ರಯಾಣಿಕರು ರಾತ್ರಿ ಪೂರ್ತಿ ನಿದ್ದೆಗೆಟ್ಟು ಬಸ್ಗಾಗಿ ಕಾದು ಸುಸ್ತಾಗಿದ್ದರು. ಕೊನೆಗೆ ಬೆಳಗ್ಗೆ 10 ಗಂಟೆ ಬಳಿಕ ನಾನ್ ಎಸಿ ಕೆಂಪು ಬಸ್ ಬಂದ ಬಳಿಕ ಸಂಜೆ 4.30ಕ್ಕೆ ಬೆಂಗಳೂರು ತಲುಪಬೇಕಾಯಿತು.
ನಿರ್ಜನ ಪ್ರದೇಶದಲ್ಲಿ ಬಸ್ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಸುತ್ತಮುತ್ತಲೂ ಹೋಟೆಲ್ ಇತರೆ ಆಶ್ರಯ ಇಲ್ಲದೆ 8 ಗಂಟೆಗಳಿಗೂ ಹೆಚ್ಚು ಕಾಲ ಇನ್ನೊಂದು ಬಸ್ಗಾಗಿ ಕಾಯುವಂತಾಯಿತು. ರಾತ್ರಿಯಿಡಿ ವೃದ್ಧರು, ಮಕ್ಕಳು ತೊಂದರೆ ಅನುಭವಿಸಬೇಕಾಯಿತು.
ಜತೆಗೆ ಭಯ, ಆತಂಕದಲ್ಲಿಯೇ ನಿದ್ದೆ ಇಲ್ಲದೆ ತೊಂದರೆ ಅನುಭವಿಸುವಂತಾಯಿತು. ಇದಕ್ಕೆಲ್ಲ ಘಟಕ ವ್ಯವಸ್ಥಾಪಕರ ನಿರ್ಲಕ್ಷ್ಯವೆ ಕಾರಣ ಎಂದು ಪ್ರಯಾಣಿಕರು ತಾವು ಅನುಭವಿಸಿದ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
Related

You Might Also Like
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...
ಟೇಕಾಫ್ ಆದ ಕೆಲವೇ ಕ್ಷಣದ ಏರ್ ಇಂಡಿಯಾ ವಿಮಾನ ಪತನ: ಇಬ್ಬರು ಸೇಫ್
ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆಗೆ ಸಂಬಂಧಿಸಿದಂತೆ 240 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ...
KSRTC ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಮ್ ಪಾಷ ನೇಮಕ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಕ್ರಂಪಾಷಾ ಅವರನ್ನು ನೇಮಿಸಿ ಸರ್ಕಾರ ಗುರುವಾರ (ಜೂ.12) ಆದೇಶ ಹೊರಡಿಸಿದೆ. ಇದೇ ಜೂನ್ 2ರ ಸೋಮವಾರ...
NWKRTC: ವರುಣನ ಅಬ್ಬರಕ್ಕೆ ಕಾರವಾರದ ಬಸ್ ಡಿಪೋ ಜಲಾವೃತ- ಮಳೆ ನೀರಿನಲ್ಲೇ ನಿಂತು ಹೆರಿಗೆ ಮಾಡಿಸಿದ ವೈದ್ಯರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಧಾರಾಕರ ಮಳೆಯಾಗುತ್ತಿದ್ದು, ಈ ಮಳೆಗೆ ವಾಯುವ್ಯ ರಸ್ತೆ ಸಾರಿಗೆ ನಿಮಗದ ಘಟಕ ಸಂಪೂರ್ಣ ಜಲಾವೃತವಾಗಿದ್ದು, ಬಸ್ಗಳನ್ನು ತೆಗೆಯುವುದಕ್ಕೂ ಸಿಬ್ಬಂದಿ ಪರದಾಡಿತ...