NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಡಬಲ್ ಡ್ಯೂಟಿ, ದೂರದ ಪ್ರಯಾಣಕ್ಕೆ ವಿಶ್ರಾಂತಿ ಕಡ್ಡಾಯ ಆದರೆ ದೇವದುರ್ಗ ಘಟಕದ ನೌಕರರಿಗೆ ಮರೀಚಿಕೆ!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: KSRTC ಬಸ್ ಚಾಲಕರಿಗೆ ಡಬಲ್ ಡ್ಯೂಟಿ ಹೊರೆಯಿಂದ ಮುಕ್ತಿ ಸಿಕ್ಕಿದೆ. ಈ ಕುರಿತಂತೆ ಸಂಸ್ಥೆ ಆದೇಶ ಹೊರಡಿಸಿದ್ದು, ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದೆ. ಆದರೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲಕರಿಗೆ ಡಬಲ್ ಡ್ಯೂಟಿ ಹೊರೆಯಿಂದ ಇನ್ನೂ ಮುಕ್ತಿ ಸಿಕ್ಕಿಲ್ಲ!!

ಹೌದು! ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ರಾತ್ರಿ ಮತ್ತು ದೂರದ ಪ್ರಯಾಣಕ್ಕೆ ಓಡಿಸುವ ಚಾಲಕರು ಪ್ರಯಾಣದ ಬಳಿಕ ವಿಶ್ರಾಂತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಸತತ ಎಂಟು ಗಂಟೆಗಳಿಗಿಂತ ಹೆಚ್ಚು ಕಾಲ ಡ್ಯೂಟಿ ಮಾಡಿಸುವಂತಿಲ್ಲ. 8 ಗಂಟೆಗಳಿಗಿಂತ ಅಧಿಕ ಮತ್ತು ರಾತ್ರಿ ಪಾಳಿಯಲ್ಲಿ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕರಿಂದ ಐದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಸೂಚನೆ ನೀಡಿದೆ.

ಕೆಎಸ್‌ಆರ್‌ಟಿಸಿ ಬಸ್‌ಗಳಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇದಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಡಬಲ್ ಡ್ಯೂಟಿ ಮತ್ತು ರಾತ್ರಿ ವೇಳೆ ವಿಶ್ರಾಂತಿ ನೀಡದಿರುವುದರಿಂದ ನಿದ್ದೆಗೆಟ್ಟು ಬಸ್ ಚಲಾಯಿಸಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಮಿತಿಯು ಕೆಎಸ್‌ಆರ್‌ಟಿಸಿಗೆ ವರದಿ ಸಲ್ಲಿಸಿತ್ತು.

ಆದರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ರಾಯಚೂರು ವಿಭಾಗದ ದೇವದುರ್ಗ ಘಟಕದಲ್ಲಿ ಚಾಲಕರಿಗೆ ಡಬಲ್ ಡ್ಯೂಟಿ ಹೊರೆಯಿಂದ ಮುಕ್ತಿ ಸಿಕ್ಕಿಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರು ಕೂಡ ರಾತ್ರಿ ಪಾಳೆಯಲ್ಲಿ ಕನಿಷ್ಠ 1050 ಕಿಮೀಗಿಂತಲೂ ಹೆಚ್ಚು ಕಿಲೋಮಿಟರ್ ಇರುತ್ತದೆ.

ಇನ್ನು ಕೆಲವು ವೇಳೆ 1100 ಕಿಮೀ ಇರುತ್ತದೆ. ಈ ಮೊದಲು ರಾತ್ರಿ ಪಾಳೆಯಲ್ಲಿ ಇಬ್ಬರು ಚಾಲಕರು ಒಬ್ಬರು ನಿರ್ವಾಹಕರನ್ನು ಕೊಡುತ್ತಿದ್ದರು. ಈಗ ಅಂದರೆ ಸುಮಾರು ಒಂದು ವರ್ಷದಿಂದಲೂ ಒಬ್ಬ ಚಾಲಕ ಒಬ್ಬ ಚಾಲಕ ಕಂ ನಿರ್ವಾಹಕರನ್ನು ರೊಟ್ ರೊಟೇಶನ್‌ನಲ್ಲಿ ಕೊಡುತ್ತಿದ್ದಾರೆ.

ಎರಡು ಮೂರು ಸಲ ರಾತ್ರಿ ಪಾಳೆಯಲ್ಲಿ ಅನಾಹುತ ಆದರೂ ಕೂಡ ಅಧಿಕಾರಿಗಳ ನಿರ್ಲಕ್ಷತನದಿಂದ ದೇವದುರ್ಗ ಘಟಕದಲ್ಲಿ ರಾತ್ರಿ ಪಾಳೆಯಲ್ಲಿ ಒಬ್ಬ ಚಾಲಕ, ಒಬ್ಬ ಚಾಲಕ ಕಂ ನಿರ್ವಾಹಕರನ್ನು ನೇಮಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ಸಂಘಟನೆಗಳ ಗಮನಕ್ಕೆ ತಂದರು ಕೂಡ ಯಾವುದೇ ಪ್ರಯೋಜನವಾಗಿಲ್ಲ.

ಈ ಪದ್ಧತಿಯನ್ನು ದೇವದುರ್ಗ ಘಟಕದ ವ್ಯವಸ್ಥಾಪಕರು ಮುಂದುವರಿಸುತ್ತಿದ್ದಾರೆ. ರಾಯಚೂರು ವಿಭಾಗದಿಂದ ರಾಯಚೂರು ಟು ಬೆಂಗಳೂರು ಹಾಗೂ ದೇವದುರ್ಗ ಟು ಬೆಂಗಳೂರು ಹಾಗೂ ದೇವದುರ್ಗ ಟು ಪುನಾ ಎಲ್ಲ ರಾತ್ರಿ ಪಾಳೆಯನ್ನು ಇದೇ ವ್ಯವಸ್ಥೆಯಡಿಯಲ್ಲೇ ನಡೆಯುತ್ತಿದೆ.

ಹೀಗಾಗಿ  ಇದರ ಬಗ್ಗೆ ಸೂಕ್ತ ಅಧಿಕಾರಿಗಳು ಗಮನ ಹರಿಸಿ ಈ ಮೊದಲು ಇದಂತೆ ಇಬ್ಬರು ಚಾಲಕರು ಒಬ್ಬ ನಿರ್ವಾಹಕರನ್ನು ನಿಯೋಜಿಸಬೇಕು ಎಂದು ಘಟಕದ ನೊಂದ ಚಾಲನಾ ಸಿಬ್ಬಂದಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...