NEWSಉದ್ಯೋಗನಮ್ಮರಾಜ್ಯ

KKRTC ಕಂಡಕ್ಟರ್‌ ಮಗ ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶಕ್ಕೆ 41ನೇ ರ‍್ಯಾಂಕ್‌

ವಿಜಯಪಥ ಸಮಗ್ರ ಸುದ್ದಿ

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರ ಮಗ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪರೀಕ್ಷೆಯಲ್ಲಿ ದೇಶಕ್ಕೆ 41ನೇ ರ‍್ಯಾಂಕ್‌ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ತಾಲೂಕಿನ ಕರಡಕಲ್ ಗ್ರಾಮದ ನಿವಾಸಿ, ಕೆಕೆಆರ್‌ಟಿಸಿ ಬಸ್‌ ಕಂಡಕ್ಟರ್‌ ಬಸವರಾಜ ಅವರ ಪುತ್ರ ಆನಂದಕುಮಾರ ನಾಗರಾಳ ಅವರೆ ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶಕ್ಕೆ 41ನೇ ರ‍್ಯಾಂಕ್‌ ಪಡೆಯುವ ಮೂಲಕ ಸಾಧನೆ ಮಾಡಿರುವವರು.

ಆನಂದಕುಮಾರ ಅವರ ತಂದೆ ಬಸವರಾಜ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರೆ. ತಾಯಿ ಟೇಲರಿಂಗ್ ಮಾಡುತ್ತಿದ್ದಾರೆ. ಇನ್ನು ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗಲೇ ಆನಂದಕುಮಾರ ಐಎಎಸ್ ಅಧಿಕಾರಿಯಾಗುವ ಕನಸು ಕಂಡಿದ್ದರು.

ಅವರು ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಪಡೆದು, 10ನೇ ತರಗತಿವರೆಗೆ ಓದಿ ಮುಂದೆ ಪಿಯುಸಿಯನ್ನು ಬಳ್ಳಾರಿಯಲ್ಲಿ ಹಾಗೂ ಬಿ.ಎಸ್‌ಸಿ, ಎಂ.ಎಸ್‌ಸಿಯನ್ನು ಧಾರವಾಡದಲ್ಲಿ ಪೂರ್ಣಗೊಳಿಸಿದ್ದಾರೆ.

ಇನ್ನು ಯುಪಿಎಸ್‌ಸಿ ಪರೀಕ್ಷೆಗಾಗಿ ದೆಹಲಿ, ಬೆಂಗಳೂರಿನಲ್ಲಿ ಕೋಚಿಂಗ್ ಪಡೆದುಕೊಂಡು ಮೇನ್ಸ್‌ವರೆಗೂ ಹೋಗಿದ್ದರೂ ಆದರೆ ಐಎಎಸ್ ಅಧಿಕಾರಿಯಾಗುವ ಆಸೆ ಕೈಗೂಡಲಿಲ್ಲ. ಬಳಿಕ ಐಎಫ್‌ಎಸ್ ಪರೀಕ್ಷೆಯಲ್ಲಿ ಎರಡು ಪ್ರಯತ್ನದಲ್ಲಿ ವಿಫಲರಾದರು. ಆದರೂ ಛಲಬಿಡದೆ ಮತ್ತೆ ಕಠಿಣ ಪರಿಶ್ರಮದ ಮೂಲಕ ಮೂರನೇ ಪ್ರಯತ್ನದಲ್ಲಿ ಸಾಧನೆ ಮಾಡುವ ಮೂಲಕ ದೇಶಕ್ಕೆ 41ನೇ ರ‍್ಯಾಂಕ್‌ ಗಳಿಸಿ ಆನಂದಕುಮಾರ ಗುರಿ ತಲುಪಿದ್ದಾರೆ.

ತುಂಬು ಹೃದಯದ ಧನ್ಯವಾದ: ನಮ್ಮ ಸರ್ಕಾರಿ ಆದರ್ಶ ವಿದ್ಯಾಲಯ ಲಿಂಗಸೂಗೂರ ಶಾಲೆಯ ಪ್ರಥಮ ಬ್ಯಾಚಿನ ವಿದ್ಯಾರ್ಥಿ ಆನಂದ ಕುಮಾರ ಯುಪಿಎಸ್‌ಸಿಯ IFS ಪರೀಕ್ಷೆಯಲ್ಲಿ 41ನೇ ರ‍್ಯಾಂಕ್‌ ಪಡೆದು ನಮ್ಮ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗೆ ವಿದ್ಯಾಲಯದ ಪರವಾಗಿ ತುಂಬು ಹೃದಯದ ಧನ್ಯವಾದಗಳು ಎಂದು ಶಾಲೆಯ ಎಚ್‌ಒಡಿ ಅಭಿನಂದಿಸಿದೆ.

ಸಾರಿಗೆ ನೌಕರರ ಶುಭಾಶಯ: ಐಎಫ್‌ಎಸ್ ಪರೀಕ್ಷೆಯಲ್ಲಿ ದೇಶಕ್ಕೆ 41ನೇ ರಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿರುವ ನೀವು ತಂದೆ-ತಾಯಿ ಹಾಗೂ ಸಾರಿಗೆ ನಿಗಮಕ್ಕೆ ಹೆಸರು ತಂದಿದ್ದೀರಿ. ಜತೆಗೆ ಸಾರಿಗೆ ಸಿಬ್ಬಂದಿ, ಅಧಿಕಾರಿಗಳಿಗೂ “ಆನಂದ”ವನ್ನು ತಂದಿದ್ದೀರಿ ನಿಮಗೆ ಶುಭವಾಗಲಿ ಎಂದು ಸಾರಿಗೆ ನೌಕರರು ಶುಭಕೋರಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...