KKRTC: ಚಲಿಸುತ್ತಿದ್ದ ಬಸ್ನಿಂದ ಜಿಗಿದ ವಿದ್ಯಾರ್ಥಿಗೆ ಬುದ್ಧಿ ಹೇಳಲು ಹೋದ ಚಾಲಕನ ಮೇಲೆಯೇ ಮನಬಂದಂತೆ ಹಲ್ಲೆ- ಮೂರ್ಚೆ ಹೋದ ಚಾಲಕ
ಬೀದರ್: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆ ಸಮೀಪ ಬಸ್ ಬರುತ್ತಿದ್ದಂತೆ ಚಲಿಸುತ್ತಿದ್ದ ಬಸ್ನಿಂದ ಜಂಪ್ ಮಾಡಿದ್ದಕ್ಕೆ ಬಸ್ನಿಲ್ಲಿಸಿ ಬುದ್ಧಿ ಹೇಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಾಲನಿಗೆ ಮೂರ್ಚೆ ಹೋಗುವ ರೀತಿಯಲ್ಲಿ ವಿದ್ಯಾರ್ಥಿಯ 7-8 ಮಂದಿ ಸಂಬಂಧಿಕರು ಹಾಗೂ ಅಕ್ಕಪಕ್ಕದವರು ಮನ ಬಂದಂತೆ ಹಲ್ಲೆ ಮಾಡಿರುವ ಘಟನೆ ನಗರದ ಚಿಕ್ಕಪೇಟ್ ಬಳಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬೀದರ್ ವಿಭಾಗದ ಬೀದರ್ 1ನೇ ಘಟಕದ ಚಾಲಕ ಉಮೇಶ್ ಹಲ್ಲೆಗೊಳಗಾಗಿ ಮೂರ್ಚೆ ಹೋದ ಚಾಲಕ. ಸದ್ಯ ಸಹೋದ್ಯೋಗಿ ನಿರ್ವಾಹಕ ವಿಜಯಕುಮಾರ್ ಅವರು ಉಮೇಶ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಲಿಸುತ್ತಿದ್ದ ಬಸ್ ಮನೆ ಸಮೀಪ ಬಂದಿದೆ ಎಂದು ತಿಳಿದ ಕೂಡಲೇ ಜಂಪ್ ಮಾಡಿದ್ದು ವಿದ್ಯಾರ್ಥಿ. ಆತನಿಗೆ ಬುದ್ಧಿ ಹೇಳಬೇಕಾದವರು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಇದು ಎಂಥಾ ಅನ್ಯಾಯ ನೋಡಿ. ಆ ಹುಡುಗನ ಕಡೆಯ ಜನರೇ ಚಾಲಕನನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಅಲ್ಲದೆ ನಂತರ ಅವರೇ ಚಾಲಕ ಮೇಲೆ ದೂರು ಕೊಡುತ್ತಾರೆ ಎಂದರೆ ನ್ಯಾಯ ಎಲ್ಲಿದೆ?
ಇತ್ತ ಚಾಲಕ ಕೂಡ ಎಫ್ಐಆರ್ ದಾಖಲಿಸಿದ್ದಾರೆ. ಇದು ಜು.7ರಂದು ನಡೆದಿರುವ ಘಟನೆ ಆದರೆ ಎಫ್ಐಆರ್ ಆಗಿರುವುದು ಜು.11ರಂದು. ಅಂದು ಹುಡುಗ ಹುಚ್ಚಾಟ ಮಾಡಿ ಚಲಿಸುವ ಬಸ್ಸಿನಿಂದ ಅವನ ಮನೆಯ ಹತ್ತಿರವೇ ಜಿಗಿದ. ( ಅದೃಷ್ಟ, ಅಲ್ಲಿ ಹಂಪ್ ಇದ್ದ ಕಾರಣ ಬಸ್ ಸ್ಲೋ ಇತ್ತು. ಈ ವೇಳೆ ಹುಡುಗನ ತಲೆಗೆ ಅಲ್ಪ ಮಟ್ಟಿಗೆ ಪೆಟ್ಕೂಡ ಆಗಿದೆ) ನಂತರದಲ್ಲಿ ಆ ಬಸ್ಸನ್ನು ಪಕ್ಕಕ್ಕೆ ನಿಲ್ಲಿಸಿ ಚಾಲಕ ಬಂದು ಹುಡುಗನಿಗೆ ಈ ತರಹ ಮಾಡಿದಿಯಲ್ಲ ನಿನಗೆ ಏನಾದರೂ ಅನಾಹುತವಾಗಿದ್ದರೆ ನನ್ನ ಕೆಲಸವೂ ಹೋಗುತ್ತಿತ್ತು. ಇದಕ್ಕೆ ಯಾರು ಜವಾಬ್ದಾರಿ ಎಂದು ಗದರಿಸಿದ್ದಾರೆ. ಆ ವೇಳೆ ವಿದ್ಯಾರ್ಥಿಯ ಕುಟುಂಬದವರು ಜತೆಗೆ ಅಕ್ಕಪಕ್ಕದವರು ಸೇರಿಕೊಂಡು ಚಾಲಕನನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ.
