CrimeNEWSನಮ್ಮಜಿಲ್ಲೆ

KKRTC: ಮೊಬೈಲ್‌ ನೋಡಿಕೊಂಡು ಬಸ್‌ ಚಾಲನೆ – ₹5 ಸಾವಿರ ದಂಡ ಕಟ್ಟಿದ ಚಾಲಕ

ವಿಜಯಪಥ ಸಮಗ್ರ ಸುದ್ದಿ

ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC ಬಸ್ ಚಾಲಕರೊಬ್ಬರು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ 5 ಸಾವಿರ ರೂಪಾಯಿ ದಂಡ ಕಟ್ಟಿರುವ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.

ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವ ( Using mobile Phone while driving) ಪ್ರಕರಣದಡಿ 5 ಸಾವಿರ ರೂಪಾಯಿ ದಂಡ ಹಾಕಿದ್ದಾರೆ ಪೊಲೀಸರು.

ಸಂಸ್ಥೆಯ ಬಸ್ ಚಾಲಕ ಮೊಬೈಲ್‌ ನೋಡಿಕೊಂಡು ಆ.27ರಂದು ಬಸ್‌ ಚಾಲನೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಚಾಲಕನ ಪತ್ತಹಚ್ಚಿ ದಂಡ ವಿಧಿದ್ದಾರೆ.

ಇನ್ನು ವೈರಲ್ ಆಗಿರುವ ವಿಡಿಯೋ ಸಂಬಂಧ ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆ ಅಧಿಕಾರಿಗಳು ಸತ್ಯಾಸತ್ಯೆಯ ಬಗ್ಗೆ ಪರಿಶೀಲಿಸಿದ್ದು, ಬಸ್ ಚಾಲಕನನ್ನು ಪತ್ತೆ ಮಾಡಿ, ಚಾಲಕನಿಗೆ ವಾಹನ ಚಾಲನೆ ಮಾಡುವಾಗ ಮೊಬೈಲ್‌ ಬಳಕೆಯಿಂದ ಆಗುವ ಅನಾಹುತಗಳ ಬಗ್ಗೆ ತಿಳಿ ಹೇಳಿದ್ದಾರೆ.

ಅಲ್ಲದೆ ಚಾಲಕನ ವಿರುದ್ಧಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುವ ಮೂಲಕ ರಸ್ತೆ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಸ್ಥಳದಂಡ ಪ್ರಕರಣ ದಾಖಲಿಸಿ 5000 ರೂ.ಗಳನ್ನು ದಂಡ ವಿಧಿಸಿದ್ದು ಆ ದಂಡವನ್ನು ಚಾಲಕ ಕಟ್ಟಿ ರಶೀದಿ ಪಡೆದುಕೊಂಡಿದ್ದಾರೆ.

ಸಾರಿಗೆ ಸಂಸ್ಥೆಯ ಚಾಲಕರು ಸೇರಿದಂತೆ ಜಿಲ್ಲೆಯ ಎಲ್ಲ ವಾಹನ ಚಾಲಕರು, ತಮ್ಮ ವಾಹನವನ್ನು ಚಲಾಯಿಸುವಾಗ ಮೊಬೈಲ್‌ ಫೋನ್‌ ಬಳಸಬಾರದು, ಒಂದು ವೇಳೆ ಕಂಡು ಬಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಾಗುವುದು ಎಂದು ಈ ಮೂಲಕ ಎಚ್ಚರಿಸಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!