NEWSನಮ್ಮಜಿಲ್ಲೆನಮ್ಮರಾಜ್ಯ

KKRTC: ಮೊಬೈಲ್‌ ನೋಡಿಕೊಂಡು ಬಸ್‌ ಚಾಲನೆ – ₹5 ಸಾವಿರ ದಂಡ ಕಟ್ಟಿದ ಚಾಲಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC ಬಸ್ ಚಾಲಕರೊಬ್ಬರು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ 5 ಸಾವಿರ ರೂಪಾಯಿ ದಂಡ ಕಟ್ಟಿರುವ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.

ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವ (  Using mobile Phone while driving) ಪ್ರಕರಣದಡಿ  5 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಪೊಲೀಸರು.

ಸಂಸ್ಥೆಯ ಬಸ್ ಚಾಲಕ ಮೊಬೈಲ್‌ ನೋಡಿಕೊಂಡು ಆ.27ರಂದು ಬಸ್‌ ಚಾಲನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಚಾಲಕನ ಪತ್ತಹಚ್ಚಿ ದಂಡ ವಿಧಿದ್ದಾರೆ.

ಇನ್ನು ವೈರಲ್ ಆಗಿರುವ ವಿಡಿಯೋ ಸಂಬಂಧ ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಸತ್ಯಾಸತ್ಯೆಯ ಬಗ್ಗೆ ಪರಿಶೀಲಿಸಿದ್ದು, ಬಸ್ ಚಾಲಕನನ್ನು ಪತ್ತೆ ಮಾಡಿ, ಚಾಲಕನಿಗೆ ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆಯಿಂದ ಆಗುವ ಅನಾಹುತಗಳ ಬಗ್ಗೆ ತಿಳಿ ಹೇಳಿದ್ದಾರೆ.

ಅಲ್ಲದೆ ಚಾಲಕನ ವಿರುದ್ಧಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸ್ಥಳದಂಡ ಪ್ರಕರಣ ದಾಖಲಿಸಿ 5000 ರೂ.ಗಳನ್ನು ದಂಡ ವಿಧಿಸಿದ್ದು ಆ ದಂಡವನ್ನು ಚಾಲಕ ಕಟ್ಟಿ ರಶೀದಿ ಪಡೆದುಕೊಂಡಿದ್ದಾರೆ.

ಸಾರಿಗೆ ಸಂಸ್ಥೆಯ ಚಾಲಕರು ಸೇರಿದಂತೆ ಜಿಲ್ಲೆಯ ಎಲ್ಲ ವಾಹನ ಚಾಲಕರು, ತಮ್ಮ ವಾಹನವನ್ನು ಚಲಾಯಿಸುವಾಗ ಮೊಬೈಲ್‌ ಫೋನ್‌ ಬಳಸಬಾರದು, ಒಂದು ವೇಳೆ ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಾಗುವುದು ಎಂದು ಈ ಮೂಲಕ ಎಚ್ಚರಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?