ಲಿಂಗಸುಗೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಲಿಂಗಸುಗೂರು ಘಟಕದ ಘಟಕದ ವ್ಯವಸ್ಥಾಪಕ ಕಿರುಕುಳ ನೀಡಿದ್ದರಿಂದ ಮನನೊಂದು ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಡಿಪೋನಲ್ಲೇ ನಡೆದಿದೆ.
ಈ ಘಟನೆ ಗುರುವಾರ ಸಂಜೆ ನಡೆದಿದ್ದು, ಕೆಕೆಆರ್ಟಿಸಿ ರಾಯಚೂರು ವಿಭಾಗದ ಲಿಂಗಸುಗೂರು ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಬ್ದುಲ್ ಶಿರೂರು ಎಂಬುವರೆ ವಿಷ ಸೇವಿಸಿದ ಚಾಲಕ. ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಹೈದರಾಬಾದ್ ಮಾರ್ಗದಲ್ಲಿ ಡ್ಯೂಟಿ ಮಾಡುವ ಅಬ್ದುಲ್ ಶಿರೂರು ಅವರನ್ನು ಘಟಕದ ವ್ಯವಸ್ಥಾಪಕ ರಾಹುಲ್ ಹೊನಸೂರೆ ಅವರು ಬೇರೆ ಮಾರ್ಗದಲ್ಲಿ ಡ್ಯೂಟಿ ಮಾಡುವಂತೆ ಹೇಳಿದ್ದಾರೆ. ಅಲ್ಲದೆ ಹಳೇ ಬಸ್ ಕೊಟ್ಟು ಈ ಬಸ್ನಲ್ಲೇ ಡ್ಯೂಟಿ ಮಾಡಬೇಕು ಎಂದು ದಮ್ಕಿ ಹಾಕಿದ್ದಾರೆ. ಈ ವೇಳೆ ಘಟಕದ ಗೇಟಿನಲ್ಲಿ ವಾಗ್ವಾದ ನಡೆದಿದ್ದು ಬಳಿಕ ಮನನೊಂದ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇತ್ತ ಸೇವಾ ಹಿರಿತನ ಪರಿಗಣಿಸಿ ಆರು ತಿಂಗಳ ಕಾಲ ಒಂದೇ ಮಾರ್ಗದಲ್ಲಿ ಡ್ಯೂಟಿ ಮಾಡಲು ಘಟಕ ವ್ಯವಸ್ಥಾಪಕರೇ ಕೌನ್ಸಿನಿಂಗ್ನಲ್ಲಿ ಡ್ಯೂಟಿ ರೋಟ ಕೊಟ್ಟಿದ್ದಾರೆ. ಅದರಂತೆ ನಾನು ಹೈದರಾಬಾದ್ ಮಾರ್ಗದ ಡ್ಯೂಟಿ ಆಯ್ಕೆ ಮಾಡಿಕೊಂಡು ಕೆಲಸ ಮಾಡುತ್ತಿದ್ದೇನೆ. ಡ್ಯೂಟಿ ಸಂದರ್ಭದಲ್ಲಿ ಕೆಎಂಪಿಎಲ್ ತರುವಂತೆ ಹಾಗೂ ಹೈದರಾಬಾದ್ ತಲುಪಿದ ನಂತರ ಡೇ ಡ್ಯೂಟಿ ಸೇರಿದಂತೆ ಹಲವು ರೀತಿಯಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ.
ಹೀಗಿದ್ದರೂ ಇಷ್ಟು ದಿನ ಸಹಿಸಿಕೊಂಡಿದ್ದೆ. ಇಂದು ರಾತ್ರಿ ಹೈದರಾಬಾದ್ಗೆ ಹೋಗಿ ಬೆಳಗ್ಗೆ ವಾಪಸ್ ಬರುವಂತೆ ಹೇಳಿದರು. ವಿಶ್ರಾಂತಿ ಇಲ್ಲದೇ ಡ್ಯೂಟಿ ಮಾಡಲು ನನ್ನಿಂದ ಆಗಲ್ಲ ಎಂದಾಗ ಅಮಾನತು ಮಾಡುವುದಾಗಿ ಬೆದರಿಸಿದರು. ಇದರಿಂದ ನೊಂದು ಕ್ರಿಮಿನಾಶಕ ಸೇವಿಸಿದ್ದೇನೆ. ವ್ಯವಸ್ಥಾಪಕರನ್ನು ಅಮಾನತು ಮಾಡಬೇಕು. ಉಳಿದ ಚಾಲಕರು ನೆಮ್ಮದಿಯಿಂದ ಕೆಲಸ ಮಾಡುವಂತಾಗಬೇಕು ಎಂದು ಚಾಲಕ ಅಬ್ದುಲ್ ಶಿರೂರು ಹೇಳಿದ್ದಾರೆ.
ಘಟಕದ ವ್ಯವಸ್ಥಾಪಕರ ಕಿರುಕುಳದಿಂದ ಬೇಸತ್ತು ಐದು ತಿಂಗಳ ಹಿಂದೆ ಚಾಲಕ ಮಹ್ಮದ್ ರಫಿ ಎಂಬುವರು ಕುಟಂಬ ಸಮೇತ ಬಂದು ಘಟಕದ ಎದುರು ವಿಷ ಕುಡಿಯಲು ಯತ್ನಿಸಿದ್ದರು. ಅಲ್ಲದೆ ಇತ್ತೀಚೆಗೆ ವಿದ್ಯಾರ್ಥಿಗಳು ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ ಬಸ್ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ್ದರೆ, ಶಾಲೆ ಕಲಿಲಿಕೆ ಹಣಕೊಟ್ಟು ಹೋಗುತ್ತೀರಿ ಬಸ್ ಮಾತ್ರ ನಿಮಗೆ ಫ್ರೀಯಾಗಿ ಬೇಕಾ ಎಂದು ಅಸಭ್ಯವಾಗಿ ವರ್ತಿಸಿದ ಈ ಡಿಎಂ.
ಇದಿಷ್ಟೆ ಅಲ್ಲದೆ ಚಾಲಕರಿಗೆ ನೀವು ಡೀಸೆಲ್ ಕುಡಿಸಿಕೊಂಡು ಬಸ್ ತರುತ್ತೀರಿ ನಿಮಗೆ ಬಸ್ ಓಡಿಸುವುದಕ್ಕೆ ಬರುವುದಿಲ್ಲ ಎಂದು ಚಾಲಕರ ವೇತನದಲ್ಲಿ ಡೀಸೆಲ್ ಹಣವನ್ನು ಕಡಿತ ಮಾಡಿಕೊಳ್ಳುವಂತ ನಡೆಯನ್ನು ತೋರಿದ್ದಾರೆ ಈ ಡಿಎಂ ಇಷ್ಟಾದರೂ ಕೂಡ ಮೇಲಧಿಕಾರಿಗಳು ಈತನ ಬಗ್ಗೆ ಯಾವುದೇ ರೀತಿಯ ಸಂಸ್ಥೆಯಲ್ಲಿ ಶಿಸ್ತು ಕ್ರಮ ತೆಗೆದುಕೊಂಡಿಲ್ಲ ಎಂದು ಘಟಕದ ನೌಕರರು ಆರೋಪಿಸಿದ್ದಾರೆ.
Related

You Might Also Like
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...