NEWSಉದ್ಯೋಗನಮ್ಮರಾಜ್ಯ

KKRTC ಬೀದರ್‌: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !

ವಿಜಯಪಥ ಸಮಗ್ರ ಸುದ್ದಿ

ಬೀದರ್‌: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್‌ವಿಭಾಗದಲ್ಲಿ ಅನುಕಂಪ‌ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು ಇತ್ತ ನೌಕರಿ ಇಲ್ಲದೇ ಮೃತ ಅವಲಂಬಿತ ನೌಕರರ ಮಕ್ಕಳು ಕಾದು ಕಾದು ಹೈರಾಣಾಗಿದ್ದಾರೆ.

ಇನ್ನು ಇಲ್ಲಿಯವರೆಗೆ ಕಿರಿಯ ಸಹಾಯಕ ಹುದ್ದೆ ನೀಡುವುದಾಗಿ ಹೇಳಿದ ಸಂಸ್ಥೆಯ ಅಧಿಕಾರಿಗಳು ಈಗ ದಿಢೀರನೇ ಬೇರೆ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಲು ಕೌನ್ಸಲಿಂಗ್‌ಗೆ ಹಾಜರಾಗಲು ತಿಳಿಸಿದ ಸೂಚನಾ ಪತ್ರ ಕಳುಹಿಸಿದ್ದಾರೆ. ಇದನ್ನು ಕಂಡು ಮೃತ ನೌಕರರ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ.

ಕಲ್ಯಾಣ ಕರ್ನಾಟಕದ ವಿಜಯಪುರ ವಿಭಾಗದಲ್ಲಿ ಅನುಕಂಪದ ಆಧಾರದ ಮೇಲೆ ಇತ್ತಿಚಿಗೆ ನೇಮಕ ಮಾಡಿಕೊಳ್ಳಲಾಗಿದೆ. ಆದರೆ,‌ ಬೀದರ್‌ ವಿಭಾಗದಲ್ಲಿ ನೇಮಕಾತಿ ಮಾಡಿಕೊಳ್ಳದೇ ತಾರತಮ್ಯ ಮಾಡುತ್ತೀರುವುದು ಏಕೆ ಎಂದು ತಿಳಿಯುತ್ತಿಲ್ಲ ಎಂದು ಕುಟುಂಬಸ್ಥರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಅಲ್ಲದೇ ಬೀದರ್‌ ವಿಭಾಗದಲ್ಲಿ ಒಟ್ಟು ಕಿರಿಯ ಸಹಾಯಕ ಹುದ್ದೆಗಳು 10 ಖಾಲಿ ಇದೆ. ಆದರೂ ಸಹ ನೇಮಕಾತಿ ಮಾಡಿಕೊಳ್ಳದೇ ಕಿರಿಯ ಸಹಾಯಕ ಹುದ್ದೆ ಬಿಟ್ಟು ಬೇರೆ ಹುದ್ದೆ ನಿರ್ವಹಿಸಲು ಕೌನ್ಸಿಲಿಂಗ್ ಮಾಡುತ್ತೀರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.

ಅಲ್ಲದೆ ಇದು ಸಂಸ್ಥೆಯ ಎಂಡಿ ಅವರ ಗಮನಕ್ಕೆ ಈ ಅಧಿಕಾರಿಗಳು ತಂಲದಿಲ್ಲವೇ ಅಥವಾ ಎಂಡಿ ಗೊತ್ತಿದ್ದು ಆ 10 ಹುದ್ದೆಗಳನ್ನು ಹಾಗೆ ಖಾಲಿ ಬಿಡಿಸಿ ಬೇರೆ ಹುದ್ದೆಗೆ ನೇಮಕ ಮಾಡಲು ಹೇಳಿದ್ದಾರೆ. ಹೀಗೆ ಹತ್ತು ಹಲವು ಪ್ರಶ್ನೆಗಳು ಹಾಗೂ ಅನುಮಾನಗಳನ್ನು ಹುಟ್ಟುಹಾಕುತ್ತಿದೆ ಬೀದರ್‌ ವಿಬಾಘದ ಅಧಿಕಾರಿಗಳ ನಡೆ.

ಜತೆಗೆ ಇನ್ನು ನೋಡಿದರೆ ಆಡಳಿತದಲ್ಲಿ ಕೊರತೆ ಇದ್ದರು ಸುಧಾರಣೆ ಮಾಡಿಕೊಳ್ಳುವ ಇಚ್ಛಾ ಶಕ್ತಿ ಸರ್ಕಾರಕ್ಕೆ ಇಲ್ಲವೇ ಅಥವಾ ನಿಗಮಕ್ಕೆ ಇಲ್ಲವೇ ಎಂಬ ಪ್ರಶ್ನೆ ಕೂಡ ಕಾಡುತ್ತಿದೆ. ಕಾರಣ ಅನುಕಂಪದ ಆಧಾರದ ಮೇಲೆ ಕಿರಿಯ ಸಹಾಯಕ ಹುದ್ದೆಗಳಿಗೆ ನೇಮಕಾತಿಯಲ್ಲಿ ವಿಭಾಗಗಳಿಂದ ವಿಭಾಗಕ್ಕೆ ಈ ತಾರತಮ್ಯ ಎಸಗುತ್ತಿರುವುದು ಏಕೆ? ಇನ್ನಾದರು ಇದನ್ನು ಬಿಟ್ಟು ಸಮಾನತೆ ಕಾಪಾಡಬೇಕೆಂದು ಮೃತ ನೌಕರರ ಕುಟುಂಬದವರು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...