CRIMENEWSನಮ್ಮಜಿಲ್ಲೆ

KKRTC: ಹೊಸಪೇಟೆ ಬಸ್‌ ಗಾಜು ಪುಡಿಗಟ್ಟಿದ ಬೈಕ್‌ನಲ್ಲಿ ಬಂದ ಕಿಡಿಗೇಡಿಗಳು

ವಿಜಯಪಥ ಸಮಗ್ರ ಸುದ್ದಿ

ಗದಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗೆ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ.

ಹೊಸಪೇಟೆ ವಿಭಾಗದ ಬಸ್‌ ಹುಬ್ಬಳ್ಳಿಯಿಂದ ಹೊಸಪೇಟೆ ಬರುವಾಗ ಬಸ್‌ಗೆ ಕಲ್ಲು ತೂರಿದ್ದು ಬಸ್‌ನ ಮುಂದಿನ ಭಾಗದ ಗ್ಲಾಸ್‌ ಜಖಂ ಆಗಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಚಾಲಕ ನಾವು ಹೊಸಪೇಟೆಗೆ ಬರುತ್ತಿದ್ದಾಗ ಕಲ್ಲು ತೂರಿದರು. ಈ ವೇಳೆ ಬಸ್‌ನಲ್ಲಿ 15 ಜನ ಪ್ರಯಾಣಿಕರಿದ್ದರು. ನಾವು ಕೂಡಲೆ ಅವರನ್ನು ಇಳಿಸಿ ಬೇರೆ ಬಸ್‌ಗ ಕಳಿಸಿ ನಾವು ಗದಗಕ್ಕೆ ಬಸ್‌ ತಂದು ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಇನ್ನು ನಾವು ಬಸ್‌ಅನ್ನು ಈಗ ಇಲ್ಲಿಯೇ ಸಿಲ್ಲಿಸಿದ್ದೇವೆ. ಕಾರಣ ಮತ್ತೆ ಹೊಸಪೇಟೆಗೆ ಬಸ್‌ ತೆಗೆದುಕೊಂಡು ಹೋಗುವಾಗ ಮತ್ತೆ ಏನಾದರು ತಂದರೆ ಆದರೆ ಏನು ಮಾಡುವುದು ಎಂಬ ಭಯವಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಕೆಕೆಆರ್‌ಟಿಯ ಬಸ್‌ಗೆ ಹಾಗೂ ಇಂದು ಇದೇ ಕೆಕೆಆರ್‌ಟಿಸಿಯ ಹೊಸಪೇಟೆ ವಿಭಾಗದ ಬಸ್‌ಗೆ ಹಾಗೂ ಕೋಲಾರ ವಿಭಾಗದ ಬಸ್‌ಗೆ ಕಲ್ಲು ತೂರಿದ್ದು ಬಸ್‌ಗಳ ಗಾಜುಗಳನ್ನು ಪುಡಿಗಟ್ಟಿದ್ದಾರೆ.

ಇನ್ನು ಸರ್ಕಾರ ಹೀಗೆ ನೌಕರರ ನ್ಯಾಯಯುತ ಬೇಡಿಕೆಗೆ ಸ್ಪಂದಿಸದೆ ಹಠ ಹಿಡಿದು ಕುಳಿತರೆ ಇನ್ನಷ್ಟು ಅವಘಡಗಳು ಸಂಭವಿಸಬಹುದು ಹಾಗಾಗಿ ಕೂಡಲೇ ಸಿಎಂ ನೌಕರರ ಸಭೆ ಕರೆದು ಬೇಡಿಕೆ ಈಡೇರಿಸಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