ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC ಬಸ್ ಚಾಲಕರೊಬ್ಬರು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ 5 ಸಾವಿರ ರೂಪಾಯಿ ದಂಡ ಕಟ್ಟಿರುವ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.
ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವ ( Using mobile Phone while driving) ಪ್ರಕರಣದಡಿ 5 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಪೊಲೀಸರು.
ಸಂಸ್ಥೆಯ ಬಸ್ ಚಾಲಕ ಮೊಬೈಲ್ ನೋಡಿಕೊಂಡು ಆ.27ರಂದು ಬಸ್ ಚಾಲನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಚಾಲಕನ ಪತ್ತಹಚ್ಚಿ ದಂಡ ವಿಧಿದ್ದಾರೆ.
ಇನ್ನು ವೈರಲ್ ಆಗಿರುವ ವಿಡಿಯೋ ಸಂಬಂಧ ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಸತ್ಯಾಸತ್ಯೆಯ ಬಗ್ಗೆ ಪರಿಶೀಲಿಸಿದ್ದು, ಬಸ್ ಚಾಲಕನನ್ನು ಪತ್ತೆ ಮಾಡಿ, ಚಾಲಕನಿಗೆ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆಯಿಂದ ಆಗುವ ಅನಾಹುತಗಳ ಬಗ್ಗೆ ತಿಳಿ ಹೇಳಿದ್ದಾರೆ.
ಅಲ್ಲದೆ ಚಾಲಕನ ವಿರುದ್ಧಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸ್ಥಳದಂಡ ಪ್ರಕರಣ ದಾಖಲಿಸಿ 5000 ರೂ.ಗಳನ್ನು ದಂಡ ವಿಧಿಸಿದ್ದು ಆ ದಂಡವನ್ನು ಚಾಲಕ ಕಟ್ಟಿ ರಶೀದಿ ಪಡೆದುಕೊಂಡಿದ್ದಾರೆ.
ಸಾರಿಗೆ ಸಂಸ್ಥೆಯ ಚಾಲಕರು ಸೇರಿದಂತೆ ಜಿಲ್ಲೆಯ ಎಲ್ಲ ವಾಹನ ಚಾಲಕರು, ತಮ್ಮ ವಾಹನವನ್ನು ಚಲಾಯಿಸುವಾಗ ಮೊಬೈಲ್ ಫೋನ್ ಬಳಸಬಾರದು, ಒಂದು ವೇಳೆ ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಾಗುವುದು ಎಂದು ಈ ಮೂಲಕ ಎಚ್ಚರಿಸಿದ್ದಾರೆ.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...