ಹಲ್ಲೆಗೊಳಗಾದ ಚಾಲಕ ಉಮೇಶ್ನನ್ನು ನಿರ್ವಾಹಕ ವಿಜಯಕುಮಾರ್ ಚಿಕಿತ್ಸೆಗಾಗಿ ಔರಾದ ಕಡೆಯಿಂದ ಬರುತ್ತಿದ್ದ ಬಸ್ ತಡೆದು ನಿಲ್ಲಿಸಿ ಆ ಬಸ್ನಲ್ಲೇ ಮಲಗಿಸಿಕೊಂಡು ಬೀದರ್ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು ಮಾಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ವಾಸು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ 5 ದಿನಗಳ ವರೆಗೆ ಚಿಕಿತ್ಸೆ ಬಡೆದು ಬಳಿಕ ಮನೆಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಚಾಲಕ ಉಮೇಶ್.
ಈ ನಡುವೆ ವಾಸ್ತವ ಸಂಗತಿಯನ್ನು ಬಚ್ಚಿಟ್ಟು ಮಕ್ಕಳ ಆಯೋಗಕ್ಕೆ ವಿದ್ಯಾರ್ಥಿಯ ಕಡೆಯವರು ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಒಟ್ಟಾರೆ ಶಕ್ತಿ ಯೋಜನೆ ಬಂದಮೇಲೆ ನೂರಾರು ಜನರನ್ನು ಹಗಲಿರುಳು ಬಂದೆಡೆಯಿಂದ ಮತ್ತೊಂದು ಸ್ಥಳಕ್ಕೆ ಸುರಕ್ಷಿತವಾಗಿ ತಲುಪಿಸಲು ಚಾಲನಾ ಸಿಬ್ಬಂದಿಗಳು ಪರದಾಡುತ್ತಿರುವ ಪರಿಸ್ಥಿತಿ ತಮಗೂ ಪ್ರತಿಯೊಬ್ಬರಿಗೂ ಗೊತ್ತಿದೆ. ಇಂಥದರಲ್ಲಿ ಹೇಳದೇ ಕೇಳದೆ ಒಂದೇ ಸಮನೆ ಬಸ್ಸಿಂದ ಜಿಗಿದಾಗ ಅನಾಹುತವಾದಲ್ಲಿ ಮಾಡದ ತಪ್ಪಿನಿಂದ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಲು ಹೋದ ಚಾಲಕನಿಗೆಅದು ಸಮವಸ್ತ್ರದ ಮೇಲಿರುವ ಸಾರ್ವಜನಿಕ ಸೇವಕನಿಗೆ ಆ ವಿದ್ಯಾರ್ಥಿಯ ಕುಟುಂಬದವರು ಈ ರೀತಿ ಥಳಿಸಿರುವುದು ನ್ಯಾಯವೇ?
ಇದಕ್ಕೆ ಆರಕ್ಷಕರು ಕೂಡ ಸೂಕ್ತ ನ್ಯಾಯ ದೊರಕಿಸಿಕೊಡುವಲ್ಲಿ ಕಾನೂನಾತ್ಮಕವಾಗಿ ಕ್ರಮ ಜರುಗಿಸಬೇಕು ಎಂದು ಬೀದರ್ ವಿಭಾಗದ ಸಾರಿಗೆ ಅಧಿಕಾರಿಗಳು/ ನೌಕರರು ಒತ್ತಾಯ ಮಾಡಿದ್ದು, ಪೊಲೀಸರಿಂದ ನಮಗೆ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.
Related

You Might Also Like
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...
KSRTC: ಆಗಸ್ಟ್ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
ಆ.5ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ....
ಚಲಿಸುತ್ತಿದ್ದ ಬಸ್ನಲ್ಲೇ ಗಂಡು ಮಗುವಿಗೆ ಜನ್ಮನೀಡಿ ಕಿಟಕಿಯಿಂದ ಎಸೆದ ಪಾಪಿ ತಾಯಿ
ಮುಂಬೈ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಬಸ್ನಲ್ಲೇ ಮಗುವಿಗೆ ಜನ್ಮನೀಡಿ ಬಳಿಕ ಕಿಟಕಿಯಿಂದ ಆ ನಮಜಾತ ಶಿಶುವನ್ನು ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ನಗರದ ಪತ್ರಿ-ಸೇಲು ರಸ್ತೆಯಲ್ಲಿ...
ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ನೀಡಲು ಪಟ್ಟು: ಡಿಸಿ ಕಚೇರಿ ಬಳಿ ರೈತ ಮುಖಂಡರ ಪ್ರತಿಭಟನೆ
ಮೈಸೂರು: 66/11 ಕೆ.ವಿ. ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ರೈತರ ಜಮೀನಿನ ಮೇಲೆ ಹಾದು ಹೋಗಿರುವುದರಿಂದ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ...
ಬಿ.ಸರೋಜಾದೇವಿ ಮೇರು ನಟಿ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ...
ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಸಿಎಂ
ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ...
KKRTC ವೋಲ್ವೋ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಚಾಲಕನ ಕಾಲಿಗೆ ತೀವ್ರಪೆಟ್ಟು
ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೋಲ್ವೋ ಬಸ್ ಹಾಗೂ ಟ್ರಕ್ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕನ ಕಾಲು ಮುರಿದಿದ್ದು,...